ಪತ್ನಿಯನ್ನು ಕೊಲೆ ಮಾಡಿ ನೇಣು ಹಾಕಿದ ಪತಿಗೆ ಜೀವಾವಧಿ ಶಿಕ್ಷೆ…

ಪತ್ನಿಯನ್ನು ಕೊಲೆ ಮಾಡಿ ನೇಣು ಹಾಕಿದ ಪತಿಗೆ ಜೀವಾವಧಿ ಶಿಕ್ಷೆ…

  • Crime
  • August 4, 2022
  • No Comment
  • 244

ಪತ್ನಿಯನ್ನು ಕೊಲೆ ಮಾಡಿ ನೇಣು ಹಾಕಿದ ಪತಿಗೆ ಜೀವಾವಧಿ ಶಿಕ್ಷೆ…

ಮೈಸೂರು,ಆಗಸ್ಟ್4,Tv10 ಕನ್ನಡ
ಪತ್ನಿಯನ್ನು ಕೊಂದು ನೇಣುಹಾಕಿದ ಪತಿಗೆ ಮೈಸೂರು ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಮೈಸೂರಿನ ಐದನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.ಪಿರಿಯಾಪಟ್ಟಣದ ಚೌತಿ ಗ್ರಾಮದ ಕರಿಯಯ್ಯನ ಪುತ್ರ ಕೆ.ಬಸವರಾಜು ಶಿಕ್ಷೆಗೆ ಗುರಿಯಾದ ಪತಿರಾಯ. ತನ್ನ ಪತ್ನಿ ಮಮತ ಅವರನ್ನು ಕೊಲೆ ಮಾಡಿದ ಆರೋಪ ಸಾಬೀತಾದ ಹಿನ್ನಲೆಯಲ್ಲಿ ಶಿಕ್ಷೆಗೆ ಗುರಿಯಾಗಿದ್ದಾನೆ.
ಸೋಮವಾರ ಪೇಟೆಯ ಭುವನಗಿರಿ ಗ್ರಾಮದ ಬಸವರಾಜು ಅವರ ಸೋದರಿ ಮಮತ ಅವರನ್ನು 2002 ರಲ್ಲಿ ಬಸವರಾಜು ವಿವಾಹವಾಗಿದ್ದ. ಮದುವೆ ಬಳಿಕ ವರದಕ್ಷಿಣಿ ತರುವಂತೆ ಪೀಡಿಸುತ್ತಿದ್ದ. ಪರ ಪುರುಷರೊಂದಿಗೆ ಅಕ್ರಮ ಸಂಬಂಧವಿದೆ ಎಂದು ಅನುಮಾನದಿಂದ ಚಿತ್ರ ಹಿಂಸೆ ನೀಡುತ್ತಿದ್ದ.
2012 ರಲ್ಲಿ ಮಮತಗೆ ಬೆಂಕಿ ಹಚ್ಚಿ ಹಿಂಸೆ ನೀಡಿದ್ದ.ಗಾಯಗೊಂಡಿದ್ದ ಮಮತ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. 2019 ರಲ್ಲಿ ಹಣದ ವಿಚಾರವಾಗಿ ಗಲಾಟೆ ಮಾಡಿದ ಬಸವರಾಜು, ಪತ್ನಿ ಮೇಲೆ ಹಲ್ಲೆ ನಡೆಸಿದಲ್ಲದೇ ಪ್ಲಾಸ್ಟಿಕ್ ಹಗ್ಗದಿಂದ ನೇಣು ಬಿಗಿದು ಕೊಟ್ಟಿಗೆಯಲ್ಲಿ ನೇಣು ಹಾಕುವ ಮೂಲಕ ಕೊಲೆ ಮಾಡಿದ್ದ.ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪಿರಿಯಾಪಟ್ಟಣ ಠಾಣೆ ಪೊಲೀಸರು,ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದರು. ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಅವರು,ಆರೋಪ ಸಾಬೀತಾದ ಹಿನ್ನಲೆಯಲ್ಲಿ ಈ ಶಿಕ್ಷೆ ವಿಧಿಸಿದ್ದಾರೆ.ಸರಕಾರದ ಪರವಾಗಿ ಅಭಿಯೋಜಕರಾದ ನಾಗಪ್ಪ ಸಿ. ನಾಕಮನ್ ವಾದ ಮಂಡಿಸಿದ್ದರು…

Spread the love

Related post

MDA ಹೊಸಬಡಾವಣೆ ನಿರ್ಮಾಣ ಪ್ರಕ್ರಿಯೆ…ಡ್ರೋನ್ ಮೂಲಕ ಜಮೀನು ಸರ್ವೆ ಕಾರ್ಯ…ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಚಾಲನೆ…

MDA ಹೊಸಬಡಾವಣೆ ನಿರ್ಮಾಣ ಪ್ರಕ್ರಿಯೆ…ಡ್ರೋನ್ ಮೂಲಕ ಜಮೀನು ಸರ್ವೆ ಕಾರ್ಯ…ಜಿಲ್ಲಾಧಿಕಾರಿ ಲಕ್ಷ್ಮಿಕಾಂತ…

MDA ಹೊಸಬಡಾವಣೆ ನಿರ್ಮಾಣ ಪ್ರಕ್ರಿಯೆ…ಡ್ರೋನ್ ಮೂಲಕ ಜಮೀನು ಸರ್ವೆ ಕಾರ್ಯ…ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಚಾಲನೆ… ಮೈಸೂರು,ಏ4,Tv10 ಕನ್ನಡ ಮೈಸೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನೂತನ ಬಡಾವಣೆ ನಿರ್ಮಾಣ ಕಾರ್ಯ…
ಅರಮನೆ ಮಂಡಳಿ ಉಪನಿರ್ದೇಶಕ ಟಿ.ಎಸ್.ಸುಭ್ರಹ್ಮಣ್ಯ ವಿರುದ್ದ ಅವ್ಯವಹಾರ ಆರೋಪ…ಮಾನಹಾರಿಕ ಸುದ್ದಿ ಪ್ರಸಾರ ಮಾಡದಂತೆ ನ್ಯಾಯಾಲಯ ಆದೇಶ…

ಅರಮನೆ ಮಂಡಳಿ ಉಪನಿರ್ದೇಶಕ ಟಿ.ಎಸ್.ಸುಭ್ರಹ್ಮಣ್ಯ ವಿರುದ್ದ ಅವ್ಯವಹಾರ ಆರೋಪ…ಮಾನಹಾರಿಕ ಸುದ್ದಿ ಪ್ರಸಾರ…

ಅರಮನೆ ಮಂಡಳಿ ಉಪನಿರ್ದೇಶಕ ಟಿ.ಎಸ್.ಸುಭ್ರಹ್ಮಣ್ಯ ವಿರುದ್ದ ಅವ್ಯವಹಾರ ಆರೋಪ…ಮಾನಹಾರಿಕ ಸುದ್ದಿ ಪ್ರಸಾರ ಮಾಡದಂತೆ ನ್ಯಾಯಾಲಯ ಆದೇಶ… ಮೈಸೂರು,ಏ4,Tv10 ಕನ್ನಡ ಅರಮನೆ ಮಂಡಳಿ ಉಪನಿರ್ದೇಶಕ ಟಿ.ಎಸ್.ಸುಭ್ರಹ್ಮಣ್ಯ ಗೆ ಬಿಗ್ ರಿಲೀಫ್…
ರೈತನಿಗೆ FIR ಹಾಕಿಸುವ ಧಂಕಿ…ನಂಜನಗೂಡು ತಹಸೀಲ್ದಾರ್ ಸ್ಮಿತಾರಾಮು ವಿರುದ್ದ ದೂರು…ಕ್ರಮ ಕೈಗೊಳ್ಳುವಂತೆ ಪ್ರಾದೇಶಿಕ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳಿಂದ ಉಪವಿಭಾಗಾಧಿಕಾರಿಗಳಿಗೆ ಪತ್ರ…

ರೈತನಿಗೆ FIR ಹಾಕಿಸುವ ಧಂಕಿ…ನಂಜನಗೂಡು ತಹಸೀಲ್ದಾರ್ ಸ್ಮಿತಾರಾಮು ವಿರುದ್ದ ದೂರು…ಕ್ರಮ ಕೈಗೊಳ್ಳುವಂತೆ…

ರೈತನಿಗೆ FIR ಹಾಕಿಸುವ ಧಂಕಿ…ನಂಜನಗೂಡು ತಹಸೀಲ್ದಾರ್ ಸ್ಮಿತಾರಾಮು ವಿರುದ್ದ ದೂರು…ಕ್ರಮ ಕೈಗೊಳ್ಳುವಂತೆ ಪ್ರಾದೇಶಿಕ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳಿಂದ ಉಪವಿಭಾಗಾಧಿಕಾರಿಗಳಿಗೆ ಪತ್ರ… ನಂಜನಗೂಡು,ಏ4,Tv10 ಕನ್ನಡ ಅರ್ಜಿ ಬಗ್ಗೆ ಮಾಹಿತಿ ಕೇಳಲು…

Leave a Reply

Your email address will not be published. Required fields are marked *