ಬಾಡಿ ಮಿಯಾ ಅಯೂಬ್ ಅಹ್ಮದ್ ಜಿ ಗೆ ಪದ್ಮಶ್ರೀ ಪ್ರಶಸ್ತಿಗಾಗಿ ಪ್ರಸ್ತಾವನೆ…ಪ್ರತಾಪ್ ಸಿಂಹ ಹಾಗೂ ತನ್ವೀರ್ ಸೇಠ್ ರಿಂದ ಕೇಂದ್ರಕ್ಕೆ ಪತ್ರ…

ಬಾಡಿ ಮಿಯಾ ಅಯೂಬ್ ಅಹ್ಮದ್ ಜಿ ಗೆ ಪದ್ಮಶ್ರೀ ಪ್ರಶಸ್ತಿಗಾಗಿ ಪ್ರಸ್ತಾವನೆ…ಪ್ರತಾಪ್ ಸಿಂಹ ಹಾಗೂ ತನ್ವೀರ್ ಸೇಠ್ ರಿಂದ ಕೇಂದ್ರಕ್ಕೆ ಪತ್ರ…

  • Mysore
  • September 15, 2022
  • No Comment
  • 228

ಬಾಡಿ ಮಿಯಾ ಅಯೂಬ್ ಅಹ್ಮದ್ ಜಿ ಗೆ ಪದ್ಮಶ್ರೀ ಪ್ರಶಸ್ತಿಗಾಗಿ ಪ್ರಸ್ತಾವನೆ…ಪ್ರತಾಪ್ ಸಿಂಹ ಹಾಗೂ ತನ್ವೀರ್ ಸೇಠ್ ರಿಂದ ಕೇಂದ್ರಕ್ಕೆ ಪತ್ರ…

ಮೈಸೂರು,ಸೆ15,Tv10 ಕನ್ನಡ
ಬಾಡಿಮಿಯಾ ಎಂದೇ ಹೆಸರಾದ ಸಾಮಾಜಿಕ ಕಳಕಳಿ ಹೊಂದಿರುವ ಮೈಸೂರಿನ ಎನ್.ಆರ್.ಮೊಹಲ್ಲಾ ಎ.ಜೆ.ಬ್ಲಾಕ್ ನಿವಾಸಿ ಅಯೂಬ್ ಅಹ್ಮದ್ ಜಿ ಗೆ ಪದ್ಮಶ್ರೀ ಪ್ರಶಸ್ತಿಗೆ ಪರಿಗಣಿಸುವಂತೆ ಸಂಸದ ಪ್ರತಾಪ್ ಸಿಂಹ ಹಾಗೂ ಶಾಸಕ ತನ್ವೀರ್ ಸೇಠ್ ಕೇಂದ್ರಕ್ಕೆ ಪತ್ರ ಬರೆದು ಪ್ರಸ್ತಾವನೆ ಸಲ್ಲಿಸಿದ್ದಾರೆ.2023 ರ ಸಾಲಿನ ಪ್ರಶಸ್ತಿ ನೀಡುವಂತೆ ಪ್ರತಾಪ್ ಸಿಂಹ ಪ್ರಧಾನಿ ಮೋಧಿಗೆ ಪತ್ರ ಬರೆದರೆ ಶಾಸಕ ತನ್ವೀರ್ ಸೇಠ್ ಅಮಿತ್ ಶಾ ಗೆ ಪತ್ರ ಬರೆದು ಮನವಿ ಮಾಡಿದ್ದಾರೆ.ಕಳೆದ 23 ವರ್ಷಗಳಿಂದ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿರುವ ಅಯೂಬ್ ಅಹ್ಮದ್ ಜಿ ಈಗಾಗಲೇ ಅಮೆರಿಕಾ ದ ಹಾರ್ಮೊನಿ ಇನ್ಸ್ಟ್ಯೂಟ್ ಡಾಕ್ಟರೇಟ್ ನೀಡಿ ಗೌರವಿಸಿದೆ.ಪಿ.ಜೆ.ಅಬ್ದುಲ್ ಕಲಾಂ ಗ್ಲೋಬಲ್ ಪೀಸ್ ಅವಾರ್ಡ್ ನ್ನೂ ಪಡೆದಿರುವ ಅಯೂಬ್ 2017 ರ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನೂ ಪಡೆದಿದ್ದಾರೆ.ಅನಾಥ ಶವಗಳಿಗೆ ಮುಕ್ತಿ ನೀಡುವ ಕಾಯಕದಲ್ಲಿ ಗುರುತಿಸಿಕೊಂಡಿರುವ ಅಯೂಬ್ ಅಹ್ಮದ್ ಜಿ ಗೆ ಬಾಡಿಮಿಯಾ ಎಂದೇ ಕರೆಯಲಾಗುತ್ತದೆ.ಈಗಾಗಲೇ 16 ಸಾವಿರ ಅನಾಥ ಶವಗಳಿಗೆ ಅಂತ್ಯಕ್ರಿಯೆ ನೆರವೇರಿಸಿ ಸಾಮಾಜಿಕ ಕಳಕಳಿಗೆ ಮಾದರಿಯಾಗಿದ್ದಾರೆ.ಕೋವಿಡ್ ಸಂಧರ್ಭದಲ್ಲಿ ನಿರ್ಭಯವಾಗಿ ರೋಗಿಗಳನ್ನ ವಿವಿಧ ಆಸ್ಪತ್ರೆಗಳಿಗೆ ಸಾಗಿಸಿದ್ದಾರೆ.ಕೋವಿಡ್ ಸಮಯದಲ್ಲಿ ಸಾಕಷ್ಟು ಮಂದಿಗೆ ಆಹಾರದ ಕಿಟ್ ಗಳನ್ನೂ ವಿತರಿಸಿ ಸಮಾಜಕ್ಕೆ ತಮ್ಮದೇ ಆದ ಕೊಡುಗೆ ಸಲ್ಲಿಸಿರು ಬಾಡಿಮಿಯಾ ಸಾರ್ವಜನಿಕರು,ಪೊಲೀಸರು ಹಾಗೂ ವೈದ್ಯರ ಅಚ್ಚುಮೆಚ್ಚಿನ ವ್ಯಕ್ತಿ. ಈಗಾಗಲೇ ಟೈಲರಿಂಗ್ ಸಂಸ್ಥೆ ತೆರೆದು ಬಡಜನತೆಗೆ ಉಚಿತ ಹೊಲಿಗೆ ತರಬೇತಿ ನೀಡುತ್ತಿರುವ ಇಂತಹ ವಿಶೇಷ ವ್ಯಕ್ತಿಗೆ 2023 ರ ಸಾಲಿನ ಪದ್ಮಶ್ರೀ ಪ್ರಶಸ್ತಿಗೆ ಪರಿಗಣಿಸುವಂತೆ ಇಬ್ಬರು ನಾಯಕರು ಪತ್ರ ಬರೆದಿರುವುದು ಸಂತಸದ ವಿಚಾರವೇ.ಇವರ ಸೇವೆಯನ್ನ ಮನಗಂಡು ಕೇಂದ್ರ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಲೆಂಬುದೇ Tv10 ಕನ್ನಡ ವಾಹಿನಿಯ ಆಶಯ…

Spread the love

Related post

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…

Leave a Reply

Your email address will not be published. Required fields are marked *