ಶಿಕ್ಷಕಿ ಕೊಲೆ ಪ್ರಕರಣ… ನಗರಸಭೆ ಕೌನ್ಸಿಲರ್ ಸೇರಿ ನಾಲ್ವರ ಬಂಧನ…6 ತಿಂಗಳ ನಂತರ ಆರೋಪಿಗಳು ಅಂದರ್…ಅಕ್ರಮ ಸಂಭಂಧಕ್ಕೆ ಬಲಿಯಾದ ಟೀಚರ್ …

ಶಿಕ್ಷಕಿ ಕೊಲೆ ಪ್ರಕರಣ… ನಗರಸಭೆ ಕೌನ್ಸಿಲರ್ ಸೇರಿ ನಾಲ್ವರ ಬಂಧನ…6 ತಿಂಗಳ ನಂತರ ಆರೋಪಿಗಳು ಅಂದರ್…ಅಕ್ರಮ ಸಂಭಂಧಕ್ಕೆ ಬಲಿಯಾದ ಟೀಚರ್ …

ನಂಜನಗೂಡು,ಆಗಸ್ಟ್3,Tv10 ಕನ್ನಡ
ಕೊನೆಗೂ ಹಿಂದಿ ಶಿಕ್ಷಕಿ ಕೊಲೆ ರಹಸ್ಯ ಭೇಧಿಸುವಲ್ಲಿ ನಂಜನಗೂಡು ಪೊಲೀಸರು ಯಶಸ್ವಿಯಾಗಿದ್ದಾರೆ.ನಂಜನಗೂಡು ನಗರಸಭೆ ಕೌನ್ಸಿಲರ್ ಸೇರಿದಂತೆ ನಾಲ್ವರನ್ನ ಪೊಲೀಸರು ಬಂಧಿಸಿದ್ದಾರೆ.ಶಿಕ್ಷಕಿಯೊಂದಿಗೆ ಪತಿಯ ಅಕ್ರಮ ಸಂಭಂಧಕ್ಕೆ ಬೇಸತ್ತಿದ್ದ ಕೌನ್ಸಿಲರ್ ಸುಫಾರಿ ಕೊಟ್ಟು ಕೊಲೆ ಮಾಡಿಸಿರುವುದು ವಿಚಾರಣೆ ವೇಳೆ ಬೆಳಕಿಗೆ ಬಂದಿದೆ.5 ನೇ ವಾರ್ಡಿನಿಂದ ನಗರಸಭೆಗೆ ಆಯ್ಕೆಯಾದ ಕೌನ್ಸಿಲರ್ ಗಾಯಿತ್ರಿ ಮುರುಗೇಶ್,ಭಾಗ್ಯ,ನಾಗಮ್ಮ ಮತ್ತು ಕುಮಾರ್ ಬಂಧಿತರು.ಘಟನೆ ನಡೆದು 6 ತಿಂಗಳ ನಂತರ ಆರೋಪಿಗಳನ್ನ ಬಂಧಿಸಿದ ಪೊಲೀಸರು ನಿಗೂಢ ಕೊಲೆ ರಹಸ್ಯ ಬಯಲು ಮಾಡಿದ್ದಾರೆ.

ಮಾರ್ಚ್ 9 ರಂದು ಹಿಂದಿ ಶಿಕ್ಷಕಿ ಸುಲೋಚನಾ ಎಂಬುವರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು ತನಿಖೆ ನಡೆಸಿದ ಪೊಲೀಸರು ಕೊಲೆ ಮೊಕದ್ದಮೆ ದಾಖಲಿಸಿದ್ರು.ಘಟನೆ ನಡೆದು 6 ತಿಂಗಳಾದ್ರೂ ಆರೋಪಿಗಳನ್ನ ಬಂಧಿಸದ ಪೊಲೀಸರ ಮೇಲೆ ತೀವ್ರ ಒತ್ತಡ ಬಂದಿತ್ತು.ಈ ಹಿನ್ನಲೆ ಎಸ್ಪಿ ಆರ್.ಚೇತನ್,ಎಎಸ್ಪಿ ಡಾ.ಮಾಲಿನಿ ರವರ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಗೋವಿಂದರಾಜ್ ಉಸ್ತುವಾರಿಯಲ್ಲಿ ಇನ್ಸ್ಪೆಕ್ಟರ್ ಲಕ್ಷ್ಮೀಕಾಂತ ತಳವಾರ್ ಹಾಗೂ ಸಿಬ್ಬಂದಿಗಳು ತನಿಖೆಯನ್ನ ತೀವ್ರಗೊಳಿಸಿದ್ದರು.ತನಿಖೆ ವೇಳೆ ದೊರೆತ ಸುಳಿವಿನ ಆಧಾರದ ಮೇಲೆ ಕೌನ್ಸಿಲರ್ ಗಾಯಿತ್ರಿ ಮುರುಗೇಶ್ ಹಾಗೂ ಸಂಭಂಧಿಕರನ್ನ ಅರೆಸ್ಟ್ ಮಾಡಿದ್ದಾರೆ.ಬಂಧಿತ ಗಾಯಿತ್ರಿ ಪತಿ ಮುರುಗೇಶ್ ಹಾಗೂ ಶಿಕ್ಷಕಿ ಸುಲೋಚನಾ ನಡುವೆ ಅಕ್ರಮ ಸಂಭಂಧ ಇತ್ತೆಂದು ಹೇಳಲಾಗಿದೆ.ಶ್ರೀಕಂಠೇಶ್ವರನ ದೇವಾಲಯದಲ್ಲಿ ಡಿ.ಗ್ರೂಪ್ ನೌಕರನಾಗಿದ್ದ ಮುರುಗೇಶ್ ರಾಜಕೀಯದಲ್ಲೂ ಗುರುತಿಸಿಕೊಂಡಿದ್ದ.ಸುಲೋಚನಾ ಜೊತೆ ಅಕ್ರಮ ಸಂಭಂಧ ಇರಿಸಿಕೊಂಡಿದ್ದ.ಈ ವಿಚಾರದಲ್ಲಿ ಮುರುಗೇಶ್ ಮನೆಯಲ್ಲಿ ಸಾಕಷ್ಟು ಬಾರಿ ಗಲಾಟೆ ಆಗಿತ್ತು.ತನ್ನ ಕುಟುಂಬದ ಸಂತೋಷಕ್ಕೆ ಅಡ್ಡಿಯಾದ ಸುಲೋಚನಾಳನ್ನ ಮುಗಿಸಲು ಸ್ಕೆಚ್ ಹಾಕಿದ ಗಾಯಿತ್ರಿ ತನ್ನ ಸಂಭಂಧಿಕರಾದ ಭಾಗ್ಯ,ನಾಗಮ್ಮ ಹಾಗೂ ಕುಮಾರ್ ಜೊತೆ ಸೇರಿ ಕೊಲೆ ಮಾಡಿರುವುದು ವಿಚಾರಣೆ ವೇಳೆ ಬೆಳಕಿಗೆ ಬಂದಿದೆ.ಘಟನೆ ನಡೆದು 6 ತಿಂಗಳ ನಂತರ ಆರೋಪಿಗಳನ್ನ ಸೆರೆ ಹಿಡಿಯುವಲ್ಲಿ ನಂಜನಗೂಡು ಪೊಲೀಸರು ಯಶಸ್ವಿಯಾಗಿದ್ದಾರೆ…

