ಲಿವಿಂಗ್ ಟುಗೆದರ್ ನಲ್ಲಿದ್ದ ಜೋಡಿಗಳ ನಡುವೆ ವಿರಸ…ಪ್ರಿಯತಮೆ ಕೊಲೆಯಲ್ಲಿ ಅಂತ್ಯ…ಪ್ರಿಯಕರ ಅಂದರ್…

ಲಿವಿಂಗ್ ಟುಗೆದರ್ ನಲ್ಲಿದ್ದ ಜೋಡಿಗಳ ನಡುವೆ ವಿರಸ…ಪ್ರಿಯತಮೆ ಕೊಲೆಯಲ್ಲಿ ಅಂತ್ಯ…ಪ್ರಿಯಕರ ಅಂದರ್…

ಲಿವಿಂಗ್ ಟುಗೆದರ್ ನಲ್ಲಿದ್ದ ಜೋಡಿಗಳ ನಡುವೆ ವಿರಸ…ಪ್ರಿಯತಮೆ ಕೊಲೆಯಲ್ಲಿ ಅಂತ್ಯ…ಪ್ರಿಯಕರ ಅಂದರ್…

ಮೈಸೂರು,ಸೆ10,Tv10 ಕನ್ನಡ
ಲಿವಿಂಗ್ ಟುಗೆದರ್ ನಲ್ಲಿದ್ದ ಜೋಡಿಗಳ ನಡುವೆ ಹಣಕಾಸಿನ ವಿಚಾರದಲ್ಲಿ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಮೈಸೂರಿನ ಸರ್ದಾರ್ ವಲ್ಲಭಾಯಿ ಪಟೇಲ್ ನಗರ ಬಡಾವಣೆಯಲ್ಲಿ ನಡೆದಿದೆ.ಪ್ರಿಯತಮೆ ಭಾಗ್ಯ(42) ಮೃತ ದುರ್ದೈವಿ.ಪ್ರಿಯಕರ ರಾಚಪ್ಪ(48) ಇದೀಗ ಪೊಲೀಸರ ಅತಿಥಿ.ಪತ್ನಿಯನ್ನ ಕಳೆದುಕೊಂಡಿದ್ದ ರಾಚಪ್ಪ ಕಳೆದ ಹತ್ತು ವರ್ಷಗಳಿಂದ ಪತಿಯಿಂದ ದೂರವಾಗಿದ್ದ ಭಾಗ್ಯ ಜೊತೆ ವಾಸವಿದ್ದ.ಮದುವೆ ಆಗದಿದ್ದರೂ ಇಬ್ಬರೂ ಲಿವಿಂಗ್ ಟುಗೆದರ್ ನಲ್ಲಿ ಸಂಸಾರ ನಡೆಸುತ್ತಿದ್ದರು.ದೇವರಾಜ ಮಾರುಕಟ್ಟೆಯ ಬಾಳೆಹಣ್ಣಿನ ಮಂಡಿಯಲ್ಲಿ ಕೆಲಸ ಮಾಡುತ್ತಿದ್ದ ರಾಚಪ್ಪ ಹಾಗೂ ಭಾಗ್ಯ ನಡುವೆ ಹಣಕಾಸಿನ ವಿಚಾರದಲ್ಲಿ ಗಲಾಟೆ ಆಗಿದೆ.ಸೆಪ್ಟೆಂಬರ್ 5 ರಂದು ಇದೇ ವಿಚಾರದಲ್ಲಿ ಗಲಾಟೆ ಶುರುವಾದಾಗ ಭಾಗ್ಯಳಿಗೆ ರಾಚಪ್ಪ ಬಲವಾಗಿ ಹೊಡೆದು ಪರಾರಿಯಾಗಿದ್ದಾನೆ.ತೀವ್ರ ಅಸ್ವಸ್ಥಳಾದ ಭಾಗ್ಯಳನ್ನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿತ್ತು.ಚಿಕಿತ್ಸೆ ಫಲಕಾರಿಯಾಗದೆ ಭಾಗ್ಯ ಮೃತಪಟ್ಟಿದ್ದಾಳೆ.ಕೊಲೆ ಪ್ರಕರಣ ದಾಖಲಿಸಿಕೊಂಡ ಆಲನಹಳ್ಳಿ ಠಾಣೆ ಪೊಲೀಸರು ಆರೋಪಿ ರಾಚಪ್ಪನನ್ನ ಬಂಧಿಸಿದ್ದಾರೆ…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *