ಪತ್ನಿಯನ್ನು ಕೊಲೆ ಮಾಡಿ ನೇಣು ಹಾಕಿದ ಪತಿಗೆ ಜೀವಾವಧಿ ಶಿಕ್ಷೆ…

ಪತ್ನಿಯನ್ನು ಕೊಲೆ ಮಾಡಿ ನೇಣು ಹಾಕಿದ ಪತಿಗೆ ಜೀವಾವಧಿ ಶಿಕ್ಷೆ…

  • Crime
  • August 4, 2022
  • No Comment
  • 329

ಪತ್ನಿಯನ್ನು ಕೊಲೆ ಮಾಡಿ ನೇಣು ಹಾಕಿದ ಪತಿಗೆ ಜೀವಾವಧಿ ಶಿಕ್ಷೆ…

ಮೈಸೂರು,ಆಗಸ್ಟ್4,Tv10 ಕನ್ನಡ
ಪತ್ನಿಯನ್ನು ಕೊಂದು ನೇಣುಹಾಕಿದ ಪತಿಗೆ ಮೈಸೂರು ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಮೈಸೂರಿನ ಐದನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.ಪಿರಿಯಾಪಟ್ಟಣದ ಚೌತಿ ಗ್ರಾಮದ ಕರಿಯಯ್ಯನ ಪುತ್ರ ಕೆ.ಬಸವರಾಜು ಶಿಕ್ಷೆಗೆ ಗುರಿಯಾದ ಪತಿರಾಯ. ತನ್ನ ಪತ್ನಿ ಮಮತ ಅವರನ್ನು ಕೊಲೆ ಮಾಡಿದ ಆರೋಪ ಸಾಬೀತಾದ ಹಿನ್ನಲೆಯಲ್ಲಿ ಶಿಕ್ಷೆಗೆ ಗುರಿಯಾಗಿದ್ದಾನೆ.
ಸೋಮವಾರ ಪೇಟೆಯ ಭುವನಗಿರಿ ಗ್ರಾಮದ ಬಸವರಾಜು ಅವರ ಸೋದರಿ ಮಮತ ಅವರನ್ನು 2002 ರಲ್ಲಿ ಬಸವರಾಜು ವಿವಾಹವಾಗಿದ್ದ. ಮದುವೆ ಬಳಿಕ ವರದಕ್ಷಿಣಿ ತರುವಂತೆ ಪೀಡಿಸುತ್ತಿದ್ದ. ಪರ ಪುರುಷರೊಂದಿಗೆ ಅಕ್ರಮ ಸಂಬಂಧವಿದೆ ಎಂದು ಅನುಮಾನದಿಂದ ಚಿತ್ರ ಹಿಂಸೆ ನೀಡುತ್ತಿದ್ದ.
2012 ರಲ್ಲಿ ಮಮತಗೆ ಬೆಂಕಿ ಹಚ್ಚಿ ಹಿಂಸೆ ನೀಡಿದ್ದ.ಗಾಯಗೊಂಡಿದ್ದ ಮಮತ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. 2019 ರಲ್ಲಿ ಹಣದ ವಿಚಾರವಾಗಿ ಗಲಾಟೆ ಮಾಡಿದ ಬಸವರಾಜು, ಪತ್ನಿ ಮೇಲೆ ಹಲ್ಲೆ ನಡೆಸಿದಲ್ಲದೇ ಪ್ಲಾಸ್ಟಿಕ್ ಹಗ್ಗದಿಂದ ನೇಣು ಬಿಗಿದು ಕೊಟ್ಟಿಗೆಯಲ್ಲಿ ನೇಣು ಹಾಕುವ ಮೂಲಕ ಕೊಲೆ ಮಾಡಿದ್ದ.ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪಿರಿಯಾಪಟ್ಟಣ ಠಾಣೆ ಪೊಲೀಸರು,ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದರು. ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಅವರು,ಆರೋಪ ಸಾಬೀತಾದ ಹಿನ್ನಲೆಯಲ್ಲಿ ಈ ಶಿಕ್ಷೆ ವಿಧಿಸಿದ್ದಾರೆ.ಸರಕಾರದ ಪರವಾಗಿ ಅಭಿಯೋಜಕರಾದ ನಾಗಪ್ಪ ಸಿ. ನಾಕಮನ್ ವಾದ ಮಂಡಿಸಿದ್ದರು…

Spread the love

Related post

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…
ಸಾಹಸಸಿಂಹ ಡಾ. ವಿಷ್ಣುವರ್ಧನ್ 76ನೇ ಜನ್ಮದಿನಾಚರಣೆ…ಉದ್ಭೂರು ಗೇಟ್ ಸ್ಮಾರಕದಲ್ಲಿ ಅದ್ಧೂರಿ ಕಾರ್ಯಕ್ರಮ…

ಸಾಹಸಸಿಂಹ ಡಾ. ವಿಷ್ಣುವರ್ಧನ್ 76ನೇ ಜನ್ಮದಿನಾಚರಣೆ…ಉದ್ಭೂರು ಗೇಟ್ ಸ್ಮಾರಕದಲ್ಲಿ ಅದ್ಧೂರಿ ಕಾರ್ಯಕ್ರಮ…

ಸಾಹಸಸಿಂಹ ಡಾ. ವಿಷ್ಣುವರ್ಧನ್ 76ನೇ ಜನ್ಮದಿನಾಚರಣೆ…ಉದ್ಭೂರು ಗೇಟ್ ಸ್ಮಾರಕದಲ್ಲಿ ಅದ್ಧೂರಿ ಕಾರ್ಯಕ್ರಮ… ಮೈಸೂರು,ಸೆ15,Tv10 ಕನ್ನಡ ಸಾಹಸಸಿಂಹ, ಕರ್ನಾಟಕ ರತ್ನ ಡಾ. ವಿಷ್ಣುವರ್ಧನ್ ಅವರ 76ನೇ ಜನ್ಮದಿನಾಚರಣೆಯನ್ನು ಸೆಪ್ಟೆಂಬರ್ 18ರಂದು…

Leave a Reply

Your email address will not be published. Required fields are marked *