ಬಾಡಿ ಮಿಯಾ ಅಯೂಬ್ ಅಹ್ಮದ್ ಜಿ ಗೆ ಪದ್ಮಶ್ರೀ ಪ್ರಶಸ್ತಿಗಾಗಿ ಪ್ರಸ್ತಾವನೆ…ಪ್ರತಾಪ್ ಸಿಂಹ ಹಾಗೂ ತನ್ವೀರ್ ಸೇಠ್ ರಿಂದ ಕೇಂದ್ರಕ್ಕೆ ಪತ್ರ…

ಬಾಡಿ ಮಿಯಾ ಅಯೂಬ್ ಅಹ್ಮದ್ ಜಿ ಗೆ ಪದ್ಮಶ್ರೀ ಪ್ರಶಸ್ತಿಗಾಗಿ ಪ್ರಸ್ತಾವನೆ…ಪ್ರತಾಪ್ ಸಿಂಹ ಹಾಗೂ ತನ್ವೀರ್ ಸೇಠ್ ರಿಂದ ಕೇಂದ್ರಕ್ಕೆ ಪತ್ರ…

  • Mysore
  • September 15, 2022
  • No Comment
  • 253

ಬಾಡಿ ಮಿಯಾ ಅಯೂಬ್ ಅಹ್ಮದ್ ಜಿ ಗೆ ಪದ್ಮಶ್ರೀ ಪ್ರಶಸ್ತಿಗಾಗಿ ಪ್ರಸ್ತಾವನೆ…ಪ್ರತಾಪ್ ಸಿಂಹ ಹಾಗೂ ತನ್ವೀರ್ ಸೇಠ್ ರಿಂದ ಕೇಂದ್ರಕ್ಕೆ ಪತ್ರ…

ಮೈಸೂರು,ಸೆ15,Tv10 ಕನ್ನಡ
ಬಾಡಿಮಿಯಾ ಎಂದೇ ಹೆಸರಾದ ಸಾಮಾಜಿಕ ಕಳಕಳಿ ಹೊಂದಿರುವ ಮೈಸೂರಿನ ಎನ್.ಆರ್.ಮೊಹಲ್ಲಾ ಎ.ಜೆ.ಬ್ಲಾಕ್ ನಿವಾಸಿ ಅಯೂಬ್ ಅಹ್ಮದ್ ಜಿ ಗೆ ಪದ್ಮಶ್ರೀ ಪ್ರಶಸ್ತಿಗೆ ಪರಿಗಣಿಸುವಂತೆ ಸಂಸದ ಪ್ರತಾಪ್ ಸಿಂಹ ಹಾಗೂ ಶಾಸಕ ತನ್ವೀರ್ ಸೇಠ್ ಕೇಂದ್ರಕ್ಕೆ ಪತ್ರ ಬರೆದು ಪ್ರಸ್ತಾವನೆ ಸಲ್ಲಿಸಿದ್ದಾರೆ.2023 ರ ಸಾಲಿನ ಪ್ರಶಸ್ತಿ ನೀಡುವಂತೆ ಪ್ರತಾಪ್ ಸಿಂಹ ಪ್ರಧಾನಿ ಮೋಧಿಗೆ ಪತ್ರ ಬರೆದರೆ ಶಾಸಕ ತನ್ವೀರ್ ಸೇಠ್ ಅಮಿತ್ ಶಾ ಗೆ ಪತ್ರ ಬರೆದು ಮನವಿ ಮಾಡಿದ್ದಾರೆ.ಕಳೆದ 23 ವರ್ಷಗಳಿಂದ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿರುವ ಅಯೂಬ್ ಅಹ್ಮದ್ ಜಿ ಈಗಾಗಲೇ ಅಮೆರಿಕಾ ದ ಹಾರ್ಮೊನಿ ಇನ್ಸ್ಟ್ಯೂಟ್ ಡಾಕ್ಟರೇಟ್ ನೀಡಿ ಗೌರವಿಸಿದೆ.ಪಿ.ಜೆ.ಅಬ್ದುಲ್ ಕಲಾಂ ಗ್ಲೋಬಲ್ ಪೀಸ್ ಅವಾರ್ಡ್ ನ್ನೂ ಪಡೆದಿರುವ ಅಯೂಬ್ 2017 ರ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನೂ ಪಡೆದಿದ್ದಾರೆ.ಅನಾಥ ಶವಗಳಿಗೆ ಮುಕ್ತಿ ನೀಡುವ ಕಾಯಕದಲ್ಲಿ ಗುರುತಿಸಿಕೊಂಡಿರುವ ಅಯೂಬ್ ಅಹ್ಮದ್ ಜಿ ಗೆ ಬಾಡಿಮಿಯಾ ಎಂದೇ ಕರೆಯಲಾಗುತ್ತದೆ.ಈಗಾಗಲೇ 16 ಸಾವಿರ ಅನಾಥ ಶವಗಳಿಗೆ ಅಂತ್ಯಕ್ರಿಯೆ ನೆರವೇರಿಸಿ ಸಾಮಾಜಿಕ ಕಳಕಳಿಗೆ ಮಾದರಿಯಾಗಿದ್ದಾರೆ.ಕೋವಿಡ್ ಸಂಧರ್ಭದಲ್ಲಿ ನಿರ್ಭಯವಾಗಿ ರೋಗಿಗಳನ್ನ ವಿವಿಧ ಆಸ್ಪತ್ರೆಗಳಿಗೆ ಸಾಗಿಸಿದ್ದಾರೆ.ಕೋವಿಡ್ ಸಮಯದಲ್ಲಿ ಸಾಕಷ್ಟು ಮಂದಿಗೆ ಆಹಾರದ ಕಿಟ್ ಗಳನ್ನೂ ವಿತರಿಸಿ ಸಮಾಜಕ್ಕೆ ತಮ್ಮದೇ ಆದ ಕೊಡುಗೆ ಸಲ್ಲಿಸಿರು ಬಾಡಿಮಿಯಾ ಸಾರ್ವಜನಿಕರು,ಪೊಲೀಸರು ಹಾಗೂ ವೈದ್ಯರ ಅಚ್ಚುಮೆಚ್ಚಿನ ವ್ಯಕ್ತಿ. ಈಗಾಗಲೇ ಟೈಲರಿಂಗ್ ಸಂಸ್ಥೆ ತೆರೆದು ಬಡಜನತೆಗೆ ಉಚಿತ ಹೊಲಿಗೆ ತರಬೇತಿ ನೀಡುತ್ತಿರುವ ಇಂತಹ ವಿಶೇಷ ವ್ಯಕ್ತಿಗೆ 2023 ರ ಸಾಲಿನ ಪದ್ಮಶ್ರೀ ಪ್ರಶಸ್ತಿಗೆ ಪರಿಗಣಿಸುವಂತೆ ಇಬ್ಬರು ನಾಯಕರು ಪತ್ರ ಬರೆದಿರುವುದು ಸಂತಸದ ವಿಚಾರವೇ.ಇವರ ಸೇವೆಯನ್ನ ಮನಗಂಡು ಕೇಂದ್ರ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಲೆಂಬುದೇ Tv10 ಕನ್ನಡ ವಾಹಿನಿಯ ಆಶಯ…

Spread the love

Related post

ವರುಣ ನಾಲೆ ಜಾಗ ಭೂ ಪರಿವರ್ತನೆ ಆರೋಪ ಸಾಬೀತು…ವಿಎ ಪ್ರಾಸಿಕ್ಯೂಷನ್‌ಗೆ ಜಿಲ್ಲಾಧಿಕಾರಿ ಅನುಮತಿ…Tv10 ಇಂಪ್ಯಾಕ್ಟ್

ವರುಣ ನಾಲೆ ಜಾಗ ಭೂ ಪರಿವರ್ತನೆ ಆರೋಪ ಸಾಬೀತು…ವಿಎ ಪ್ರಾಸಿಕ್ಯೂಷನ್‌ಗೆ ಜಿಲ್ಲಾಧಿಕಾರಿ…

ವರುಣ ನಾಲೆ ಜಾಗ ಭೂ ಪರಿವರ್ತನೆ ಆರೋಪ ಸಾಬೀತು…ವಿಎ ಪ್ರಾಸಿಕ್ಯೂಷನ್‌ಗೆ ಜಿಲ್ಲಾಧಿಕಾರಿ ಅನುಮತಿ…Tv10 ಇಂಪ್ಯಾಕ್ಟ್ ಶ್ರೀರಂಗಪಟ್ಟಣ,ಅ25,Tv10 ಕನ್ನಡ ಶ್ರೀರಂಗಪಟ್ಟಣ ತಾಲೂಕಿನ ಬೆಳಗೊಳ ಗ್ರಾಮದ ಸರ್ವೇ ನಂ. 44ರಲ್ಲಿ 2.13…
ಸಂಸದ ಯದುವೀರ್ ತಾತ ವಿಧಿವಶ…ಸಂಸದರ ಅಧಿಕೃತ ಕಾರ್ಯಕ್ರಮ ಮುಂದೂಡಿಕೆ…

ಸಂಸದ ಯದುವೀರ್ ತಾತ ವಿಧಿವಶ…ಸಂಸದರ ಅಧಿಕೃತ ಕಾರ್ಯಕ್ರಮ ಮುಂದೂಡಿಕೆ…

ಮೈಸೂರು,ಅ23,Tv10 ಕನ್ನಡ ಸಂಸದರ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರ ತಾತ ಮದನ್ ಗೋಪಾಲ್ ರಾಜ್ ಅರಸ್ ವಿಧಿ ವಶರಾಗಿದ್ದಾರೆ.ಈ ಹಿನ್ನಲೆಯದುವೀರ್ ಅಧಿಕೃತ ಕಾರ್ಯಕ್ರಮಗಳು ತಾತ್ಕಾಲಿಕವಾಗಿ ಮುಂದೂಡಿಕೆಯಾಗಿದೆ.93 ವರ್ಷ…
ಹೃದಯಾಘಾತಕ್ಕೆ ರೈತ ಬಲಿ…ಜಮೀನು ಉಳುಮೆ ಮಾಡುವ ವೇಳೆ ಘಟನೆ…

ಹೃದಯಾಘಾತಕ್ಕೆ ರೈತ ಬಲಿ…ಜಮೀನು ಉಳುಮೆ ಮಾಡುವ ವೇಳೆ ಘಟನೆ…

ಹೃದಯಾಘಾತಕ್ಕೆ ರೈತ ಬಲಿ…ಜಮೀನು ಉಳುಮೆ ಮಾಡುವ ವೇಳೆ ಘಟನೆ… ಮಂಡ್ಯ,ಅ23,Tv10 ಕನ್ನಡ ಜಮೀನಲ್ಲಿ ಉಳುಮೆ ಮಾಡುವ ವೇಳೆ ಹೃದಯಾಘಾತದಿಂದ ರೈತ ಸಾವನ್ನಪ್ಪಿದ ಘಟನೆಮಂಡ್ಯ ತಾಲ್ಲೂಕಿನ ಎಸ್.ಐ.ಕೋಡಿಹಳ್ಳಿ ಗ್ರಾಮದಲ್ಲಿ ನಡೆದಿದೆ.ಗ್ರಾಮದ…

Leave a Reply

Your email address will not be published. Required fields are marked *