ಬಾಡಿ ಮಿಯಾ ಅಯೂಬ್ ಅಹ್ಮದ್ ಜಿ ಗೆ ಪದ್ಮಶ್ರೀ ಪ್ರಶಸ್ತಿಗಾಗಿ ಪ್ರಸ್ತಾವನೆ…ಪ್ರತಾಪ್ ಸಿಂಹ ಹಾಗೂ ತನ್ವೀರ್ ಸೇಠ್ ರಿಂದ ಕೇಂದ್ರಕ್ಕೆ ಪತ್ರ…

ಬಾಡಿ ಮಿಯಾ ಅಯೂಬ್ ಅಹ್ಮದ್ ಜಿ ಗೆ ಪದ್ಮಶ್ರೀ ಪ್ರಶಸ್ತಿಗಾಗಿ ಪ್ರಸ್ತಾವನೆ…ಪ್ರತಾಪ್ ಸಿಂಹ ಹಾಗೂ ತನ್ವೀರ್ ಸೇಠ್ ರಿಂದ ಕೇಂದ್ರಕ್ಕೆ ಪತ್ರ…

  • Mysore
  • September 15, 2022
  • No Comment
  • 265

ಬಾಡಿ ಮಿಯಾ ಅಯೂಬ್ ಅಹ್ಮದ್ ಜಿ ಗೆ ಪದ್ಮಶ್ರೀ ಪ್ರಶಸ್ತಿಗಾಗಿ ಪ್ರಸ್ತಾವನೆ…ಪ್ರತಾಪ್ ಸಿಂಹ ಹಾಗೂ ತನ್ವೀರ್ ಸೇಠ್ ರಿಂದ ಕೇಂದ್ರಕ್ಕೆ ಪತ್ರ…

ಮೈಸೂರು,ಸೆ15,Tv10 ಕನ್ನಡ
ಬಾಡಿಮಿಯಾ ಎಂದೇ ಹೆಸರಾದ ಸಾಮಾಜಿಕ ಕಳಕಳಿ ಹೊಂದಿರುವ ಮೈಸೂರಿನ ಎನ್.ಆರ್.ಮೊಹಲ್ಲಾ ಎ.ಜೆ.ಬ್ಲಾಕ್ ನಿವಾಸಿ ಅಯೂಬ್ ಅಹ್ಮದ್ ಜಿ ಗೆ ಪದ್ಮಶ್ರೀ ಪ್ರಶಸ್ತಿಗೆ ಪರಿಗಣಿಸುವಂತೆ ಸಂಸದ ಪ್ರತಾಪ್ ಸಿಂಹ ಹಾಗೂ ಶಾಸಕ ತನ್ವೀರ್ ಸೇಠ್ ಕೇಂದ್ರಕ್ಕೆ ಪತ್ರ ಬರೆದು ಪ್ರಸ್ತಾವನೆ ಸಲ್ಲಿಸಿದ್ದಾರೆ.2023 ರ ಸಾಲಿನ ಪ್ರಶಸ್ತಿ ನೀಡುವಂತೆ ಪ್ರತಾಪ್ ಸಿಂಹ ಪ್ರಧಾನಿ ಮೋಧಿಗೆ ಪತ್ರ ಬರೆದರೆ ಶಾಸಕ ತನ್ವೀರ್ ಸೇಠ್ ಅಮಿತ್ ಶಾ ಗೆ ಪತ್ರ ಬರೆದು ಮನವಿ ಮಾಡಿದ್ದಾರೆ.ಕಳೆದ 23 ವರ್ಷಗಳಿಂದ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿರುವ ಅಯೂಬ್ ಅಹ್ಮದ್ ಜಿ ಈಗಾಗಲೇ ಅಮೆರಿಕಾ ದ ಹಾರ್ಮೊನಿ ಇನ್ಸ್ಟ್ಯೂಟ್ ಡಾಕ್ಟರೇಟ್ ನೀಡಿ ಗೌರವಿಸಿದೆ.ಪಿ.ಜೆ.ಅಬ್ದುಲ್ ಕಲಾಂ ಗ್ಲೋಬಲ್ ಪೀಸ್ ಅವಾರ್ಡ್ ನ್ನೂ ಪಡೆದಿರುವ ಅಯೂಬ್ 2017 ರ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನೂ ಪಡೆದಿದ್ದಾರೆ.ಅನಾಥ ಶವಗಳಿಗೆ ಮುಕ್ತಿ ನೀಡುವ ಕಾಯಕದಲ್ಲಿ ಗುರುತಿಸಿಕೊಂಡಿರುವ ಅಯೂಬ್ ಅಹ್ಮದ್ ಜಿ ಗೆ ಬಾಡಿಮಿಯಾ ಎಂದೇ ಕರೆಯಲಾಗುತ್ತದೆ.ಈಗಾಗಲೇ 16 ಸಾವಿರ ಅನಾಥ ಶವಗಳಿಗೆ ಅಂತ್ಯಕ್ರಿಯೆ ನೆರವೇರಿಸಿ ಸಾಮಾಜಿಕ ಕಳಕಳಿಗೆ ಮಾದರಿಯಾಗಿದ್ದಾರೆ.ಕೋವಿಡ್ ಸಂಧರ್ಭದಲ್ಲಿ ನಿರ್ಭಯವಾಗಿ ರೋಗಿಗಳನ್ನ ವಿವಿಧ ಆಸ್ಪತ್ರೆಗಳಿಗೆ ಸಾಗಿಸಿದ್ದಾರೆ.ಕೋವಿಡ್ ಸಮಯದಲ್ಲಿ ಸಾಕಷ್ಟು ಮಂದಿಗೆ ಆಹಾರದ ಕಿಟ್ ಗಳನ್ನೂ ವಿತರಿಸಿ ಸಮಾಜಕ್ಕೆ ತಮ್ಮದೇ ಆದ ಕೊಡುಗೆ ಸಲ್ಲಿಸಿರು ಬಾಡಿಮಿಯಾ ಸಾರ್ವಜನಿಕರು,ಪೊಲೀಸರು ಹಾಗೂ ವೈದ್ಯರ ಅಚ್ಚುಮೆಚ್ಚಿನ ವ್ಯಕ್ತಿ. ಈಗಾಗಲೇ ಟೈಲರಿಂಗ್ ಸಂಸ್ಥೆ ತೆರೆದು ಬಡಜನತೆಗೆ ಉಚಿತ ಹೊಲಿಗೆ ತರಬೇತಿ ನೀಡುತ್ತಿರುವ ಇಂತಹ ವಿಶೇಷ ವ್ಯಕ್ತಿಗೆ 2023 ರ ಸಾಲಿನ ಪದ್ಮಶ್ರೀ ಪ್ರಶಸ್ತಿಗೆ ಪರಿಗಣಿಸುವಂತೆ ಇಬ್ಬರು ನಾಯಕರು ಪತ್ರ ಬರೆದಿರುವುದು ಸಂತಸದ ವಿಚಾರವೇ.ಇವರ ಸೇವೆಯನ್ನ ಮನಗಂಡು ಕೇಂದ್ರ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಲೆಂಬುದೇ Tv10 ಕನ್ನಡ ವಾಹಿನಿಯ ಆಶಯ…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *