ಕಬ್ಬಿನ ದರ ನಿಗದಿಗೆ ವಿರೋಧ…ಸಿಡಿದೆದ್ದ ಅನ್ನದಾತ…ಬೆಂಗಳೂರು-ಮೈಸೂರು ಹೆದ್ದಾರಿ ಬಂದ್…

ಕಬ್ಬಿನ ದರ ನಿಗದಿಗೆ ವಿರೋಧ…ಸಿಡಿದೆದ್ದ ಅನ್ನದಾತ…ಬೆಂಗಳೂರು-ಮೈಸೂರು ಹೆದ್ದಾರಿ ಬಂದ್…

ಮೈಸೂರು,ಆಗಸ್ಟ್12,Tv10 ಕನ್ನಡ
ಕಬ್ಬಿನ ಎಫ್ ಆರ್ ಪಿ ದರ ನಿಗದಿ, ವಿದ್ಯುತ್ ಕಾಯ್ದೆ ಖಾಸಗೀಕರಣ ವಿರೋಧಿಸಿ ರೈತರು ಇಂದು ಮೈಸೂರಿನ ಕೊಲಂಬಿಯಾ ಆಸ್ಪತ್ರೆ ವೃತ್ತದಲ್ಲಿ ಒಂದು ಗಂಟೆ ಹೆದ್ದಾರಿ ಬಂದ್ ಮಾಡಿ ಆಕ್ರೋಷ ವ್ಯಕ್ತಪಡಿಸಿದರು.ರೈತ ಮುಖಂಡ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ರಸ್ತೆ ತಡೆ ಚಳುವಳಿ ನಡೆಯಿತು.ಪರಿಣಾಮ ಸುಗಮ ವಾಹನ ಸಂಚಾರಕ್ಕೆ ಅಡ್ಡಿಯಾಯಿತು. ಕಬ್ಬಿಗೆ ಬಳಸುವ ರಸಗೊಬ್ಬರ, ಪೊಟ್ಯಾಶ್ ಚೀಲಕ್ಕೆ ಹೆಚ್ಚುವರಿಯಾಗಿ 900 ರೂ ಡಿಎಪಿ ಬೆಲೆ 350 ಏರಿಕೆಯಾಗಿದೆ ಕಟಾವು ಕೂಲಿ 400 ರೂಪಾಯಿ, ಬೀಜದ ಬೆಲೆ ಎಕರೆಗೆ 500 ಹೆಚ್ಚುವರಿಯಾಗಿ ಎಲ್ಲಾ ಏರಿಕೆಯಾಗಿದೆ, ಆದರೆ ಪ್ರಸಕ್ತ ಸಾಲಿನಲ್ಲಿ ಕೇಂದ್ರ ಸರ್ಕಾರ ಕೇವಲ 150 ರೂ ಏರಿಕೆ ಮಾಡಿ ಟನ್ಗೆ 3050 ನಿಗದಿ ಮಾಡಿದೆ, ಇದು ಕಬ್ಬು ಬೆಳೆಗಾರರಿಗೆ ಮಾಡಿದ ಅನ್ಯಾಯ ಕಬ್ಬು ಬೆಳೆಯುವ ರೈತರು ಈ ದರ ಪುನರ್ ಪರಿಶೀಲನೆ ಮಾಡಬೇಕೆಂದು ಒತ್ತಾಯಿಸಿದರು. ವಿದ್ಯುತ್ ಖಾಸಗೀಕರಣ ದಿಂದ ಕೃಷಿ ಪಂಪ್ಸೆಟ್ಗಳಿಗೆ ಉಚಿತ ವಿದ್ಯುತ್ ನಿಲ್ಲುತ್ತದೆ, ಖಾಸಗೀಕರಣ ಕೈಬಿಡಬೇಕು.
ಅತಿವೃಷ್ಟಿ ಮಳೆಹಾನಿ ಬೆಳೆನಷ್ಟ ಪರಿಹಾರ ಕೂಡಲೇ ರೈತರಿಗೆ ತಲುಪಬೇಕು.ಕೂಡಲೇ
ಸರ್ಕಾರ ಎಚ್ಚೆತ್ತುಕೊಂಡು ವಿವಿಧ ಬೇಡಿಕೆ ಈಡೇರಿಸದಿದ್ದಲ್ಲಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ ದೆಹಲಿ ಮಾದರಿ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.ರಸ್ತೆ ತಡೆ ಪ್ರತಿಭಟನೆಯಲ್ಲಿ ತಾಲೂಕ ಅಧ್ಯಕ್ಷ ಲಕ್ಷ್ಮಿಪುರ ವೆಂಕಟೇಶ್,ಪ್ರಧಾನ ಕಾರ್ಯದರ್ಶಿ ಬರಡನಪುರ ನಾಗರಾಜ್, ವರ್ಕೋಡ್ ನಾಗೇಶ್, ಕಾಟೂರು ಮಹದೇವಸ್ವಾಮಿ, ಮಹದೇವ್, ಬಸವರಾಜು, ಮಹದೇವಸ್ವಾಮಿ,
ಶ್ರೀರಾಮ್ ,ರಾಜು, ಭಾಗ್ಯಮ್ಮ, ಸಾಕಮ್ಮ ಶಿವಣ್ಣ ಮಾಲಿಂಗನಾಯಕ್, ಬಸವರಾಜಪ್ಪ, ಮಂಜು ಲಿಂಗಣ್ಣ ನೂರಾರು ಜನರು ಭಾಗವಹಿಸಿದ್ದರು…

Spread the love

Related post

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…
ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು… ಎಚ್.ಡಿ.ಕೋಟೆ,ಜೂ4,Tv10 ಕನ್ನಡ ಸರ್ಕಾರಿ ಶಾಲಾ ದಾಖಲಾತಿಯಲ್ಲಿ ಬೋವಿ ಎಂಬುದನ್ನು ಬೋಯಿ ಎಂದು ತಿದ್ದಿದ ಆರೋಪದ ಹಿನ್ನಲೆ ಶಾಲೆ ಮುಖ್ಯಶಿಕ್ಷಕ ಅಮಾನತುಪಡಿಸಲಾಗಿದೆ.ಹೆಚ್.ಡಿ.ಕೋಟೆ…
ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ

ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ

ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ ಚಾಮರಾಜನಗರ ಜಿಲ್ಲೆಯ ಚಿಕ್ಕಾಟಿ ಗ್ರಾಮದಲ್ಲಿ ಗ್ರಾಮ ಪಂಚಾಯತ್, ಸಂಜೀವಿನಿ ಇಲಾಖೆ ಹಾಗೂ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಮಹಿಳೆಯರ ಆರೋಗ್ಯ…

Leave a Reply

Your email address will not be published. Required fields are marked *