ಪತ್ನಿಯನ್ನು ಕೊಲೆ ಮಾಡಿ ನೇಣು ಹಾಕಿದ ಪತಿಗೆ ಜೀವಾವಧಿ ಶಿಕ್ಷೆ…

ಪತ್ನಿಯನ್ನು ಕೊಲೆ ಮಾಡಿ ನೇಣು ಹಾಕಿದ ಪತಿಗೆ ಜೀವಾವಧಿ ಶಿಕ್ಷೆ…

  • Crime
  • August 4, 2022
  • No Comment
  • 230

ಪತ್ನಿಯನ್ನು ಕೊಲೆ ಮಾಡಿ ನೇಣು ಹಾಕಿದ ಪತಿಗೆ ಜೀವಾವಧಿ ಶಿಕ್ಷೆ…

ಮೈಸೂರು,ಆಗಸ್ಟ್4,Tv10 ಕನ್ನಡ
ಪತ್ನಿಯನ್ನು ಕೊಂದು ನೇಣುಹಾಕಿದ ಪತಿಗೆ ಮೈಸೂರು ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಮೈಸೂರಿನ ಐದನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.ಪಿರಿಯಾಪಟ್ಟಣದ ಚೌತಿ ಗ್ರಾಮದ ಕರಿಯಯ್ಯನ ಪುತ್ರ ಕೆ.ಬಸವರಾಜು ಶಿಕ್ಷೆಗೆ ಗುರಿಯಾದ ಪತಿರಾಯ. ತನ್ನ ಪತ್ನಿ ಮಮತ ಅವರನ್ನು ಕೊಲೆ ಮಾಡಿದ ಆರೋಪ ಸಾಬೀತಾದ ಹಿನ್ನಲೆಯಲ್ಲಿ ಶಿಕ್ಷೆಗೆ ಗುರಿಯಾಗಿದ್ದಾನೆ.
ಸೋಮವಾರ ಪೇಟೆಯ ಭುವನಗಿರಿ ಗ್ರಾಮದ ಬಸವರಾಜು ಅವರ ಸೋದರಿ ಮಮತ ಅವರನ್ನು 2002 ರಲ್ಲಿ ಬಸವರಾಜು ವಿವಾಹವಾಗಿದ್ದ. ಮದುವೆ ಬಳಿಕ ವರದಕ್ಷಿಣಿ ತರುವಂತೆ ಪೀಡಿಸುತ್ತಿದ್ದ. ಪರ ಪುರುಷರೊಂದಿಗೆ ಅಕ್ರಮ ಸಂಬಂಧವಿದೆ ಎಂದು ಅನುಮಾನದಿಂದ ಚಿತ್ರ ಹಿಂಸೆ ನೀಡುತ್ತಿದ್ದ.
2012 ರಲ್ಲಿ ಮಮತಗೆ ಬೆಂಕಿ ಹಚ್ಚಿ ಹಿಂಸೆ ನೀಡಿದ್ದ.ಗಾಯಗೊಂಡಿದ್ದ ಮಮತ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. 2019 ರಲ್ಲಿ ಹಣದ ವಿಚಾರವಾಗಿ ಗಲಾಟೆ ಮಾಡಿದ ಬಸವರಾಜು, ಪತ್ನಿ ಮೇಲೆ ಹಲ್ಲೆ ನಡೆಸಿದಲ್ಲದೇ ಪ್ಲಾಸ್ಟಿಕ್ ಹಗ್ಗದಿಂದ ನೇಣು ಬಿಗಿದು ಕೊಟ್ಟಿಗೆಯಲ್ಲಿ ನೇಣು ಹಾಕುವ ಮೂಲಕ ಕೊಲೆ ಮಾಡಿದ್ದ.ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪಿರಿಯಾಪಟ್ಟಣ ಠಾಣೆ ಪೊಲೀಸರು,ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದರು. ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಅವರು,ಆರೋಪ ಸಾಬೀತಾದ ಹಿನ್ನಲೆಯಲ್ಲಿ ಈ ಶಿಕ್ಷೆ ವಿಧಿಸಿದ್ದಾರೆ.ಸರಕಾರದ ಪರವಾಗಿ ಅಭಿಯೋಜಕರಾದ ನಾಗಪ್ಪ ಸಿ. ನಾಕಮನ್ ವಾದ ಮಂಡಿಸಿದ್ದರು…

Spread the love

Related post

ನಂಜನಗೂಡಿನ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿ ಎಂ ಮಹದೇವಸ್ವಾಮಿ ನ್ಯಾಯಾಧೀಶರಾಗಿ ಆಯ್ಕೆ – ಹೆಮ್ಮೆಯ ಕ್ಷಣ

ನಂಜನಗೂಡಿನ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿ ಎಂ…

ನಂಜನಗೂಡಿನ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿ ಎಂ ಮಹದೇವಸ್ವಾಮಿ ನ್ಯಾಯಾಧೀಶರಾಗಿ ಆಯ್ಕೆ – ಹೆಮ್ಮೆಯ ಕ್ಷಣ ನಂಜನಗೂಡು ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ…
ಮಂಡ್ಯ ಪೊಲೀಸರ ಭರ್ಜರಿ ಕಾರ್ಯಾಚರಣೆ…ಬೈಕ್ ಕಳ್ಳರ ಬಂಧನ…14 ಲಕ್ಷ ಮೌಲ್ಯದ 27 ಬೈಕ್ ಮೂರು ಲಕ್ಷ ಮೌಲ್ಯದ ಚಿನ್ನಾಭರಣ ವಶ…

ಮಂಡ್ಯ ಪೊಲೀಸರ ಭರ್ಜರಿ ಕಾರ್ಯಾಚರಣೆ…ಬೈಕ್ ಕಳ್ಳರ ಬಂಧನ…14 ಲಕ್ಷ ಮೌಲ್ಯದ 27…

ಮಂಡ್ಯ ಪೊಲೀಸರ ಭರ್ಜರಿ ಕಾರ್ಯಾಚರಣೆ…ಬೈಕ್ ಕಳ್ಳರ ಬಂಧನ…14 ಲಕ್ಷ ಮೌಲ್ಯದ 27 ಬೈಕ್ ಮೂರು ಲಕ್ಷ ಮೌಲ್ಯದ ಚಿನ್ನಾಭರಣ ವಶ… ಮಂಡ್ಯ,ಮಾ13,Tv10 ಕನ್ನಡ ಮಂಡ್ಯ ಪೂರ್ವ ಹಾಗೂ ಪಶ್ಚಿಮ…
MDA ವಿಶೇಷ ಭೂ ಸ್ವಾಧೀನ ಇಲಾಖೆ ವ್ಯವಸ್ಥಾಪಕಿ ಬಿ.ಶೃತಿ ಎತ್ತಂಗಡಿ…ಕ್ರಿಮಿನಲ್ ಪ್ರಕರಣದಲ್ಲಿ ಭಾಗಿ ಆರೋಪ ಹಿನ್ನಲೆ…ಮಾತೃ ಇಲಾಖೆಗೆ ಹಿಂದಿರುಗುವಂತೆ ಸೂಚನೆ…ಸೇವೆಯಿಂದ ಬಿಡುಗಡೆ ಮಾಡಲು ಎಂಡಿಎ ಮೀನಾಮೇಷ…

MDA ವಿಶೇಷ ಭೂ ಸ್ವಾಧೀನ ಇಲಾಖೆ ವ್ಯವಸ್ಥಾಪಕಿ ಬಿ.ಶೃತಿ ಎತ್ತಂಗಡಿ…ಕ್ರಿಮಿನಲ್ ಪ್ರಕರಣದಲ್ಲಿ…

MDA ವಿಶೇಷ ಭೂ ಸ್ವಾಧೀನ ಇಲಾಖೆ ವ್ಯವಸ್ಥಾಪಕಿ ಬಿ.ಶೃತಿ ಎತ್ತಂಗಡಿ…ಕ್ರಿಮಿನಲ್ ಪ್ರಕರಣದಲ್ಲಿ ಭಾಗಿ ಆರೋಪ ಹಿನ್ನಲೆ…ಮಾತೃ ಇಲಾಖೆಗೆ ಹಿಂದಿರುಗುವಂತೆ ಸೂಚನೆ…ಸೇವೆಯಿಂದ ಬಿಡುಗಡೆ ಮಾಡಲು ಎಂಡಿಎ ಮೀನಾಮೇಷ… ಮೈಸೂರು,ಮಾ10,Tv10 ಕನ್ನಡ…

Leave a Reply

Your email address will not be published. Required fields are marked *