15 ವರ್ಷಗಳಿಂದ ಕಗ್ಗತ್ತಲಲ್ಲಿ ಮುಳುಗಿದ ಬಡಾವಣೆ…ಸಂಪರ್ಕಕ್ಕಾಗಿ ಅಲೆದಾಡುತ್ತಿರುವ ನಿವಾಸಿಗಳು…

15 ವರ್ಷಗಳಿಂದ ಕಗ್ಗತ್ತಲಲ್ಲಿ ಮುಳುಗಿದ ಬಡಾವಣೆ…ಸಂಪರ್ಕಕ್ಕಾಗಿ ಅಲೆದಾಡುತ್ತಿರುವ ನಿವಾಸಿಗಳು…

15 ವರ್ಷಗಳಿಂದ ಕಗ್ಗತ್ತಲಲ್ಲಿ ಮುಳುಗಿದ ಬಡಾವಣೆ…ಸಂಪರ್ಕಕ್ಕಾಗಿ ಅಲೆದಾಡುತ್ತಿರುವ ನಿವಾಸಿಗಳು…

ನಂಜನಗೂಡು,ಆಗಸ್ಟ್20,Tv10 ಕನ್ನಡ
ಪ್ರತಿಯೊಬ್ಬರಿಗೂ ಮೂಲಭೂತ ಸೌಕರ್ಯ ಒದಗಿಸಬೇಕಾದ ಕರ್ತವ್ಯ ಸರ್ಕಾರದ್ದು.ಆದ್ರೆ ಕಳೆದ 15 ವರ್ಷಗಳಿಂದ ವಿದ್ಯುತ್ ಸಂಪರ್ಕವನ್ನೇ ಕಾಣದ ಬಡಾವಣೆಯೊಂದು ಕಗ್ಗಲತ್ತಲಿನಲ್ಲೇ ಮುಳುಗಿದೆ.ವಿದ್ಯುತ್ ಸಂಪರ್ಕಕ್ಕಾಗಿ ಸರ್ಕಾರಿ ಕಚೇರಿಗಳಿಗೆ ಅಲೆದಾಡಿದ ನಿವಾಸಿಗಳು ಬೇಸತ್ತಿದ್ದಾರೆ.ನಂಜನಗೂಡು ತಾಲೂಕಿನ ಹಂಚೀಪುರ ಗ್ರಾಮದ(ದೇವರಾಯ ಶೆಟ್ಟಿಪುರ) ಹೊಸ ಬಡಾವಣೆ ನಿವಾಸಿಗಳು ವಿದ್ಯುತ್ ಗಾಗಿ ಪರಿಪಾಟಲು ಅನುಭವಿಸುತ್ತಿದ್ದಾರೆ.
ಬೆಳಕೇ ಇಲ್ಲದ ಬಡಾವಣೆಯಲ್ಲಿ ಬಡಮಕ್ಕಳ ವಿದ್ಯಾಭ್ಯಾಸ ಮೊಟಕಾಗಿದೆ.ಬಂಡೀಪುರ ರಾಷ್ಟ್ರೀಯ ಉದ್ಯಾನದ ಕಾಡಂಚಿನಲ್ಲಿರುವ ಹಂಚೀಪುರ ಗ್ರಾಮದಲ್ಲಿ ಇಂತಹ ಪರಿಸ್ಥಿತಿ ಉದ್ಭವವಾಗಿದೆ. ಬಡಾವಣೆಯಲ್ಲಿ ಇಪ್ಪತ್ತಕ್ಕೂ ಹೆಚ್ಚು ಕುಟುಂಬಗಳು ವಾಸಿಸುತ್ತಿದೆ.ಈ ಬಡಾವಣೆಯ ನಿವಾಸಿಗಳು
ಬೀದಿದೀಪ ಒಳಚರಂಡಿ ಮತ್ತು ರಸ್ತೆ ಅಭಿವೃದ್ಧಿಗಾಗಿ ಸಾಕಷ್ಟು ಜನಪ್ರತಿನಿಧಿಗಳ ಮೊರೆ ಹೋಗಿದ್ದಾರೆ. 1ತಿಂಗಳ ಹಿಂದೆ ನಂಜನಗೂಡಿನ ತಹಸೀಲ್ದಾರ್ ಶಿವಮೂರ್ತಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿ ವಿದ್ಯುತ್ ವ್ಯವಸ್ಥೆಗೆ ಕ್ರಮ ಕೈಗೊಂಡಿದ್ದರು. ಆದರೆ ಇದುವರೆಗೆ ವಿದ್ಯುತ್ ಸಂಪರ್ಕ ಬಂದಿಲ್ಲ.
ಸ್ಥಳೀಯ ಶಾಸಕರಾಗಿರಲಿ ಮಾಜಿ ಮಂತ್ರಿಯಾಗಿರಲಿ ಬಡಾವಣೆಯ ನಿವಾಸಿಗಳ ಸಮಸ್ಯೆಗೆ ಸ್ಪಂದಿಸಿಲ್ಲ.ಜಿಲ್ಲಾಧಿಕಾರಿಗಳಿಗೂ ಕೂಡ ಸಾಕಷ್ಟು ಮನವಿ ಮಾಡಲಾಗಿದ್ದರೂ ಯಾವುದೇ ಅಧಿಕಾರಿಗಳು ಈ ನೊಂದ ಜನರ ಕಷ್ಟಕ್ಕೆ ಸ್ಪಂದಿಸಿಲ್ಲ.ಕೂಡಲೇ ಬಡಾವಣೆಯ ಸಮಸ್ಯೆ ಸಂಭಂಧಪಟ್ಟ ಅಧಿಕಾರಿಗಳು ಬಗೆಹರಿಸಬೇಕಿದೆ…

Spread the love

Related post

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…
ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು… ಎಚ್.ಡಿ.ಕೋಟೆ,ಜೂ4,Tv10 ಕನ್ನಡ ಸರ್ಕಾರಿ ಶಾಲಾ ದಾಖಲಾತಿಯಲ್ಲಿ ಬೋವಿ ಎಂಬುದನ್ನು ಬೋಯಿ ಎಂದು ತಿದ್ದಿದ ಆರೋಪದ ಹಿನ್ನಲೆ ಶಾಲೆ ಮುಖ್ಯಶಿಕ್ಷಕ ಅಮಾನತುಪಡಿಸಲಾಗಿದೆ.ಹೆಚ್.ಡಿ.ಕೋಟೆ…
ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ

ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ

ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ ಚಾಮರಾಜನಗರ ಜಿಲ್ಲೆಯ ಚಿಕ್ಕಾಟಿ ಗ್ರಾಮದಲ್ಲಿ ಗ್ರಾಮ ಪಂಚಾಯತ್, ಸಂಜೀವಿನಿ ಇಲಾಖೆ ಹಾಗೂ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಮಹಿಳೆಯರ ಆರೋಗ್ಯ…

Leave a Reply

Your email address will not be published. Required fields are marked *