ದಸರಾ ಆನೆಗಳಿಗೆ ಎರಡನೇ ಸುತ್ತಿನ ಸಿಡಿಮದ್ದಿನ ತಾಲೀಮು…ಶಬ್ಧಕ್ಕೆ ಜಗ್ಗದ ಗಜಪಡೆ…

ದಸರಾ ಆನೆಗಳಿಗೆ ಎರಡನೇ ಸುತ್ತಿನ ಸಿಡಿಮದ್ದಿನ ತಾಲೀಮು…ಶಬ್ಧಕ್ಕೆ ಜಗ್ಗದ ಗಜಪಡೆ…

  • Mysore
  • September 16, 2022
  • No Comment
  • 148

ದಸರಾ ಆನೆಗಳಿಗೆ ಎರಡನೇ ಸುತ್ತಿನ ಸಿಡಿಮದ್ದಿನ ತಾಲೀಮು…ಶಬ್ಧಕ್ಕೆ ಜಗ್ಗದ ಗಜಪಡೆ…

ಮೈಸೂರು,ಸೆ16,Tv10 ಕನ್ನಡ ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಈಗಾಗಲೇ ದಸರಾ ಜಂಬೂ ಸವಾರಿಯಲ್ಲಿ ಭಾಗವಹಿಸುವ ಗಜಪಡೆಗೆ ಮೊದಲ ಹಂತದ ಸಿಡಿಮದ್ದಿನ ತಾಲೀಮು ನಡೆದಿದೆ.ಇಂದು ಎರಡನೇ ಹಂತದ ತಾಲೀಮು ನಡೆದಿದೆ.ದಸರಾ ವಸ್ತುಪ್ರದರ್ಶನದ ಪಾರ್ಕಿಂಗ್ ಸ್ಥಳದಲ್ಲಿ ತಾಲೀಮು ನಡೆದಿದೆ. ಫಿರಂಗಿ ಮೂಲಕ ಸಿಡಿಮದ್ದು ಸಿಡಿಸುವ ತಾಲೀಮು ನಡೆಸಲಾಗಿದೆ.ಈಬಾರಿ ಗಜಪಡೆ, ಅಶ್ವಗಳು ವಿಚಲಿತವಾಗದೇ ಪಿರಂಗಿಯಿಂದ ಹೊರಟ ಸಿಡಿಮದ್ದಿನ ಶಬ್ಧಕ್ಕೆ ಹೊಂದಿಕೊಳ್ಳುವ ಮೂಲಕ ತಾಲೀಮು ಯಶಸ್ವಿಗೊಳಿಸಿದೆ.
ಅಕ್ಟೋಬರ್ 5ರಂದು ನಡೆಯಲಿರುವ ವಿಶ್ವವಿಖ್ಯಾತ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಲಿರುವ ಗಜಪಡೆ ಮತ್ತು ಅಶ್ವಾರೋಹಿದಳದ ಕುದುರೆಗಳು ಭಾರೀ ಶಬ್ದಗಳಿಗೆ ಬೆಚ್ಚದಂತೆ ಅವು ಶಬ್ದಗಳಿಗೆ ಹೊಂದಿಕೊಳ್ಳಲು ಅನುಕೂಲವಾಗಲೆಂದು ತಾಲೀಮು ನಡೆಸಲಾಗುತ್ತಿದೆ. ಮೂರು ಸುತ್ತಿನಲ್ಲಿ 21 ಬಾರಿ ಫಿರಂಗಿ ಮೂಲಕ ಸಿಡಿಮದ್ದು ಸಿಡಿಸಲಾಗಿದೆ.
ಸೆ.12ರಂದು ಮೊದಲ ಸಿಡಿಮದ್ದು ಸಿಡಿಸುವ ತಾಲೀಮು ನಡೆದಿತ್ತು. ಆ ವೇಳೆ ಕುದುರೆಗಳು, ಮೂರು ಆನೆಗಳು ಬೆಚ್ಚಿದ್ದವು. ಆದರೆ ಈ ಬಾರಿ ಶಬ್ದಗಳಿಗೆ ಯಾವುದೂ ವಿಚಲಿತವಾಗದೆ ಶಬ್ಧಕ್ಕೆ ಹೊಂದಿಕೊಂಡಿವೆ.ಇಂದು ನಡೆದ ತಾಲೀಮಿನಲ್ಲಿ 12 ಆನೆಗಳು,41 ಕುದುರೆಗಳು ಭಾಗಿಯಾಗಿದ್ದವು.ಸೆ.23 ಕ್ಕೆ ಮೂರನೇ ಸುತ್ತಿನ ತಾಲೀಮು ನಡೆಯಲಿದೆ. ಡಿಸಿಪಿ-3 ಶಿವರಾಜ್ ಮಾತನಾಡಿ ಪ್ರತಿಬಾರಿ ಅರಮನೆ ಬಳಿ ತಾಲೀಮು ನಡೆಯುತ್ತಿತ್ತು. ಅರಮನೆಯ ಗೋಡೆಗಳಿಗೆ ತೊಂದರೆಯಾಗಲಿವೆ ಎನ್ನುವ ಕಾರಣಕ್ಕೆ ಇಲ್ಲಿ ಮಾಡಿದ್ದೇವೆ ಸಿಡಿಮದ್ದು ಒಟ್ಟಾರೆ 92.2ಡೆಸಿಬಲ್ ಎವರೇಜ್ ಇದೆ ಎಂದು ತಿಳಿಸಿದರು…

Spread the love

Related post

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…
ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025 ಕಿರೀಟ…

ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025…

ಮೈಸೂರು,ಜೂ26,Tv10 ಕನ್ನಡ ಮೈಸೂರಿನ ಪೀಡಿಯಾಟ್ರಿಕ್ ನ್ಯೂರಾಲಜಿಸ್ಟ್ ಡಾ.ಅನೂಷಾ ರಾಜ್ ರವರು ಮಿಸ್ ಮೆಡಿಕ್ವೀನ್ 2025 ಸ್ಪರ್ಧೆಯಲ್ಲಿ ವಿಜಯಿಯಾಗಿ ಹೊರಹೊಮ್ಮಿದ್ದಾರೆ. ಜೂನ್ 22 ರಂದು ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಸ್ಪರ್ಧೆಯಲ್ಲಿ…

Leave a Reply

Your email address will not be published. Required fields are marked *