ರಿಯಲ್ ಎಸ್ಟೇಟ್ ಉದ್ಯಮಿ ಹತ್ಯೆ…ಅಪ್ರಾಪ್ತ ಮಗನೇ ಹಂತಕ…

ರಿಯಲ್ ಎಸ್ಟೇಟ್ ಉದ್ಯಮಿ ಹತ್ಯೆ…ಅಪ್ರಾಪ್ತ ಮಗನೇ ಹಂತಕ…

ಮೈಸೂರು,ಆಗಸ್ಟ್9,Tv10 ಕನ್ನಡ
ಮೈಸೂರಿನ ಬೃಂದಾವನ ಬಡಾವಣೆಯಲ್ಲಿ ನಡೆದ ರಿಯಲ್ ಎಸ್ಟೇಟ್ ಉದ್ಯಮಿ ಹತ್ಯೆ ಪ್ರಕರಣ ಟ್ವಿಸ್ಟ್ ದೊರೆತಿದೆ.ಸ್ವಂತ ಮಗನೇ ಹಂತಕನಾಗಿರುವ ಶಾಕಿಂಗ್ ನ್ಯೂಸ್ ಬೆಳಕಿಗೆ ಬಂದಿದೆ.16 ವರ್ಷದ ಅಪ್ರಾಪ್ತ ತಂದೆಯನ್ನ ಕೊಂದು ಪೊಲೀಸರಿಗೆ ಚೆಳ್ಳೆ ಹಣ್ಣು ತಿನ್ನಿಸಲು ಯತ್ನಿಸಿದ್ದಾನೆ.ಸಧ್ಯ ಪೊಲೀಸರು ನಡೆಸಿದ ತೀವ್ರ ವಿಚಾರಣೆಯಲ್ಲಿ ಅಪ್ರಾಪ್ತ ಪುತ್ರನೇ ಹಂತಕ ಎಂಬ ವಿಚಾರ ಬೆಳಕಿಗೆ ಬಂದಿದೆ.

ನಿನ್ನೆ ಸೋಮವಾರ ಹಾಡುಹಗಲೇ ಮನೆಯಲ್ಲಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಸಂಪತ್ ಕುಮಾರ್(63)ಭೀಕರವಾಗಿ ಕೊಲೆಯಾಗಿದ್ದರು.ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ ವೇಳೆ ಅಪ್ರಾಪ್ತ ಮಗ ಆಗುಂತಕ ವ್ಯಕ್ತಿಯೊಬ್ಬ ಏಕಾಏಕಿ ಮನೆಗೆ ನುಗ್ಗಿ ರಾಡ್ ನಿಂದ ಹಲ್ಲೆ ಮಾಡಿ ಕೊಂದು ಪರಾರಿಯಾದನೆಂದು ಹೇಳಿಕೆ ನೀಡಿದ್ದ.ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿದ ವಿವಿ ಪುರಂ ಠಾಣಾ ಪೊಲೀಸರು ತನಿಖೆ ಚುರುಕುಗೊಳಿಸಿದ್ದರು.ಪೊಲೀಸ್ ಕಮೀಷನ್ ಡಾ.ಚಂದ್ರಗುಪ್ತ,ಡಿಸಿಪಿ ಪ್ರವೀಣ್ ಗುಂಟಿ ಹಾಗೂ ಗೀತಾ ಪ್ರಸನ್ನ ರವರು ಸ್ಥಳಕ್ಕೆ ಭೇಟಿ ನೀಡಿ ಪುತ್ರನನ್ನ ಸಾಕಷ್ಟು ಪ್ರಶ್ನೆ ಮಾಡಿದ್ದರು.ಪುತ್ರನಿಂದ ಪೊಲೀಸರಿಗೆ ಸಮಂಜಸವಾದ ಉತ್ತರ ಬಂದಿರಲಿಲ್ಲ.ಹಾಕಿದ ಪ್ರಶ್ನೆಗಳಿಗೆ ಗೊಂದಲ ಮೂಡುವಂತೆ ಉತ್ತರ ನೀಡುತ್ತಿದ್ದ.ಮಗನ ವರ್ತನೆ ಹಾಗೂ ಉತ್ತರಗಳು ಸಾಕಷ್ಟು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ.ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದ ಪತ್ನಿ ಗೀತಾ ಶಾಲೆಯಿಂದ ಹಿಂದಿರುಗಿ ಬಂದು ನೀಡಿದ ಮಾಹಿತಿಯೂ ಮಗನ ವಿರುದ್ದ ಅನುಮಾನದ ಹುತ್ತ ಮೂಡಿತು.ಪುತ್ರನನ್ನ ವಶಕ್ಕೆ ಪಡೆದು ವಿಚಾರಣೆ ತೀವ್ರಗೊಳಿಸಿದ ವಿವಿ ಪುರಂ ಠಾಣೆ ಇನ್ಸ್ಪೆಕ್ಟರ್ ವೆಂಕಟೇಶ್ ನಿಗೂಢ ಕೊಲೆ ರಹಸ್ಯ ಬಯಲಿಗೆ ಎಳೆದಿದ್ದಾರೆ.

ಮೃತ ಸಂಪತ್ ಕುಮಾರ್ ಹಾಗೂ ಪುತ್ರನ ನಡುವೆ ಅನ್ಯೋನ್ಯತೆ ಇರಲಿಲ್ಲ ಎಂದು ಹೇಳಲಾಗಿದೆ.ಈ ಹಿನ್ನಲೆ ತಾನೇ ಅಪ್ಪನನ್ನ ಕೊಂದು ಆಗುಂತಕ ವ್ಯಕ್ತಿಗಳ ಮೇಲೆ ಆರೋಪ ಹೊತೆಸಿ ನುಣುಚಿಕೊಳ್ಳುವ ಯತ್ನ ಮಾಡಿ ಪೊಲೀಸರು ಹೆಣೆದ ಬಲೆಗೆ ಸಿಲುಕಿದ್ದಾನೆ…

Spread the love

Related post

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…
ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025 ಕಿರೀಟ…

ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025…

ಮೈಸೂರು,ಜೂ26,Tv10 ಕನ್ನಡ ಮೈಸೂರಿನ ಪೀಡಿಯಾಟ್ರಿಕ್ ನ್ಯೂರಾಲಜಿಸ್ಟ್ ಡಾ.ಅನೂಷಾ ರಾಜ್ ರವರು ಮಿಸ್ ಮೆಡಿಕ್ವೀನ್ 2025 ಸ್ಪರ್ಧೆಯಲ್ಲಿ ವಿಜಯಿಯಾಗಿ ಹೊರಹೊಮ್ಮಿದ್ದಾರೆ. ಜೂನ್ 22 ರಂದು ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಸ್ಪರ್ಧೆಯಲ್ಲಿ…

Leave a Reply

Your email address will not be published. Required fields are marked *