ಕಬ್ಬಿನ ದರ ನಿಗದಿಗೆ ವಿರೋಧ…ಸಿಡಿದೆದ್ದ ಅನ್ನದಾತ…ಬೆಂಗಳೂರು-ಮೈಸೂರು ಹೆದ್ದಾರಿ ಬಂದ್…

ಕಬ್ಬಿನ ದರ ನಿಗದಿಗೆ ವಿರೋಧ…ಸಿಡಿದೆದ್ದ ಅನ್ನದಾತ…ಬೆಂಗಳೂರು-ಮೈಸೂರು ಹೆದ್ದಾರಿ ಬಂದ್…

ಮೈಸೂರು,ಆಗಸ್ಟ್12,Tv10 ಕನ್ನಡ
ಕಬ್ಬಿನ ಎಫ್ ಆರ್ ಪಿ ದರ ನಿಗದಿ, ವಿದ್ಯುತ್ ಕಾಯ್ದೆ ಖಾಸಗೀಕರಣ ವಿರೋಧಿಸಿ ರೈತರು ಇಂದು ಮೈಸೂರಿನ ಕೊಲಂಬಿಯಾ ಆಸ್ಪತ್ರೆ ವೃತ್ತದಲ್ಲಿ ಒಂದು ಗಂಟೆ ಹೆದ್ದಾರಿ ಬಂದ್ ಮಾಡಿ ಆಕ್ರೋಷ ವ್ಯಕ್ತಪಡಿಸಿದರು.ರೈತ ಮುಖಂಡ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ರಸ್ತೆ ತಡೆ ಚಳುವಳಿ ನಡೆಯಿತು.ಪರಿಣಾಮ ಸುಗಮ ವಾಹನ ಸಂಚಾರಕ್ಕೆ ಅಡ್ಡಿಯಾಯಿತು. ಕಬ್ಬಿಗೆ ಬಳಸುವ ರಸಗೊಬ್ಬರ, ಪೊಟ್ಯಾಶ್ ಚೀಲಕ್ಕೆ ಹೆಚ್ಚುವರಿಯಾಗಿ 900 ರೂ ಡಿಎಪಿ ಬೆಲೆ 350 ಏರಿಕೆಯಾಗಿದೆ ಕಟಾವು ಕೂಲಿ 400 ರೂಪಾಯಿ, ಬೀಜದ ಬೆಲೆ ಎಕರೆಗೆ 500 ಹೆಚ್ಚುವರಿಯಾಗಿ ಎಲ್ಲಾ ಏರಿಕೆಯಾಗಿದೆ, ಆದರೆ ಪ್ರಸಕ್ತ ಸಾಲಿನಲ್ಲಿ ಕೇಂದ್ರ ಸರ್ಕಾರ ಕೇವಲ 150 ರೂ ಏರಿಕೆ ಮಾಡಿ ಟನ್ಗೆ 3050 ನಿಗದಿ ಮಾಡಿದೆ, ಇದು ಕಬ್ಬು ಬೆಳೆಗಾರರಿಗೆ ಮಾಡಿದ ಅನ್ಯಾಯ ಕಬ್ಬು ಬೆಳೆಯುವ ರೈತರು ಈ ದರ ಪುನರ್ ಪರಿಶೀಲನೆ ಮಾಡಬೇಕೆಂದು ಒತ್ತಾಯಿಸಿದರು. ವಿದ್ಯುತ್ ಖಾಸಗೀಕರಣ ದಿಂದ ಕೃಷಿ ಪಂಪ್ಸೆಟ್ಗಳಿಗೆ ಉಚಿತ ವಿದ್ಯುತ್ ನಿಲ್ಲುತ್ತದೆ, ಖಾಸಗೀಕರಣ ಕೈಬಿಡಬೇಕು.
ಅತಿವೃಷ್ಟಿ ಮಳೆಹಾನಿ ಬೆಳೆನಷ್ಟ ಪರಿಹಾರ ಕೂಡಲೇ ರೈತರಿಗೆ ತಲುಪಬೇಕು.ಕೂಡಲೇ
ಸರ್ಕಾರ ಎಚ್ಚೆತ್ತುಕೊಂಡು ವಿವಿಧ ಬೇಡಿಕೆ ಈಡೇರಿಸದಿದ್ದಲ್ಲಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ ದೆಹಲಿ ಮಾದರಿ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.ರಸ್ತೆ ತಡೆ ಪ್ರತಿಭಟನೆಯಲ್ಲಿ ತಾಲೂಕ ಅಧ್ಯಕ್ಷ ಲಕ್ಷ್ಮಿಪುರ ವೆಂಕಟೇಶ್,ಪ್ರಧಾನ ಕಾರ್ಯದರ್ಶಿ ಬರಡನಪುರ ನಾಗರಾಜ್, ವರ್ಕೋಡ್ ನಾಗೇಶ್, ಕಾಟೂರು ಮಹದೇವಸ್ವಾಮಿ, ಮಹದೇವ್, ಬಸವರಾಜು, ಮಹದೇವಸ್ವಾಮಿ,
ಶ್ರೀರಾಮ್ ,ರಾಜು, ಭಾಗ್ಯಮ್ಮ, ಸಾಕಮ್ಮ ಶಿವಣ್ಣ ಮಾಲಿಂಗನಾಯಕ್, ಬಸವರಾಜಪ್ಪ, ಮಂಜು ಲಿಂಗಣ್ಣ ನೂರಾರು ಜನರು ಭಾಗವಹಿಸಿದ್ದರು…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *