ವಿಶ್ವವಿಖ್ಯಾತ ದಸರಾ ಮಹೋತ್ಸವ…ಗಜಪಯಣಕ್ಕೆ ಕ್ಷಣಗಣನೆ…ಅಭಿಮನ್ಯು ನೇತೃತ್ವದ ತಂಡ ಸಜ್ಜು…

ವಿಶ್ವವಿಖ್ಯಾತ ದಸರಾ ಮಹೋತ್ಸವ…ಗಜಪಯಣಕ್ಕೆ ಕ್ಷಣಗಣನೆ…ಅಭಿಮನ್ಯು ನೇತೃತ್ವದ ತಂಡ ಸಜ್ಜು…

  • Temples
  • August 7, 2022
  • No Comment
  • 237

ವಿಶ್ವವಿಖ್ಯಾತ ದಸರಾ ಮಹೋತ್ಸವ…ಗಜಪಯಣಕ್ಕೆ ಕ್ಷಣಗಣನೆ…ಅಭಿಮನ್ಯು ನೇತೃತ್ವದ ತಂಡ ಸಜ್ಜು…

ಮೈಸೂರು,ಆಗಸ್ಟ್7,Tv10 ಕನ್ನಡ
ಸಾಂಸ್ಕೃತಿಕ ನಗರಿ ಮೈಸೂರು ದಸರಾ ಮಹೋತ್ಸವಕ್ಕೆ ಸಜ್ಜಾಗುತ್ತಿದೆ.ಎರಡು ವರ್ಷಗಳ ನಂತರ ವಿಜೃಂಬಣೆ ದಸರಾ ನೋಡುವ ಅವಕಾಶ ನಾಡಿನ ಜನರಿಗೆ ಬಂದಿದೆ.ಕೊರೊನಾ ಹಿನ್ನಲೆ ಕಳೆದ ಎರಡು ವರ್ಷ ಸರಳ ಸಂಪ್ರದಾಯಕ ದಸರಾ ಗೆ ಒತ್ತು ನೀಡಲಾಗಿತ್ತು.ಈ ಬಾರಿ ಅದ್ದೂರಿ ದಸರಾ ಆಚರಣೆ ನಡೆಯಲಿದೆ. ದಸರಾ ಮಹೋತ್ಸವದ ಮೊದಲ ಹಂತದ ಗಜಪಯಣಕ್ಕೆ ಕ್ಷಣಗಣನೆ ಆರಂಭವಾಗಿದೆ.ಅಭಿಮನ್ಯು ನೇತೃತ್ವದ 14 ಆನೆಗಳ ತಂಡ ದಸರಾ ಮಹೋತ್ಸವದಲ್ಲಿ ಭಾಗಿಯಾಗಲಿದೆ.
ಮೈಸೂರಿನ ನಾಗರಹೊಳೆಯ ಹೆಬ್ಬಾಗಿಲು ವೀರನಹೊಸಳ್ಳಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಹೆಚ್‌.ಟಿ.ಸೋಮಶೇಖರ್ ಅವರು ಗಜಪಯಣಕ್ಕೆ ಇಂದು ಬೆಳಿಗ್ಗೆ 8.30 ಗಂಟೆಗೆ ಚಾಲನೆ ನೀಡಲಿದ್ದಾರೆ.
ಮೊದಲ ಹಂತದಲ್ಲಿ 9 ಆನೆಗಳು ಮೈಸೂರಿಗೆ ಆಗಮಿಸಲಿದೆ.
ಈ ಬಾರಿಯ ಮೈಸೂರು ದಸರಾ ಮಹೋತ್ಸವದಲ್ಲಿ ಕ್ಯಾಪ್ಟನ್ ಅಭಿಮನ್ಯು ಜೊತೆಗೆ
ಭೀಮ, ಗೋಪಾಲ ಸ್ವಾಮಿ, ಅರ್ಜುನ, ವಿಕ್ರಮ, ಧನಂಜಯ, ಗೋಪಿ, ಮಹೇಂದ್ರ,ಕಾವೇರಿ, ಶ್ರೀರಾಮ, ವಿಜಯ, ಚೈತ್ರ, ಲಕ್ಷ್ಮಿ, ಪಾರ್ಥಸಾರಥಿ ತಮ್ಮ ಕರ್ತವ್ಯ ನಿರ್ವಹಿಸಲಿವೆ.
ಎರಡನೇ ಹಂತದಲ್ಲಿ ಐದು ಆನೆಗಳು ಮೈಸೂರಿಗೆ ಆಗಮಿಸಲಿವೆ…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *