ಪತ್ನಿಯನ್ನು ಕೊಲೆ ಮಾಡಿ ನೇಣು ಹಾಕಿದ ಪತಿಗೆ ಜೀವಾವಧಿ ಶಿಕ್ಷೆ…

ಪತ್ನಿಯನ್ನು ಕೊಲೆ ಮಾಡಿ ನೇಣು ಹಾಕಿದ ಪತಿಗೆ ಜೀವಾವಧಿ ಶಿಕ್ಷೆ…

  • Crime
  • August 4, 2022
  • No Comment
  • 313

ಪತ್ನಿಯನ್ನು ಕೊಲೆ ಮಾಡಿ ನೇಣು ಹಾಕಿದ ಪತಿಗೆ ಜೀವಾವಧಿ ಶಿಕ್ಷೆ…

ಮೈಸೂರು,ಆಗಸ್ಟ್4,Tv10 ಕನ್ನಡ
ಪತ್ನಿಯನ್ನು ಕೊಂದು ನೇಣುಹಾಕಿದ ಪತಿಗೆ ಮೈಸೂರು ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಮೈಸೂರಿನ ಐದನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.ಪಿರಿಯಾಪಟ್ಟಣದ ಚೌತಿ ಗ್ರಾಮದ ಕರಿಯಯ್ಯನ ಪುತ್ರ ಕೆ.ಬಸವರಾಜು ಶಿಕ್ಷೆಗೆ ಗುರಿಯಾದ ಪತಿರಾಯ. ತನ್ನ ಪತ್ನಿ ಮಮತ ಅವರನ್ನು ಕೊಲೆ ಮಾಡಿದ ಆರೋಪ ಸಾಬೀತಾದ ಹಿನ್ನಲೆಯಲ್ಲಿ ಶಿಕ್ಷೆಗೆ ಗುರಿಯಾಗಿದ್ದಾನೆ.
ಸೋಮವಾರ ಪೇಟೆಯ ಭುವನಗಿರಿ ಗ್ರಾಮದ ಬಸವರಾಜು ಅವರ ಸೋದರಿ ಮಮತ ಅವರನ್ನು 2002 ರಲ್ಲಿ ಬಸವರಾಜು ವಿವಾಹವಾಗಿದ್ದ. ಮದುವೆ ಬಳಿಕ ವರದಕ್ಷಿಣಿ ತರುವಂತೆ ಪೀಡಿಸುತ್ತಿದ್ದ. ಪರ ಪುರುಷರೊಂದಿಗೆ ಅಕ್ರಮ ಸಂಬಂಧವಿದೆ ಎಂದು ಅನುಮಾನದಿಂದ ಚಿತ್ರ ಹಿಂಸೆ ನೀಡುತ್ತಿದ್ದ.
2012 ರಲ್ಲಿ ಮಮತಗೆ ಬೆಂಕಿ ಹಚ್ಚಿ ಹಿಂಸೆ ನೀಡಿದ್ದ.ಗಾಯಗೊಂಡಿದ್ದ ಮಮತ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. 2019 ರಲ್ಲಿ ಹಣದ ವಿಚಾರವಾಗಿ ಗಲಾಟೆ ಮಾಡಿದ ಬಸವರಾಜು, ಪತ್ನಿ ಮೇಲೆ ಹಲ್ಲೆ ನಡೆಸಿದಲ್ಲದೇ ಪ್ಲಾಸ್ಟಿಕ್ ಹಗ್ಗದಿಂದ ನೇಣು ಬಿಗಿದು ಕೊಟ್ಟಿಗೆಯಲ್ಲಿ ನೇಣು ಹಾಕುವ ಮೂಲಕ ಕೊಲೆ ಮಾಡಿದ್ದ.ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪಿರಿಯಾಪಟ್ಟಣ ಠಾಣೆ ಪೊಲೀಸರು,ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದರು. ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಅವರು,ಆರೋಪ ಸಾಬೀತಾದ ಹಿನ್ನಲೆಯಲ್ಲಿ ಈ ಶಿಕ್ಷೆ ವಿಧಿಸಿದ್ದಾರೆ.ಸರಕಾರದ ಪರವಾಗಿ ಅಭಿಯೋಜಕರಾದ ನಾಗಪ್ಪ ಸಿ. ನಾಕಮನ್ ವಾದ ಮಂಡಿಸಿದ್ದರು…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *