ಪತ್ನಿಯನ್ನು ಕೊಲೆ ಮಾಡಿ ನೇಣು ಹಾಕಿದ ಪತಿಗೆ ಜೀವಾವಧಿ ಶಿಕ್ಷೆ…

ಪತ್ನಿಯನ್ನು ಕೊಲೆ ಮಾಡಿ ನೇಣು ಹಾಕಿದ ಪತಿಗೆ ಜೀವಾವಧಿ ಶಿಕ್ಷೆ…

  • Crime
  • August 4, 2022
  • No Comment
  • 308

ಪತ್ನಿಯನ್ನು ಕೊಲೆ ಮಾಡಿ ನೇಣು ಹಾಕಿದ ಪತಿಗೆ ಜೀವಾವಧಿ ಶಿಕ್ಷೆ…

ಮೈಸೂರು,ಆಗಸ್ಟ್4,Tv10 ಕನ್ನಡ
ಪತ್ನಿಯನ್ನು ಕೊಂದು ನೇಣುಹಾಕಿದ ಪತಿಗೆ ಮೈಸೂರು ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಮೈಸೂರಿನ ಐದನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.ಪಿರಿಯಾಪಟ್ಟಣದ ಚೌತಿ ಗ್ರಾಮದ ಕರಿಯಯ್ಯನ ಪುತ್ರ ಕೆ.ಬಸವರಾಜು ಶಿಕ್ಷೆಗೆ ಗುರಿಯಾದ ಪತಿರಾಯ. ತನ್ನ ಪತ್ನಿ ಮಮತ ಅವರನ್ನು ಕೊಲೆ ಮಾಡಿದ ಆರೋಪ ಸಾಬೀತಾದ ಹಿನ್ನಲೆಯಲ್ಲಿ ಶಿಕ್ಷೆಗೆ ಗುರಿಯಾಗಿದ್ದಾನೆ.
ಸೋಮವಾರ ಪೇಟೆಯ ಭುವನಗಿರಿ ಗ್ರಾಮದ ಬಸವರಾಜು ಅವರ ಸೋದರಿ ಮಮತ ಅವರನ್ನು 2002 ರಲ್ಲಿ ಬಸವರಾಜು ವಿವಾಹವಾಗಿದ್ದ. ಮದುವೆ ಬಳಿಕ ವರದಕ್ಷಿಣಿ ತರುವಂತೆ ಪೀಡಿಸುತ್ತಿದ್ದ. ಪರ ಪುರುಷರೊಂದಿಗೆ ಅಕ್ರಮ ಸಂಬಂಧವಿದೆ ಎಂದು ಅನುಮಾನದಿಂದ ಚಿತ್ರ ಹಿಂಸೆ ನೀಡುತ್ತಿದ್ದ.
2012 ರಲ್ಲಿ ಮಮತಗೆ ಬೆಂಕಿ ಹಚ್ಚಿ ಹಿಂಸೆ ನೀಡಿದ್ದ.ಗಾಯಗೊಂಡಿದ್ದ ಮಮತ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. 2019 ರಲ್ಲಿ ಹಣದ ವಿಚಾರವಾಗಿ ಗಲಾಟೆ ಮಾಡಿದ ಬಸವರಾಜು, ಪತ್ನಿ ಮೇಲೆ ಹಲ್ಲೆ ನಡೆಸಿದಲ್ಲದೇ ಪ್ಲಾಸ್ಟಿಕ್ ಹಗ್ಗದಿಂದ ನೇಣು ಬಿಗಿದು ಕೊಟ್ಟಿಗೆಯಲ್ಲಿ ನೇಣು ಹಾಕುವ ಮೂಲಕ ಕೊಲೆ ಮಾಡಿದ್ದ.ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪಿರಿಯಾಪಟ್ಟಣ ಠಾಣೆ ಪೊಲೀಸರು,ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದರು. ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಅವರು,ಆರೋಪ ಸಾಬೀತಾದ ಹಿನ್ನಲೆಯಲ್ಲಿ ಈ ಶಿಕ್ಷೆ ವಿಧಿಸಿದ್ದಾರೆ.ಸರಕಾರದ ಪರವಾಗಿ ಅಭಿಯೋಜಕರಾದ ನಾಗಪ್ಪ ಸಿ. ನಾಕಮನ್ ವಾದ ಮಂಡಿಸಿದ್ದರು…

Spread the love

Related post

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು…

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು…

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು… ಹುಣಸೂರು,ಜೂ18,Tv10 ಕನ್ನಡ ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆ ಹುಣಸೂರು…
ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…

Leave a Reply

Your email address will not be published. Required fields are marked *