ವಿದ್ಯಾಅರ್ಹತೆ ಇಲ್ಲದಿದ್ದರೂ ವೈದ್ಯಕೀಯ ವೃತ್ತಿ ಆರೋಪ ಸಾಬೀತು…ಆದಿತ್ಯಾ ನರ್ಸಿಂಗ್ ಹೋಂ ನ ಮೂವರು ಸಿಬ್ಬಂದಿಗಳ ಮೇಲೆ ಕ್ರಮ…

ವಿದ್ಯಾಅರ್ಹತೆ ಇಲ್ಲದಿದ್ದರೂ ವೈದ್ಯಕೀಯ ವೃತ್ತಿ ಆರೋಪ ಸಾಬೀತು…ಆದಿತ್ಯಾ ನರ್ಸಿಂಗ್ ಹೋಂ ನ ಮೂವರು ಸಿಬ್ಬಂದಿಗಳ ಮೇಲೆ ಕ್ರಮ…

ವಿದ್ಯಾಅರ್ಹತೆ ಇಲ್ಲದಿದ್ದರೂ ವೈದ್ಯಕೀಯ ವೃತ್ತಿ ಆರೋಪ ಸಾಬೀತು…ಆದಿತ್ಯಾ ನರ್ಸಿಂಗ್ ಹೋಂ ನ ಮೂವರು ಸಿಬ್ಬಂದಿಗಳ ಮೇಲೆ ಕ್ರಮ…

ಮೈಸೂರು,ಸೆ15,Tv10 ಕನ್ನಡ
ಅರ್ಹ ವಿದ್ಯಾರ್ಹತೆ ಇಲ್ಲದಿದ್ದರೂ ವೈದ್ಯಕೀಯ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದ ಮೈಸೂರಿನ ಆದಿತ್ಯಾ ನರ್ಸಿಂಗ್ ಹೋಂ ಮೂವರು ಸಿಬ್ಬಂದಿಗಳ ವಿರುದ್ದ ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಆಯುಕ್ತರು ಸೂಚನೆ ಹೊರಡಿಸಿದ್ದಾರೆ.ಅರವಳಿಕೆ ತಜ್ಞರಾದ ಡಾ.ಚಂದ್ರಶೇಖರ್,ಶುಶ್ರೋಷಕ ದಿನೇಶ್ ಹಾಗೂ ನಕಲಿ ವೈದ್ಯ ಗಣೇಶ್ ವಿರುದ್ದ KPME ಕಾಯ್ದೆ ಅನ್ವಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.ಅರವಳಿಕೆ ತಜ್ಞರಲ್ಲದಿದ್ದರೂ ಡಾ.ಚಂದ್ರಶೇಖರ್ ರೋಗಿಗಳಿಗೆ ಅರವಳಿಕೆ ಚುಚ್ಚುಮದ್ದು ನೀಡಿರುವುದು ಬೆಳಕಿಗೆ ಬಂದಿದೆ.ಇವರಿಗೆ ವಿದ್ಯಾರ್ಹತೆ ಇಲ್ಲದಿದ್ದರೂ ವೃತ್ತಿಯಲ್ಲಿ ತೊಸಗಿಸಿಕೊಂಡಿರುವುದು ಅಪರಾಧವಾಗುತ್ತದೆ ಆದ್ದರಿಂದ ಇವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆಯ ವಿಭಾಗೀಯ ನಿರ್ದೇಶಕರು ಸರ್ಕಾರಕ್ಕೆ ವರದಿ ಸಲ್ಲಿಸಿದ್ದರು.ಡಾ.ಚಂದ್ರಶೇಖರ್ ಪ್ರಾಧಿಕಾರಕ್ಕೆ ಮೊರೆ ಹೋಗಿ ಮೇಲ್ಮನವಿ ಸಲ್ಲಿಸಿದ್ದರು.ಪ್ರಾಧಿಕಾರವೂ ಸಹ ವೃತ್ತ ಮುಂದುವರೆಸದಂತೆ ಆದೇಶಿಸಿತ್ತು.ಇದೀಗ ಆರೋಗ್ಯ ಮತ್ತು ಕುಟುಂಬ ಇಲಾಖೆ ಆಯುಕ್ತರು ಡಾ.ಚಂದ್ರಶೇಖರ್ ರವರಿಗೆ ವೃತ್ತಿ ಮುಂದುವರೆಸದಂತೆ ಸೂಚನೆ ನೀಡಿದೆ.ಇದರ ಜೊತೆಗೆ ಆದಿತ್ಯ ನರ್ಸಿಂಗ್ ಹೋಂ ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಾದ ದಿನೇಶ್ ಹಾಗೂ ಗಣೇಶ್ ಎಂ.ಎಸ್. ರವರಿಗೆ ವಿದ್ಯಾರ್ಹತೆ ಇಲ್ಲವೆಂದು ಸಾಬೀತು ಮಾಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದೆ…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *