ದಸರಾ ಆನೆಗಳಿಗೆ ಎರಡನೇ ಸುತ್ತಿನ ಸಿಡಿಮದ್ದಿನ ತಾಲೀಮು…ಶಬ್ಧಕ್ಕೆ ಜಗ್ಗದ ಗಜಪಡೆ…

ದಸರಾ ಆನೆಗಳಿಗೆ ಎರಡನೇ ಸುತ್ತಿನ ಸಿಡಿಮದ್ದಿನ ತಾಲೀಮು…ಶಬ್ಧಕ್ಕೆ ಜಗ್ಗದ ಗಜಪಡೆ…

  • Mysore
  • September 16, 2022
  • No Comment
  • 188

ದಸರಾ ಆನೆಗಳಿಗೆ ಎರಡನೇ ಸುತ್ತಿನ ಸಿಡಿಮದ್ದಿನ ತಾಲೀಮು…ಶಬ್ಧಕ್ಕೆ ಜಗ್ಗದ ಗಜಪಡೆ…

ಮೈಸೂರು,ಸೆ16,Tv10 ಕನ್ನಡ ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಈಗಾಗಲೇ ದಸರಾ ಜಂಬೂ ಸವಾರಿಯಲ್ಲಿ ಭಾಗವಹಿಸುವ ಗಜಪಡೆಗೆ ಮೊದಲ ಹಂತದ ಸಿಡಿಮದ್ದಿನ ತಾಲೀಮು ನಡೆದಿದೆ.ಇಂದು ಎರಡನೇ ಹಂತದ ತಾಲೀಮು ನಡೆದಿದೆ.ದಸರಾ ವಸ್ತುಪ್ರದರ್ಶನದ ಪಾರ್ಕಿಂಗ್ ಸ್ಥಳದಲ್ಲಿ ತಾಲೀಮು ನಡೆದಿದೆ. ಫಿರಂಗಿ ಮೂಲಕ ಸಿಡಿಮದ್ದು ಸಿಡಿಸುವ ತಾಲೀಮು ನಡೆಸಲಾಗಿದೆ.ಈಬಾರಿ ಗಜಪಡೆ, ಅಶ್ವಗಳು ವಿಚಲಿತವಾಗದೇ ಪಿರಂಗಿಯಿಂದ ಹೊರಟ ಸಿಡಿಮದ್ದಿನ ಶಬ್ಧಕ್ಕೆ ಹೊಂದಿಕೊಳ್ಳುವ ಮೂಲಕ ತಾಲೀಮು ಯಶಸ್ವಿಗೊಳಿಸಿದೆ.
ಅಕ್ಟೋಬರ್ 5ರಂದು ನಡೆಯಲಿರುವ ವಿಶ್ವವಿಖ್ಯಾತ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಲಿರುವ ಗಜಪಡೆ ಮತ್ತು ಅಶ್ವಾರೋಹಿದಳದ ಕುದುರೆಗಳು ಭಾರೀ ಶಬ್ದಗಳಿಗೆ ಬೆಚ್ಚದಂತೆ ಅವು ಶಬ್ದಗಳಿಗೆ ಹೊಂದಿಕೊಳ್ಳಲು ಅನುಕೂಲವಾಗಲೆಂದು ತಾಲೀಮು ನಡೆಸಲಾಗುತ್ತಿದೆ. ಮೂರು ಸುತ್ತಿನಲ್ಲಿ 21 ಬಾರಿ ಫಿರಂಗಿ ಮೂಲಕ ಸಿಡಿಮದ್ದು ಸಿಡಿಸಲಾಗಿದೆ.
ಸೆ.12ರಂದು ಮೊದಲ ಸಿಡಿಮದ್ದು ಸಿಡಿಸುವ ತಾಲೀಮು ನಡೆದಿತ್ತು. ಆ ವೇಳೆ ಕುದುರೆಗಳು, ಮೂರು ಆನೆಗಳು ಬೆಚ್ಚಿದ್ದವು. ಆದರೆ ಈ ಬಾರಿ ಶಬ್ದಗಳಿಗೆ ಯಾವುದೂ ವಿಚಲಿತವಾಗದೆ ಶಬ್ಧಕ್ಕೆ ಹೊಂದಿಕೊಂಡಿವೆ.ಇಂದು ನಡೆದ ತಾಲೀಮಿನಲ್ಲಿ 12 ಆನೆಗಳು,41 ಕುದುರೆಗಳು ಭಾಗಿಯಾಗಿದ್ದವು.ಸೆ.23 ಕ್ಕೆ ಮೂರನೇ ಸುತ್ತಿನ ತಾಲೀಮು ನಡೆಯಲಿದೆ. ಡಿಸಿಪಿ-3 ಶಿವರಾಜ್ ಮಾತನಾಡಿ ಪ್ರತಿಬಾರಿ ಅರಮನೆ ಬಳಿ ತಾಲೀಮು ನಡೆಯುತ್ತಿತ್ತು. ಅರಮನೆಯ ಗೋಡೆಗಳಿಗೆ ತೊಂದರೆಯಾಗಲಿವೆ ಎನ್ನುವ ಕಾರಣಕ್ಕೆ ಇಲ್ಲಿ ಮಾಡಿದ್ದೇವೆ ಸಿಡಿಮದ್ದು ಒಟ್ಟಾರೆ 92.2ಡೆಸಿಬಲ್ ಎವರೇಜ್ ಇದೆ ಎಂದು ತಿಳಿಸಿದರು…

Spread the love

Related post

ಅಭಿಮಾನಿಗಳೊಂದಿಗೆ ಅಭಿಮಾನ ಹಂಚಿಕೊಂಡ ಡಾ.ಚೇತನ

ಅಭಿಮಾನಿಗಳೊಂದಿಗೆ ಅಭಿಮಾನ ಹಂಚಿಕೊಂಡ ಡಾ.ಚೇತನ

*ಬಿಜಾಪುರ ಜಿಲ್ಲೆ ಇಂಡಿ ಪಟ್ಟಣದ ಅದ್ಭುತ ಪ್ರತಿಭೆ ತಮ್ಮ ರಾಷ್ಟ್ರಮಟ್ಟದ ಬಹು ಪ್ರಶಸ್ತಿಗಳ ಮೂಲಕ ದೇಶಕ್ಕೆ ನಾಡಿಗೆ ಮತ್ತೆ ಹುಟ್ಟುರಿಗೆ ಕೀರ್ತಿ ತಂದಿದ್ದಾರೆ ಚೇತನ ಬಸವರಾಜ ಮೂರಮನ ಕ್ಷಮಿಸಿ…
ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ ಜಾತ್ರೆ…ರಸ್ತೆ ಮಧ್ಯದಲ್ಲಿ ನಿಂತ ತೇರು…ದೇವಾಲಯಕ್ಕೆ ಬೀಗ…ಗ್ರಾಮದಲ್ಲಿ ಬಿಗುವಿನ ವಾತಾವರಣ

ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ…

ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ ಜಾತ್ರೆ…ರಸ್ತೆ ಮಧ್ಯದಲ್ಲಿ ನಿಂತ ತೇರು…ದೇವಾಲಯಕ್ಕೆ ಬೀಗ…ಗ್ರಾಮದಲ್ಲಿ ಬಿಗುವಿನ ವಾತಾವರಣ… ನಂಜನಗೂಡು,ಜ31,Tv10 ಕನ್ನಡ ಗ್ರಾಮದ ಫೋಕಸ್ ಲೈಟ್…
ಕಟೌಟ್ ತೆರವು ವೇಳೆ ಅವಘಢ…ಆಯತಪ್ಪಿ ಕೆಳಗೆ ಬಿದ್ದು ಕಾರ್ಮಿಕ ಸಾವು…

ಕಟೌಟ್ ತೆರವು ವೇಳೆ ಅವಘಢ…ಆಯತಪ್ಪಿ ಕೆಳಗೆ ಬಿದ್ದು ಕಾರ್ಮಿಕ ಸಾವು…

ಕಟೌಟ್ ತೆರವು ವೇಳೆ ಅವಘಢ…ಆಯತಪ್ಪಿ ಕೆಳಗೆ ಬಿದ್ದು ಕಾರ್ಮಿಕ ಸಾವು… ಸುತ್ತೂರು,ಜ29,Tv10 ಕನ್ನಡ ಸುತ್ತೂರು ಜಾತ್ರೆಯ ಕಟೌಟ್ ಫ್ರೇಮ್ ತೆರವು ಮಾಡುವ ವೇಳೆಮೇಲಿಂದ ಕೆಳಗೆ ಬಿದ್ದು ವ್ಯಕ್ತಿ ಸಾವನ್ನಪ್ಪಿದ…

Leave a Reply

Your email address will not be published. Required fields are marked *