ಶಿಕ್ಷಕಿ ಕೊಲೆ ಪ್ರಕರಣ… ನಗರಸಭೆ ಕೌನ್ಸಿಲರ್ ಸೇರಿ ನಾಲ್ವರ ಬಂಧನ…6 ತಿಂಗಳ ನಂತರ ಆರೋಪಿಗಳು ಅಂದರ್…ಅಕ್ರಮ ಸಂಭಂಧಕ್ಕೆ ಬಲಿಯಾದ ಟೀಚರ್ …

ಶಿಕ್ಷಕಿ ಕೊಲೆ ಪ್ರಕರಣ… ನಗರಸಭೆ ಕೌನ್ಸಿಲರ್ ಸೇರಿ ನಾಲ್ವರ ಬಂಧನ…6 ತಿಂಗಳ ನಂತರ ಆರೋಪಿಗಳು ಅಂದರ್…ಅಕ್ರಮ ಸಂಭಂಧಕ್ಕೆ ಬಲಿಯಾದ ಟೀಚರ್ …

ನಂಜನಗೂಡು,ಆಗಸ್ಟ್3,Tv10 ಕನ್ನಡ
ಕೊನೆಗೂ ಹಿಂದಿ ಶಿಕ್ಷಕಿ ಕೊಲೆ ರಹಸ್ಯ ಭೇಧಿಸುವಲ್ಲಿ ನಂಜನಗೂಡು ಪೊಲೀಸರು ಯಶಸ್ವಿಯಾಗಿದ್ದಾರೆ.ನಂಜನಗೂಡು ನಗರಸಭೆ ಕೌನ್ಸಿಲರ್ ಸೇರಿದಂತೆ ನಾಲ್ವರನ್ನ ಪೊಲೀಸರು ಬಂಧಿಸಿದ್ದಾರೆ.ಶಿಕ್ಷಕಿಯೊಂದಿಗೆ ಪತಿಯ ಅಕ್ರಮ ಸಂಭಂಧಕ್ಕೆ ಬೇಸತ್ತಿದ್ದ ಕೌನ್ಸಿಲರ್ ಸುಫಾರಿ ಕೊಟ್ಟು ಕೊಲೆ ಮಾಡಿಸಿರುವುದು ವಿಚಾರಣೆ ವೇಳೆ ಬೆಳಕಿಗೆ ಬಂದಿದೆ.5 ನೇ ವಾರ್ಡಿನಿಂದ ನಗರಸಭೆಗೆ ಆಯ್ಕೆಯಾದ ಕೌನ್ಸಿಲರ್ ಗಾಯಿತ್ರಿ ಮುರುಗೇಶ್,ಭಾಗ್ಯ,ನಾಗಮ್ಮ ಮತ್ತು ಕುಮಾರ್ ಬಂಧಿತರು.ಘಟನೆ ನಡೆದು 6 ತಿಂಗಳ ನಂತರ ಆರೋಪಿಗಳನ್ನ ಬಂಧಿಸಿದ ಪೊಲೀಸರು ನಿಗೂಢ ಕೊಲೆ ರಹಸ್ಯ ಬಯಲು ಮಾಡಿದ್ದಾರೆ.

ಮಾರ್ಚ್ 9 ರಂದು ಹಿಂದಿ ಶಿಕ್ಷಕಿ ಸುಲೋಚನಾ ಎಂಬುವರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು ತನಿಖೆ ನಡೆಸಿದ ಪೊಲೀಸರು ಕೊಲೆ ಮೊಕದ್ದಮೆ ದಾಖಲಿಸಿದ್ರು.ಘಟನೆ ನಡೆದು 6 ತಿಂಗಳಾದ್ರೂ ಆರೋಪಿಗಳನ್ನ ಬಂಧಿಸದ ಪೊಲೀಸರ ಮೇಲೆ ತೀವ್ರ ಒತ್ತಡ ಬಂದಿತ್ತು.ಈ ಹಿನ್ನಲೆ ಎಸ್ಪಿ ಆರ್.ಚೇತನ್,ಎಎಸ್ಪಿ ಡಾ.ಮಾಲಿನಿ ರವರ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಗೋವಿಂದರಾಜ್ ಉಸ್ತುವಾರಿಯಲ್ಲಿ ಇನ್ಸ್ಪೆಕ್ಟರ್ ಲಕ್ಷ್ಮೀಕಾಂತ ತಳವಾರ್ ಹಾಗೂ ಸಿಬ್ಬಂದಿಗಳು ತನಿಖೆಯನ್ನ ತೀವ್ರಗೊಳಿಸಿದ್ದರು.ತನಿಖೆ ವೇಳೆ ದೊರೆತ ಸುಳಿವಿನ ಆಧಾರದ ಮೇಲೆ ಕೌನ್ಸಿಲರ್ ಗಾಯಿತ್ರಿ ಮುರುಗೇಶ್ ಹಾಗೂ ಸಂಭಂಧಿಕರನ್ನ ಅರೆಸ್ಟ್ ಮಾಡಿದ್ದಾರೆ.ಬಂಧಿತ ಗಾಯಿತ್ರಿ ಪತಿ ಮುರುಗೇಶ್ ಹಾಗೂ ಶಿಕ್ಷಕಿ ಸುಲೋಚನಾ ನಡುವೆ ಅಕ್ರಮ ಸಂಭಂಧ ಇತ್ತೆಂದು ಹೇಳಲಾಗಿದೆ.ಶ್ರೀಕಂಠೇಶ್ವರನ ದೇವಾಲಯದಲ್ಲಿ ಡಿ.ಗ್ರೂಪ್ ನೌಕರನಾಗಿದ್ದ ಮುರುಗೇಶ್ ರಾಜಕೀಯದಲ್ಲೂ ಗುರುತಿಸಿಕೊಂಡಿದ್ದ.ಸುಲೋಚನಾ ಜೊತೆ ಅಕ್ರಮ ಸಂಭಂಧ ಇರಿಸಿಕೊಂಡಿದ್ದ.ಈ ವಿಚಾರದಲ್ಲಿ ಮುರುಗೇಶ್ ಮನೆಯಲ್ಲಿ ಸಾಕಷ್ಟು ಬಾರಿ ಗಲಾಟೆ ಆಗಿತ್ತು.ತನ್ನ ಕುಟುಂಬದ ಸಂತೋಷಕ್ಕೆ ಅಡ್ಡಿಯಾದ ಸುಲೋಚನಾಳನ್ನ ಮುಗಿಸಲು ಸ್ಕೆಚ್ ಹಾಕಿದ ಗಾಯಿತ್ರಿ ತನ್ನ ಸಂಭಂಧಿಕರಾದ ಭಾಗ್ಯ,ನಾಗಮ್ಮ ಹಾಗೂ ಕುಮಾರ್ ಜೊತೆ ಸೇರಿ ಕೊಲೆ ಮಾಡಿರುವುದು ವಿಚಾರಣೆ ವೇಳೆ ಬೆಳಕಿಗೆ ಬಂದಿದೆ.ಘಟನೆ ನಡೆದು 6 ತಿಂಗಳ ನಂತರ ಆರೋಪಿಗಳನ್ನ ಸೆರೆ ಹಿಡಿಯುವಲ್ಲಿ ನಂಜನಗೂಡು ಪೊಲೀಸರು ಯಶಸ್ವಿಯಾಗಿದ್ದಾರೆ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *