ಬಾಡಿ ಮಿಯಾ ಅಯೂಬ್ ಅಹ್ಮದ್ ಜಿ ಗೆ ಪದ್ಮಶ್ರೀ ಪ್ರಶಸ್ತಿಗಾಗಿ ಪ್ರಸ್ತಾವನೆ…ಪ್ರತಾಪ್ ಸಿಂಹ ಹಾಗೂ ತನ್ವೀರ್ ಸೇಠ್ ರಿಂದ ಕೇಂದ್ರಕ್ಕೆ ಪತ್ರ…

ಬಾಡಿ ಮಿಯಾ ಅಯೂಬ್ ಅಹ್ಮದ್ ಜಿ ಗೆ ಪದ್ಮಶ್ರೀ ಪ್ರಶಸ್ತಿಗಾಗಿ ಪ್ರಸ್ತಾವನೆ…ಪ್ರತಾಪ್ ಸಿಂಹ ಹಾಗೂ ತನ್ವೀರ್ ಸೇಠ್ ರಿಂದ ಕೇಂದ್ರಕ್ಕೆ ಪತ್ರ…

  • Mysore
  • September 15, 2022
  • No Comment
  • 280

ಬಾಡಿ ಮಿಯಾ ಅಯೂಬ್ ಅಹ್ಮದ್ ಜಿ ಗೆ ಪದ್ಮಶ್ರೀ ಪ್ರಶಸ್ತಿಗಾಗಿ ಪ್ರಸ್ತಾವನೆ…ಪ್ರತಾಪ್ ಸಿಂಹ ಹಾಗೂ ತನ್ವೀರ್ ಸೇಠ್ ರಿಂದ ಕೇಂದ್ರಕ್ಕೆ ಪತ್ರ…

ಮೈಸೂರು,ಸೆ15,Tv10 ಕನ್ನಡ
ಬಾಡಿಮಿಯಾ ಎಂದೇ ಹೆಸರಾದ ಸಾಮಾಜಿಕ ಕಳಕಳಿ ಹೊಂದಿರುವ ಮೈಸೂರಿನ ಎನ್.ಆರ್.ಮೊಹಲ್ಲಾ ಎ.ಜೆ.ಬ್ಲಾಕ್ ನಿವಾಸಿ ಅಯೂಬ್ ಅಹ್ಮದ್ ಜಿ ಗೆ ಪದ್ಮಶ್ರೀ ಪ್ರಶಸ್ತಿಗೆ ಪರಿಗಣಿಸುವಂತೆ ಸಂಸದ ಪ್ರತಾಪ್ ಸಿಂಹ ಹಾಗೂ ಶಾಸಕ ತನ್ವೀರ್ ಸೇಠ್ ಕೇಂದ್ರಕ್ಕೆ ಪತ್ರ ಬರೆದು ಪ್ರಸ್ತಾವನೆ ಸಲ್ಲಿಸಿದ್ದಾರೆ.2023 ರ ಸಾಲಿನ ಪ್ರಶಸ್ತಿ ನೀಡುವಂತೆ ಪ್ರತಾಪ್ ಸಿಂಹ ಪ್ರಧಾನಿ ಮೋಧಿಗೆ ಪತ್ರ ಬರೆದರೆ ಶಾಸಕ ತನ್ವೀರ್ ಸೇಠ್ ಅಮಿತ್ ಶಾ ಗೆ ಪತ್ರ ಬರೆದು ಮನವಿ ಮಾಡಿದ್ದಾರೆ.ಕಳೆದ 23 ವರ್ಷಗಳಿಂದ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿರುವ ಅಯೂಬ್ ಅಹ್ಮದ್ ಜಿ ಈಗಾಗಲೇ ಅಮೆರಿಕಾ ದ ಹಾರ್ಮೊನಿ ಇನ್ಸ್ಟ್ಯೂಟ್ ಡಾಕ್ಟರೇಟ್ ನೀಡಿ ಗೌರವಿಸಿದೆ.ಪಿ.ಜೆ.ಅಬ್ದುಲ್ ಕಲಾಂ ಗ್ಲೋಬಲ್ ಪೀಸ್ ಅವಾರ್ಡ್ ನ್ನೂ ಪಡೆದಿರುವ ಅಯೂಬ್ 2017 ರ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನೂ ಪಡೆದಿದ್ದಾರೆ.ಅನಾಥ ಶವಗಳಿಗೆ ಮುಕ್ತಿ ನೀಡುವ ಕಾಯಕದಲ್ಲಿ ಗುರುತಿಸಿಕೊಂಡಿರುವ ಅಯೂಬ್ ಅಹ್ಮದ್ ಜಿ ಗೆ ಬಾಡಿಮಿಯಾ ಎಂದೇ ಕರೆಯಲಾಗುತ್ತದೆ.ಈಗಾಗಲೇ 16 ಸಾವಿರ ಅನಾಥ ಶವಗಳಿಗೆ ಅಂತ್ಯಕ್ರಿಯೆ ನೆರವೇರಿಸಿ ಸಾಮಾಜಿಕ ಕಳಕಳಿಗೆ ಮಾದರಿಯಾಗಿದ್ದಾರೆ.ಕೋವಿಡ್ ಸಂಧರ್ಭದಲ್ಲಿ ನಿರ್ಭಯವಾಗಿ ರೋಗಿಗಳನ್ನ ವಿವಿಧ ಆಸ್ಪತ್ರೆಗಳಿಗೆ ಸಾಗಿಸಿದ್ದಾರೆ.ಕೋವಿಡ್ ಸಮಯದಲ್ಲಿ ಸಾಕಷ್ಟು ಮಂದಿಗೆ ಆಹಾರದ ಕಿಟ್ ಗಳನ್ನೂ ವಿತರಿಸಿ ಸಮಾಜಕ್ಕೆ ತಮ್ಮದೇ ಆದ ಕೊಡುಗೆ ಸಲ್ಲಿಸಿರು ಬಾಡಿಮಿಯಾ ಸಾರ್ವಜನಿಕರು,ಪೊಲೀಸರು ಹಾಗೂ ವೈದ್ಯರ ಅಚ್ಚುಮೆಚ್ಚಿನ ವ್ಯಕ್ತಿ. ಈಗಾಗಲೇ ಟೈಲರಿಂಗ್ ಸಂಸ್ಥೆ ತೆರೆದು ಬಡಜನತೆಗೆ ಉಚಿತ ಹೊಲಿಗೆ ತರಬೇತಿ ನೀಡುತ್ತಿರುವ ಇಂತಹ ವಿಶೇಷ ವ್ಯಕ್ತಿಗೆ 2023 ರ ಸಾಲಿನ ಪದ್ಮಶ್ರೀ ಪ್ರಶಸ್ತಿಗೆ ಪರಿಗಣಿಸುವಂತೆ ಇಬ್ಬರು ನಾಯಕರು ಪತ್ರ ಬರೆದಿರುವುದು ಸಂತಸದ ವಿಚಾರವೇ.ಇವರ ಸೇವೆಯನ್ನ ಮನಗಂಡು ಕೇಂದ್ರ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಲೆಂಬುದೇ Tv10 ಕನ್ನಡ ವಾಹಿನಿಯ ಆಶಯ…

Spread the love

Related post

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…
ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…

Leave a Reply

Your email address will not be published. Required fields are marked *