ರಿಯಲ್ ಎಸ್ಟೇಟ್ ಉದ್ಯಮಿ ಹತ್ಯೆ…ಅಪ್ರಾಪ್ತ ಮಗನೇ ಹಂತಕ…

ರಿಯಲ್ ಎಸ್ಟೇಟ್ ಉದ್ಯಮಿ ಹತ್ಯೆ…ಅಪ್ರಾಪ್ತ ಮಗನೇ ಹಂತಕ…

ಮೈಸೂರು,ಆಗಸ್ಟ್9,Tv10 ಕನ್ನಡ
ಮೈಸೂರಿನ ಬೃಂದಾವನ ಬಡಾವಣೆಯಲ್ಲಿ ನಡೆದ ರಿಯಲ್ ಎಸ್ಟೇಟ್ ಉದ್ಯಮಿ ಹತ್ಯೆ ಪ್ರಕರಣ ಟ್ವಿಸ್ಟ್ ದೊರೆತಿದೆ.ಸ್ವಂತ ಮಗನೇ ಹಂತಕನಾಗಿರುವ ಶಾಕಿಂಗ್ ನ್ಯೂಸ್ ಬೆಳಕಿಗೆ ಬಂದಿದೆ.16 ವರ್ಷದ ಅಪ್ರಾಪ್ತ ತಂದೆಯನ್ನ ಕೊಂದು ಪೊಲೀಸರಿಗೆ ಚೆಳ್ಳೆ ಹಣ್ಣು ತಿನ್ನಿಸಲು ಯತ್ನಿಸಿದ್ದಾನೆ.ಸಧ್ಯ ಪೊಲೀಸರು ನಡೆಸಿದ ತೀವ್ರ ವಿಚಾರಣೆಯಲ್ಲಿ ಅಪ್ರಾಪ್ತ ಪುತ್ರನೇ ಹಂತಕ ಎಂಬ ವಿಚಾರ ಬೆಳಕಿಗೆ ಬಂದಿದೆ.

ನಿನ್ನೆ ಸೋಮವಾರ ಹಾಡುಹಗಲೇ ಮನೆಯಲ್ಲಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಸಂಪತ್ ಕುಮಾರ್(63)ಭೀಕರವಾಗಿ ಕೊಲೆಯಾಗಿದ್ದರು.ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ ವೇಳೆ ಅಪ್ರಾಪ್ತ ಮಗ ಆಗುಂತಕ ವ್ಯಕ್ತಿಯೊಬ್ಬ ಏಕಾಏಕಿ ಮನೆಗೆ ನುಗ್ಗಿ ರಾಡ್ ನಿಂದ ಹಲ್ಲೆ ಮಾಡಿ ಕೊಂದು ಪರಾರಿಯಾದನೆಂದು ಹೇಳಿಕೆ ನೀಡಿದ್ದ.ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿದ ವಿವಿ ಪುರಂ ಠಾಣಾ ಪೊಲೀಸರು ತನಿಖೆ ಚುರುಕುಗೊಳಿಸಿದ್ದರು.ಪೊಲೀಸ್ ಕಮೀಷನ್ ಡಾ.ಚಂದ್ರಗುಪ್ತ,ಡಿಸಿಪಿ ಪ್ರವೀಣ್ ಗುಂಟಿ ಹಾಗೂ ಗೀತಾ ಪ್ರಸನ್ನ ರವರು ಸ್ಥಳಕ್ಕೆ ಭೇಟಿ ನೀಡಿ ಪುತ್ರನನ್ನ ಸಾಕಷ್ಟು ಪ್ರಶ್ನೆ ಮಾಡಿದ್ದರು.ಪುತ್ರನಿಂದ ಪೊಲೀಸರಿಗೆ ಸಮಂಜಸವಾದ ಉತ್ತರ ಬಂದಿರಲಿಲ್ಲ.ಹಾಕಿದ ಪ್ರಶ್ನೆಗಳಿಗೆ ಗೊಂದಲ ಮೂಡುವಂತೆ ಉತ್ತರ ನೀಡುತ್ತಿದ್ದ.ಮಗನ ವರ್ತನೆ ಹಾಗೂ ಉತ್ತರಗಳು ಸಾಕಷ್ಟು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ.ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದ ಪತ್ನಿ ಗೀತಾ ಶಾಲೆಯಿಂದ ಹಿಂದಿರುಗಿ ಬಂದು ನೀಡಿದ ಮಾಹಿತಿಯೂ ಮಗನ ವಿರುದ್ದ ಅನುಮಾನದ ಹುತ್ತ ಮೂಡಿತು.ಪುತ್ರನನ್ನ ವಶಕ್ಕೆ ಪಡೆದು ವಿಚಾರಣೆ ತೀವ್ರಗೊಳಿಸಿದ ವಿವಿ ಪುರಂ ಠಾಣೆ ಇನ್ಸ್ಪೆಕ್ಟರ್ ವೆಂಕಟೇಶ್ ನಿಗೂಢ ಕೊಲೆ ರಹಸ್ಯ ಬಯಲಿಗೆ ಎಳೆದಿದ್ದಾರೆ.

ಮೃತ ಸಂಪತ್ ಕುಮಾರ್ ಹಾಗೂ ಪುತ್ರನ ನಡುವೆ ಅನ್ಯೋನ್ಯತೆ ಇರಲಿಲ್ಲ ಎಂದು ಹೇಳಲಾಗಿದೆ.ಈ ಹಿನ್ನಲೆ ತಾನೇ ಅಪ್ಪನನ್ನ ಕೊಂದು ಆಗುಂತಕ ವ್ಯಕ್ತಿಗಳ ಮೇಲೆ ಆರೋಪ ಹೊತೆಸಿ ನುಣುಚಿಕೊಳ್ಳುವ ಯತ್ನ ಮಾಡಿ ಪೊಲೀಸರು ಹೆಣೆದ ಬಲೆಗೆ ಸಿಲುಕಿದ್ದಾನೆ…

Spread the love

Related post

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…
ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…

Leave a Reply

Your email address will not be published. Required fields are marked *