ಪತ್ನಿಯನ್ನು ಕೊಲೆ ಮಾಡಿ ನೇಣು ಹಾಕಿದ ಪತಿಗೆ ಜೀವಾವಧಿ ಶಿಕ್ಷೆ…

ಪತ್ನಿಯನ್ನು ಕೊಲೆ ಮಾಡಿ ನೇಣು ಹಾಕಿದ ಪತಿಗೆ ಜೀವಾವಧಿ ಶಿಕ್ಷೆ…

  • Crime
  • August 4, 2022
  • No Comment
  • 322

ಪತ್ನಿಯನ್ನು ಕೊಲೆ ಮಾಡಿ ನೇಣು ಹಾಕಿದ ಪತಿಗೆ ಜೀವಾವಧಿ ಶಿಕ್ಷೆ…

ಮೈಸೂರು,ಆಗಸ್ಟ್4,Tv10 ಕನ್ನಡ
ಪತ್ನಿಯನ್ನು ಕೊಂದು ನೇಣುಹಾಕಿದ ಪತಿಗೆ ಮೈಸೂರು ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಮೈಸೂರಿನ ಐದನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.ಪಿರಿಯಾಪಟ್ಟಣದ ಚೌತಿ ಗ್ರಾಮದ ಕರಿಯಯ್ಯನ ಪುತ್ರ ಕೆ.ಬಸವರಾಜು ಶಿಕ್ಷೆಗೆ ಗುರಿಯಾದ ಪತಿರಾಯ. ತನ್ನ ಪತ್ನಿ ಮಮತ ಅವರನ್ನು ಕೊಲೆ ಮಾಡಿದ ಆರೋಪ ಸಾಬೀತಾದ ಹಿನ್ನಲೆಯಲ್ಲಿ ಶಿಕ್ಷೆಗೆ ಗುರಿಯಾಗಿದ್ದಾನೆ.
ಸೋಮವಾರ ಪೇಟೆಯ ಭುವನಗಿರಿ ಗ್ರಾಮದ ಬಸವರಾಜು ಅವರ ಸೋದರಿ ಮಮತ ಅವರನ್ನು 2002 ರಲ್ಲಿ ಬಸವರಾಜು ವಿವಾಹವಾಗಿದ್ದ. ಮದುವೆ ಬಳಿಕ ವರದಕ್ಷಿಣಿ ತರುವಂತೆ ಪೀಡಿಸುತ್ತಿದ್ದ. ಪರ ಪುರುಷರೊಂದಿಗೆ ಅಕ್ರಮ ಸಂಬಂಧವಿದೆ ಎಂದು ಅನುಮಾನದಿಂದ ಚಿತ್ರ ಹಿಂಸೆ ನೀಡುತ್ತಿದ್ದ.
2012 ರಲ್ಲಿ ಮಮತಗೆ ಬೆಂಕಿ ಹಚ್ಚಿ ಹಿಂಸೆ ನೀಡಿದ್ದ.ಗಾಯಗೊಂಡಿದ್ದ ಮಮತ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. 2019 ರಲ್ಲಿ ಹಣದ ವಿಚಾರವಾಗಿ ಗಲಾಟೆ ಮಾಡಿದ ಬಸವರಾಜು, ಪತ್ನಿ ಮೇಲೆ ಹಲ್ಲೆ ನಡೆಸಿದಲ್ಲದೇ ಪ್ಲಾಸ್ಟಿಕ್ ಹಗ್ಗದಿಂದ ನೇಣು ಬಿಗಿದು ಕೊಟ್ಟಿಗೆಯಲ್ಲಿ ನೇಣು ಹಾಕುವ ಮೂಲಕ ಕೊಲೆ ಮಾಡಿದ್ದ.ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪಿರಿಯಾಪಟ್ಟಣ ಠಾಣೆ ಪೊಲೀಸರು,ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದರು. ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಅವರು,ಆರೋಪ ಸಾಬೀತಾದ ಹಿನ್ನಲೆಯಲ್ಲಿ ಈ ಶಿಕ್ಷೆ ವಿಧಿಸಿದ್ದಾರೆ.ಸರಕಾರದ ಪರವಾಗಿ ಅಭಿಯೋಜಕರಾದ ನಾಗಪ್ಪ ಸಿ. ನಾಕಮನ್ ವಾದ ಮಂಡಿಸಿದ್ದರು…

Spread the love

Related post

ಮೂವರು ಗುಂಡೇಟಿಗೆ ಬಲಿ ಪ್ರಕರಣ…ಬೇಟೆಗಾರರು ಎಂಬುದಕ್ಕೆ ಪುರಾವೆ…ಸಾಕ್ಷ್ಯ ಸಲ್ಲಿಸಿದ ಅರಣ್ಯ ಇಲಾಖೆ…

ಮೂವರು ಗುಂಡೇಟಿಗೆ ಬಲಿ ಪ್ರಕರಣ…ಬೇಟೆಗಾರರು ಎಂಬುದಕ್ಕೆ ಪುರಾವೆ…ಸಾಕ್ಷ್ಯ ಸಲ್ಲಿಸಿದ ಅರಣ್ಯ ಇಲಾಖೆ…

ಮೂವರು ಗುಂಡೇಟಿಗೆ ಬಲಿ ಪ್ರಕರಣ…ಬೇಟೆಗಾರರು ಎಂಬುದಕ್ಕೆ ಪುರಾವೆ…ಸಾಕ್ಷ್ಯ ಸಲ್ಲಿಸಿದ ಅರಣ್ಯ ಇಲಾಖೆ… ಚಾಮರಾಜನಗರ,ಆ17,Tv10 ಕನ್ನಡ ಚಾಮರಾಜನಗರದಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರು ಬೇಟೆಗಾರರು ಎಂಬುದಕ್ಕೆ ಅರಣ್ಯ ಇಲಾಖೆ…
ಗದಗ ನಗರದ ರೇಪ್ ಕೇಸ್…ಆರೋಪಿಗಳು ಇಬ್ಬರಲ್ಲ ನಾಲ್ವರು…

ಗದಗ ನಗರದ ರೇಪ್ ಕೇಸ್…ಆರೋಪಿಗಳು ಇಬ್ಬರಲ್ಲ ನಾಲ್ವರು…

ಗದಗ ನಗರದ ರೇಪ್ ಕೇಸ್…ಆರೋಪಿಗಳು ಇಬ್ಬರಲ್ಲ ನಾಲ್ವರು… ಗದಗ,ಆ17,Tv10 ಕನ್ನಡ ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ನಿರಂತರ ಅತ್ಯಚಾರ ನಡೆದ ಪ್ರಕರಣದಲ್ಲಿ ಆರೋಪಿಗಳ ಸಂಖ್ಯೆ ನಾಲ್ಕಕ್ಕೆ ಏರಿದೆ.ಮೂರು…
ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…

Leave a Reply

Your email address will not be published. Required fields are marked *