ಪತ್ನಿಯನ್ನು ಕೊಲೆ ಮಾಡಿ ನೇಣು ಹಾಕಿದ ಪತಿಗೆ ಜೀವಾವಧಿ ಶಿಕ್ಷೆ…

ಪತ್ನಿಯನ್ನು ಕೊಲೆ ಮಾಡಿ ನೇಣು ಹಾಕಿದ ಪತಿಗೆ ಜೀವಾವಧಿ ಶಿಕ್ಷೆ…

  • Crime
  • August 4, 2022
  • No Comment
  • 179

ಪತ್ನಿಯನ್ನು ಕೊಲೆ ಮಾಡಿ ನೇಣು ಹಾಕಿದ ಪತಿಗೆ ಜೀವಾವಧಿ ಶಿಕ್ಷೆ…

ಮೈಸೂರು,ಆಗಸ್ಟ್4,Tv10 ಕನ್ನಡ
ಪತ್ನಿಯನ್ನು ಕೊಂದು ನೇಣುಹಾಕಿದ ಪತಿಗೆ ಮೈಸೂರು ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಮೈಸೂರಿನ ಐದನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.ಪಿರಿಯಾಪಟ್ಟಣದ ಚೌತಿ ಗ್ರಾಮದ ಕರಿಯಯ್ಯನ ಪುತ್ರ ಕೆ.ಬಸವರಾಜು ಶಿಕ್ಷೆಗೆ ಗುರಿಯಾದ ಪತಿರಾಯ. ತನ್ನ ಪತ್ನಿ ಮಮತ ಅವರನ್ನು ಕೊಲೆ ಮಾಡಿದ ಆರೋಪ ಸಾಬೀತಾದ ಹಿನ್ನಲೆಯಲ್ಲಿ ಶಿಕ್ಷೆಗೆ ಗುರಿಯಾಗಿದ್ದಾನೆ.
ಸೋಮವಾರ ಪೇಟೆಯ ಭುವನಗಿರಿ ಗ್ರಾಮದ ಬಸವರಾಜು ಅವರ ಸೋದರಿ ಮಮತ ಅವರನ್ನು 2002 ರಲ್ಲಿ ಬಸವರಾಜು ವಿವಾಹವಾಗಿದ್ದ. ಮದುವೆ ಬಳಿಕ ವರದಕ್ಷಿಣಿ ತರುವಂತೆ ಪೀಡಿಸುತ್ತಿದ್ದ. ಪರ ಪುರುಷರೊಂದಿಗೆ ಅಕ್ರಮ ಸಂಬಂಧವಿದೆ ಎಂದು ಅನುಮಾನದಿಂದ ಚಿತ್ರ ಹಿಂಸೆ ನೀಡುತ್ತಿದ್ದ.
2012 ರಲ್ಲಿ ಮಮತಗೆ ಬೆಂಕಿ ಹಚ್ಚಿ ಹಿಂಸೆ ನೀಡಿದ್ದ.ಗಾಯಗೊಂಡಿದ್ದ ಮಮತ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. 2019 ರಲ್ಲಿ ಹಣದ ವಿಚಾರವಾಗಿ ಗಲಾಟೆ ಮಾಡಿದ ಬಸವರಾಜು, ಪತ್ನಿ ಮೇಲೆ ಹಲ್ಲೆ ನಡೆಸಿದಲ್ಲದೇ ಪ್ಲಾಸ್ಟಿಕ್ ಹಗ್ಗದಿಂದ ನೇಣು ಬಿಗಿದು ಕೊಟ್ಟಿಗೆಯಲ್ಲಿ ನೇಣು ಹಾಕುವ ಮೂಲಕ ಕೊಲೆ ಮಾಡಿದ್ದ.ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪಿರಿಯಾಪಟ್ಟಣ ಠಾಣೆ ಪೊಲೀಸರು,ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದರು. ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಅವರು,ಆರೋಪ ಸಾಬೀತಾದ ಹಿನ್ನಲೆಯಲ್ಲಿ ಈ ಶಿಕ್ಷೆ ವಿಧಿಸಿದ್ದಾರೆ.ಸರಕಾರದ ಪರವಾಗಿ ಅಭಿಯೋಜಕರಾದ ನಾಗಪ್ಪ ಸಿ. ನಾಕಮನ್ ವಾದ ಮಂಡಿಸಿದ್ದರು…

Spread the love

Related post

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…
ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025 ಕಿರೀಟ…

ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025…

ಮೈಸೂರು,ಜೂ26,Tv10 ಕನ್ನಡ ಮೈಸೂರಿನ ಪೀಡಿಯಾಟ್ರಿಕ್ ನ್ಯೂರಾಲಜಿಸ್ಟ್ ಡಾ.ಅನೂಷಾ ರಾಜ್ ರವರು ಮಿಸ್ ಮೆಡಿಕ್ವೀನ್ 2025 ಸ್ಪರ್ಧೆಯಲ್ಲಿ ವಿಜಯಿಯಾಗಿ ಹೊರಹೊಮ್ಮಿದ್ದಾರೆ. ಜೂನ್ 22 ರಂದು ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಸ್ಪರ್ಧೆಯಲ್ಲಿ…

Leave a Reply

Your email address will not be published. Required fields are marked *