Spread the love

Related post

ರಸ್ತೆ ಡಿವೈಡರ್ ಗೆ ಖಾಸಗಿ ಮಿನಿ ಬಸ್ ಢಿಕ್ಕಿ…ಅಯ್ಯಪ್ಪಸ್ವಾಮಿ ಭಕ್ತರು ಪ್ರಾಣಾಪಾಯದಿಂದ ಪಾರು…

ರಸ್ತೆ ಡಿವೈಡರ್ ಗೆ ಖಾಸಗಿ ಮಿನಿ ಬಸ್ ಢಿಕ್ಕಿ…ಅಯ್ಯಪ್ಪಸ್ವಾಮಿ ಭಕ್ತರು ಪ್ರಾಣಾಪಾಯದಿಂದ…

ರಸ್ತೆ ಡಿವೈಡರ್ ಗೆ ಖಾಸಗಿ ಮಿನಿ ಬಸ್ ಢಿಕ್ಕಿ…ಅಯ್ಯಪ್ಪಸ್ವಾಮಿ ಭಕ್ತರು ಪ್ರಾಣಾಪಾಯದಿಂದ ಪಾರು… ನಂಜನಗೂಡು,ಸೆ20,Tv10 ಕನ್ನಡ ರಸ್ತೆ ಡಿವೈಡರ್ ಗೆ ಢಿಕ್ಕಿ ಹೊಡೆದ ಮಿನಿಬಸ್ ಪಲ್ಟಿಯಾದ ಘಟನೆ ನಂಜನಗೂಡು…
ಮುಳುಗದೆ…ತೇಲದೆ…ಕರಗದೆ ಅತಂತ್ರವಾದ ಗಣಪತಿ ಮೂರ್ತಿಗಳು…ಸಂಪ್ರದಾಯಕ ವಿಸರ್ಜನೆಗೆ ಆಧ್ಯತೆ ನೀಡುವರೇ…?

ಮುಳುಗದೆ…ತೇಲದೆ…ಕರಗದೆ ಅತಂತ್ರವಾದ ಗಣಪತಿ ಮೂರ್ತಿಗಳು…ಸಂಪ್ರದಾಯಕ ವಿಸರ್ಜನೆಗೆ ಆಧ್ಯತೆ ನೀಡುವರೇ…?

ಮೈಸೂರು,ಸೆ20,Tv10 ಕನ್ನಡ ವಿಘ್ನನಿವಾರಕ ಗಣಪತಿ ಹಬ್ಬ ನಾಡಿನ ಮೂಲೆ ಮೂಲೆಗಳಲ್ಲಿ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ.ರಸ್ತೆ ರಸ್ತೆಗಳಲ್ಲೂ ವಿವಿಧ ಆಕಾರಗಳಲ್ಲಿ ವಿಗ್ರಹಗಳು ಭಕ್ತರನ್ನ ಆಕರ್ಷಿಸುವಲ್ಲಿ ಯಶಸ್ವಿಯಾಗಿದೆ.ವಿಸರ್ಜನೆಗಾಗಿ ಹಮ್ಮಿಕೊಳ್ಳುವ ಮೆರವಣಿಗೆಗಳಂತೂ ಜಂಬೂಸವಾರಿಯನ್ನೂ ನಾಚಿಸಯವಂತೆ…
ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರು ಸಾಹಿತಿಗಳೇ ಆಗಲಿ :ಡಾ. ಸಿ ಪಿ ಕೆ.

ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರು ಸಾಹಿತಿಗಳೇ ಆಗಲಿ :ಡಾ. ಸಿ ಪಿ…

ಮೈಸೂರು, ಸೆಪ್ಟೆಂಬರ್. 19-ಮಂಡ್ಯದಲ್ಲಿ ನಡೆಯಲಿರುವ 87ನೇ ಕನ್ನಡ ಸಾಹಿತ್ಯ ಸಮ್ಮೇಳನ ದ ಅಧ್ಯಕ್ಷರನ್ನಾಗಿ ಸಾಹಿತ್ಯೇತರ ವ್ಯಕ್ತಿಯನ್ನೂ ಅಧ್ಯಕ್ಷರನ್ನಾಗಿಸುವುದು ಬೇಡ ಎಂದು ಹಿರಿಯ ಸಾಹಿತಿ ಡಾ. ಸಿ. ಪಿ ಕೆ…

Leave a Reply

Your email address will not be published. Required fields are marked *