ರಿಯಲ್ ಎಸ್ಟೇಟ್ ಉದ್ಯಮಿ ಹತ್ಯೆ…ಅಪ್ರಾಪ್ತ ಮಗನೇ ಹಂತಕ…

ರಿಯಲ್ ಎಸ್ಟೇಟ್ ಉದ್ಯಮಿ ಹತ್ಯೆ…ಅಪ್ರಾಪ್ತ ಮಗನೇ ಹಂತಕ…

ಮೈಸೂರು,ಆಗಸ್ಟ್9,Tv10 ಕನ್ನಡ
ಮೈಸೂರಿನ ಬೃಂದಾವನ ಬಡಾವಣೆಯಲ್ಲಿ ನಡೆದ ರಿಯಲ್ ಎಸ್ಟೇಟ್ ಉದ್ಯಮಿ ಹತ್ಯೆ ಪ್ರಕರಣ ಟ್ವಿಸ್ಟ್ ದೊರೆತಿದೆ.ಸ್ವಂತ ಮಗನೇ ಹಂತಕನಾಗಿರುವ ಶಾಕಿಂಗ್ ನ್ಯೂಸ್ ಬೆಳಕಿಗೆ ಬಂದಿದೆ.16 ವರ್ಷದ ಅಪ್ರಾಪ್ತ ತಂದೆಯನ್ನ ಕೊಂದು ಪೊಲೀಸರಿಗೆ ಚೆಳ್ಳೆ ಹಣ್ಣು ತಿನ್ನಿಸಲು ಯತ್ನಿಸಿದ್ದಾನೆ.ಸಧ್ಯ ಪೊಲೀಸರು ನಡೆಸಿದ ತೀವ್ರ ವಿಚಾರಣೆಯಲ್ಲಿ ಅಪ್ರಾಪ್ತ ಪುತ್ರನೇ ಹಂತಕ ಎಂಬ ವಿಚಾರ ಬೆಳಕಿಗೆ ಬಂದಿದೆ.

ನಿನ್ನೆ ಸೋಮವಾರ ಹಾಡುಹಗಲೇ ಮನೆಯಲ್ಲಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಸಂಪತ್ ಕುಮಾರ್(63)ಭೀಕರವಾಗಿ ಕೊಲೆಯಾಗಿದ್ದರು.ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ ವೇಳೆ ಅಪ್ರಾಪ್ತ ಮಗ ಆಗುಂತಕ ವ್ಯಕ್ತಿಯೊಬ್ಬ ಏಕಾಏಕಿ ಮನೆಗೆ ನುಗ್ಗಿ ರಾಡ್ ನಿಂದ ಹಲ್ಲೆ ಮಾಡಿ ಕೊಂದು ಪರಾರಿಯಾದನೆಂದು ಹೇಳಿಕೆ ನೀಡಿದ್ದ.ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿದ ವಿವಿ ಪುರಂ ಠಾಣಾ ಪೊಲೀಸರು ತನಿಖೆ ಚುರುಕುಗೊಳಿಸಿದ್ದರು.ಪೊಲೀಸ್ ಕಮೀಷನ್ ಡಾ.ಚಂದ್ರಗುಪ್ತ,ಡಿಸಿಪಿ ಪ್ರವೀಣ್ ಗುಂಟಿ ಹಾಗೂ ಗೀತಾ ಪ್ರಸನ್ನ ರವರು ಸ್ಥಳಕ್ಕೆ ಭೇಟಿ ನೀಡಿ ಪುತ್ರನನ್ನ ಸಾಕಷ್ಟು ಪ್ರಶ್ನೆ ಮಾಡಿದ್ದರು.ಪುತ್ರನಿಂದ ಪೊಲೀಸರಿಗೆ ಸಮಂಜಸವಾದ ಉತ್ತರ ಬಂದಿರಲಿಲ್ಲ.ಹಾಕಿದ ಪ್ರಶ್ನೆಗಳಿಗೆ ಗೊಂದಲ ಮೂಡುವಂತೆ ಉತ್ತರ ನೀಡುತ್ತಿದ್ದ.ಮಗನ ವರ್ತನೆ ಹಾಗೂ ಉತ್ತರಗಳು ಸಾಕಷ್ಟು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ.ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದ ಪತ್ನಿ ಗೀತಾ ಶಾಲೆಯಿಂದ ಹಿಂದಿರುಗಿ ಬಂದು ನೀಡಿದ ಮಾಹಿತಿಯೂ ಮಗನ ವಿರುದ್ದ ಅನುಮಾನದ ಹುತ್ತ ಮೂಡಿತು.ಪುತ್ರನನ್ನ ವಶಕ್ಕೆ ಪಡೆದು ವಿಚಾರಣೆ ತೀವ್ರಗೊಳಿಸಿದ ವಿವಿ ಪುರಂ ಠಾಣೆ ಇನ್ಸ್ಪೆಕ್ಟರ್ ವೆಂಕಟೇಶ್ ನಿಗೂಢ ಕೊಲೆ ರಹಸ್ಯ ಬಯಲಿಗೆ ಎಳೆದಿದ್ದಾರೆ.

ಮೃತ ಸಂಪತ್ ಕುಮಾರ್ ಹಾಗೂ ಪುತ್ರನ ನಡುವೆ ಅನ್ಯೋನ್ಯತೆ ಇರಲಿಲ್ಲ ಎಂದು ಹೇಳಲಾಗಿದೆ.ಈ ಹಿನ್ನಲೆ ತಾನೇ ಅಪ್ಪನನ್ನ ಕೊಂದು ಆಗುಂತಕ ವ್ಯಕ್ತಿಗಳ ಮೇಲೆ ಆರೋಪ ಹೊತೆಸಿ ನುಣುಚಿಕೊಳ್ಳುವ ಯತ್ನ ಮಾಡಿ ಪೊಲೀಸರು ಹೆಣೆದ ಬಲೆಗೆ ಸಿಲುಕಿದ್ದಾನೆ…

Spread the love

Related post

2 ಕೋಟಿ ವೆಚ್ಚದ ಚಕ್ ಡ್ಯಾಮ್, ತಡೆಗೋಡೆ ನಿರ್ಮಾಣ ಕಾಮಗಾರಿಗೆ ಚಾಲನೆ… ಭೂಮಿ ಪೂಜೆ ನೆರವೇರಿಸಿದ ಶಾಸಕ ಎಂ. ಆರ್ ಮಂಜುನಾಥ್…

2 ಕೋಟಿ ವೆಚ್ಚದ ಚಕ್ ಡ್ಯಾಮ್, ತಡೆಗೋಡೆ ನಿರ್ಮಾಣ ಕಾಮಗಾರಿಗೆ ಚಾಲನೆ……

2 ಕೋಟಿ ವೆಚ್ಚದ ಚಕ್ ಡ್ಯಾಮ್, ತಡೆಗೋಡೆ ನಿರ್ಮಾಣ ಕಾಮಗಾರಿಗೆ ಚಾಲನೆ… ಭೂಮಿ ಪೂಜೆ ನೆರವೇರಿಸಿದ ಶಾಸಕ ಎಂ. ಆರ್ ಮಂಜುನಾಥ್… ಹನೂರು,ಅ17,Tv10 ಕನ್ನಡ ತಾಲೂಕಿನ ಪ್ರಸಿದ್ಧ ಧಾರ್ಮಿಕ…
ಮಲೆ ಮಹದೇಶ್ವರ ಬೆಟ್ಟದ ದೇವಾಲಯದಲ್ಲಿ ಹುಂಡಿ ಎಣಿಕೆ ಕಾರ್ಯ…2.27 ಕೋಟಿ ಸಂಗ್ರಹ…ನಿಷೇಧಿತ 2000 ಮುಖಬೆಲೆಯ ನೋಟುಗಳು ಪತ್ತೆ…

ಮಲೆ ಮಹದೇಶ್ವರ ಬೆಟ್ಟದ ದೇವಾಲಯದಲ್ಲಿ ಹುಂಡಿ ಎಣಿಕೆ ಕಾರ್ಯ…2.27 ಕೋಟಿ ಸಂಗ್ರಹ…ನಿಷೇಧಿತ…

ಮಲೆ ಮಹದೇಶ್ವರ ಬೆಟ್ಟದ ದೇವಾಲಯದಲ್ಲಿ ಹುಂಡಿ ಎಣಿಕೆ ಕಾರ್ಯ…2.27 ಕೋಟಿ ಸಂಗ್ರಹ…ನಿಷೇಧಿತ 2000 ಮುಖಬೆಲೆಯ ನೋಟುಗಳು ಪತ್ತೆ… ಹನೂರು,ಅ16,Tv10 ಕನ್ನಡ ಹನೂರು ತಾಲೂಕಿನ ಪ್ರಸಿದ್ಧ ಯಾತ್ರಾಸ್ಥಳವಾದ ಶ್ರೀ ಮಲೆ…
ಮಾಧ್ಯಮದವರ ಜೊತೆ ರಿಷಬ್ ಶೆಟ್ಟಿ ಸೆಲ್ಫಿ…

ಮಾಧ್ಯಮದವರ ಜೊತೆ ರಿಷಬ್ ಶೆಟ್ಟಿ ಸೆಲ್ಫಿ…

ಮಾಧ್ಯಮದವರ ಜೊತೆ ರಿಷಬ್ ಶೆಟ್ಟಿ ಸೆಲ್ಫಿ… ಮೈಸೂರು,ಅ16,Tv10 ಕನ್ನಡ ಮಾಧ್ಯಮದ ಗೆಳೆಯರ ಜೊತೆ ರಿಷಬ್ ಶೆಟ್ಟಿ ಸೆಲ್ಫಿ ಕ್ಲಿಕ್ಕಿಸಿದ್ದಾರೆ.ಚಾಮುಂಡಿ ಬೆಟ್ಟಕ್ಕೆ ಭೇಟಿ‌ ನೀಡಿದ ವೇಳೆತಾವೇ ಮೊಬೈಲ್ ಪಡೆದು ಸೆಲ್ಫಿ…

Leave a Reply

Your email address will not be published. Required fields are marked *