ಕಬ್ಬಿನ ದರ ನಿಗದಿಗೆ ವಿರೋಧ…ಸಿಡಿದೆದ್ದ ಅನ್ನದಾತ…ಬೆಂಗಳೂರು-ಮೈಸೂರು ಹೆದ್ದಾರಿ ಬಂದ್…

ಕಬ್ಬಿನ ದರ ನಿಗದಿಗೆ ವಿರೋಧ…ಸಿಡಿದೆದ್ದ ಅನ್ನದಾತ…ಬೆಂಗಳೂರು-ಮೈಸೂರು ಹೆದ್ದಾರಿ ಬಂದ್…

ಮೈಸೂರು,ಆಗಸ್ಟ್12,Tv10 ಕನ್ನಡ
ಕಬ್ಬಿನ ಎಫ್ ಆರ್ ಪಿ ದರ ನಿಗದಿ, ವಿದ್ಯುತ್ ಕಾಯ್ದೆ ಖಾಸಗೀಕರಣ ವಿರೋಧಿಸಿ ರೈತರು ಇಂದು ಮೈಸೂರಿನ ಕೊಲಂಬಿಯಾ ಆಸ್ಪತ್ರೆ ವೃತ್ತದಲ್ಲಿ ಒಂದು ಗಂಟೆ ಹೆದ್ದಾರಿ ಬಂದ್ ಮಾಡಿ ಆಕ್ರೋಷ ವ್ಯಕ್ತಪಡಿಸಿದರು.ರೈತ ಮುಖಂಡ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ರಸ್ತೆ ತಡೆ ಚಳುವಳಿ ನಡೆಯಿತು.ಪರಿಣಾಮ ಸುಗಮ ವಾಹನ ಸಂಚಾರಕ್ಕೆ ಅಡ್ಡಿಯಾಯಿತು. ಕಬ್ಬಿಗೆ ಬಳಸುವ ರಸಗೊಬ್ಬರ, ಪೊಟ್ಯಾಶ್ ಚೀಲಕ್ಕೆ ಹೆಚ್ಚುವರಿಯಾಗಿ 900 ರೂ ಡಿಎಪಿ ಬೆಲೆ 350 ಏರಿಕೆಯಾಗಿದೆ ಕಟಾವು ಕೂಲಿ 400 ರೂಪಾಯಿ, ಬೀಜದ ಬೆಲೆ ಎಕರೆಗೆ 500 ಹೆಚ್ಚುವರಿಯಾಗಿ ಎಲ್ಲಾ ಏರಿಕೆಯಾಗಿದೆ, ಆದರೆ ಪ್ರಸಕ್ತ ಸಾಲಿನಲ್ಲಿ ಕೇಂದ್ರ ಸರ್ಕಾರ ಕೇವಲ 150 ರೂ ಏರಿಕೆ ಮಾಡಿ ಟನ್ಗೆ 3050 ನಿಗದಿ ಮಾಡಿದೆ, ಇದು ಕಬ್ಬು ಬೆಳೆಗಾರರಿಗೆ ಮಾಡಿದ ಅನ್ಯಾಯ ಕಬ್ಬು ಬೆಳೆಯುವ ರೈತರು ಈ ದರ ಪುನರ್ ಪರಿಶೀಲನೆ ಮಾಡಬೇಕೆಂದು ಒತ್ತಾಯಿಸಿದರು. ವಿದ್ಯುತ್ ಖಾಸಗೀಕರಣ ದಿಂದ ಕೃಷಿ ಪಂಪ್ಸೆಟ್ಗಳಿಗೆ ಉಚಿತ ವಿದ್ಯುತ್ ನಿಲ್ಲುತ್ತದೆ, ಖಾಸಗೀಕರಣ ಕೈಬಿಡಬೇಕು.
ಅತಿವೃಷ್ಟಿ ಮಳೆಹಾನಿ ಬೆಳೆನಷ್ಟ ಪರಿಹಾರ ಕೂಡಲೇ ರೈತರಿಗೆ ತಲುಪಬೇಕು.ಕೂಡಲೇ
ಸರ್ಕಾರ ಎಚ್ಚೆತ್ತುಕೊಂಡು ವಿವಿಧ ಬೇಡಿಕೆ ಈಡೇರಿಸದಿದ್ದಲ್ಲಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ ದೆಹಲಿ ಮಾದರಿ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.ರಸ್ತೆ ತಡೆ ಪ್ರತಿಭಟನೆಯಲ್ಲಿ ತಾಲೂಕ ಅಧ್ಯಕ್ಷ ಲಕ್ಷ್ಮಿಪುರ ವೆಂಕಟೇಶ್,ಪ್ರಧಾನ ಕಾರ್ಯದರ್ಶಿ ಬರಡನಪುರ ನಾಗರಾಜ್, ವರ್ಕೋಡ್ ನಾಗೇಶ್, ಕಾಟೂರು ಮಹದೇವಸ್ವಾಮಿ, ಮಹದೇವ್, ಬಸವರಾಜು, ಮಹದೇವಸ್ವಾಮಿ,
ಶ್ರೀರಾಮ್ ,ರಾಜು, ಭಾಗ್ಯಮ್ಮ, ಸಾಕಮ್ಮ ಶಿವಣ್ಣ ಮಾಲಿಂಗನಾಯಕ್, ಬಸವರಾಜಪ್ಪ, ಮಂಜು ಲಿಂಗಣ್ಣ ನೂರಾರು ಜನರು ಭಾಗವಹಿಸಿದ್ದರು…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *