ದಸರಾ ಆನೆಗಳಿಗೆ ಎರಡನೇ ಸುತ್ತಿನ ಸಿಡಿಮದ್ದಿನ ತಾಲೀಮು…ಶಬ್ಧಕ್ಕೆ ಜಗ್ಗದ ಗಜಪಡೆ…

ದಸರಾ ಆನೆಗಳಿಗೆ ಎರಡನೇ ಸುತ್ತಿನ ಸಿಡಿಮದ್ದಿನ ತಾಲೀಮು…ಶಬ್ಧಕ್ಕೆ ಜಗ್ಗದ ಗಜಪಡೆ…

  • Mysore
  • September 16, 2022
  • No Comment
  • 97

ದಸರಾ ಆನೆಗಳಿಗೆ ಎರಡನೇ ಸುತ್ತಿನ ಸಿಡಿಮದ್ದಿನ ತಾಲೀಮು…ಶಬ್ಧಕ್ಕೆ ಜಗ್ಗದ ಗಜಪಡೆ…

ಮೈಸೂರು,ಸೆ16,Tv10 ಕನ್ನಡ ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಈಗಾಗಲೇ ದಸರಾ ಜಂಬೂ ಸವಾರಿಯಲ್ಲಿ ಭಾಗವಹಿಸುವ ಗಜಪಡೆಗೆ ಮೊದಲ ಹಂತದ ಸಿಡಿಮದ್ದಿನ ತಾಲೀಮು ನಡೆದಿದೆ.ಇಂದು ಎರಡನೇ ಹಂತದ ತಾಲೀಮು ನಡೆದಿದೆ.ದಸರಾ ವಸ್ತುಪ್ರದರ್ಶನದ ಪಾರ್ಕಿಂಗ್ ಸ್ಥಳದಲ್ಲಿ ತಾಲೀಮು ನಡೆದಿದೆ. ಫಿರಂಗಿ ಮೂಲಕ ಸಿಡಿಮದ್ದು ಸಿಡಿಸುವ ತಾಲೀಮು ನಡೆಸಲಾಗಿದೆ.ಈಬಾರಿ ಗಜಪಡೆ, ಅಶ್ವಗಳು ವಿಚಲಿತವಾಗದೇ ಪಿರಂಗಿಯಿಂದ ಹೊರಟ ಸಿಡಿಮದ್ದಿನ ಶಬ್ಧಕ್ಕೆ ಹೊಂದಿಕೊಳ್ಳುವ ಮೂಲಕ ತಾಲೀಮು ಯಶಸ್ವಿಗೊಳಿಸಿದೆ.
ಅಕ್ಟೋಬರ್ 5ರಂದು ನಡೆಯಲಿರುವ ವಿಶ್ವವಿಖ್ಯಾತ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಲಿರುವ ಗಜಪಡೆ ಮತ್ತು ಅಶ್ವಾರೋಹಿದಳದ ಕುದುರೆಗಳು ಭಾರೀ ಶಬ್ದಗಳಿಗೆ ಬೆಚ್ಚದಂತೆ ಅವು ಶಬ್ದಗಳಿಗೆ ಹೊಂದಿಕೊಳ್ಳಲು ಅನುಕೂಲವಾಗಲೆಂದು ತಾಲೀಮು ನಡೆಸಲಾಗುತ್ತಿದೆ. ಮೂರು ಸುತ್ತಿನಲ್ಲಿ 21 ಬಾರಿ ಫಿರಂಗಿ ಮೂಲಕ ಸಿಡಿಮದ್ದು ಸಿಡಿಸಲಾಗಿದೆ.
ಸೆ.12ರಂದು ಮೊದಲ ಸಿಡಿಮದ್ದು ಸಿಡಿಸುವ ತಾಲೀಮು ನಡೆದಿತ್ತು. ಆ ವೇಳೆ ಕುದುರೆಗಳು, ಮೂರು ಆನೆಗಳು ಬೆಚ್ಚಿದ್ದವು. ಆದರೆ ಈ ಬಾರಿ ಶಬ್ದಗಳಿಗೆ ಯಾವುದೂ ವಿಚಲಿತವಾಗದೆ ಶಬ್ಧಕ್ಕೆ ಹೊಂದಿಕೊಂಡಿವೆ.ಇಂದು ನಡೆದ ತಾಲೀಮಿನಲ್ಲಿ 12 ಆನೆಗಳು,41 ಕುದುರೆಗಳು ಭಾಗಿಯಾಗಿದ್ದವು.ಸೆ.23 ಕ್ಕೆ ಮೂರನೇ ಸುತ್ತಿನ ತಾಲೀಮು ನಡೆಯಲಿದೆ. ಡಿಸಿಪಿ-3 ಶಿವರಾಜ್ ಮಾತನಾಡಿ ಪ್ರತಿಬಾರಿ ಅರಮನೆ ಬಳಿ ತಾಲೀಮು ನಡೆಯುತ್ತಿತ್ತು. ಅರಮನೆಯ ಗೋಡೆಗಳಿಗೆ ತೊಂದರೆಯಾಗಲಿವೆ ಎನ್ನುವ ಕಾರಣಕ್ಕೆ ಇಲ್ಲಿ ಮಾಡಿದ್ದೇವೆ ಸಿಡಿಮದ್ದು ಒಟ್ಟಾರೆ 92.2ಡೆಸಿಬಲ್ ಎವರೇಜ್ ಇದೆ ಎಂದು ತಿಳಿಸಿದರು…

Spread the love

Related post

ನಂಜನಗೂಡು ಶಿಕ್ಷಕ ಸೇರಿದಂತೆ BEO ಲೋಕಾ ಬಲೆಗೆ…ಗೌರವ ಧನ ಬಿಡುಗಡೆ ಮಾಡಲು ಲಂಚ…

ನಂಜನಗೂಡು ಶಿಕ್ಷಕ ಸೇರಿದಂತೆ BEO ಲೋಕಾ ಬಲೆಗೆ…ಗೌರವ ಧನ ಬಿಡುಗಡೆ ಮಾಡಲು…

ನಂಜನಗೂಡು,ಮಾ28,Tv10 ಕನ್ನಡ ಗೌರವ ಧನ ಬಿಡುಗಡೆ ಮಾಡಲು ವ್ಯಕ್ತಿಯೊಬ್ಬರಿಂದ 5 ಸಾವಿರ ಲಂಚ ಪಡೆಯುತ್ತಿದ್ದ ಶಿಕ್ಷಕ ಹಾಗೂ ಬಿಇಓ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ನಂಜನಗೂಡು ಬಿಇಓ ಶಿವಲಿಂಗಯ್ಯ ಹಾಗೂ ಶಿಕ್ಷಕ…
Tv10 ಕನ್ನಡ ವಾಹಿನಿ ವರದಿ ಫಲಶೃತಿ…ಅಂಬೇಡ್ಕರ್ ವಸತಿಶಾಲೆ ಪ್ರಾಂಶುಪಾಲ ಅಮಾನತು…ಇಲಾಖಾ ವಿಚಾರಣೆಗೆ ಆದೇಶ…

Tv10 ಕನ್ನಡ ವಾಹಿನಿ ವರದಿ ಫಲಶೃತಿ…ಅಂಬೇಡ್ಕರ್ ವಸತಿಶಾಲೆ ಪ್ರಾಂಶುಪಾಲ ಅಮಾನತು…ಇಲಾಖಾ ವಿಚಾರಣೆಗೆ…

ನಂಜನಗೂಡು,ಮಾ28,Tv10 ಕನ್ನಡ ನಂಜನಗೂಡು ತಾಲೂಕು ಹದಿನಾರು ಗ್ರಾಮದ ಅಂಬೇಂಡ್ಕರ್ ವಸತಿ ಶಾಲೆ ಪ್ರಾಂಶುಪಾಲ ಪ್ರಸನ್ನ ಕುಮಾರ್ ಗೆ ಸರ್ಕಾರ ಗೇಟ್ ಪಾಸ್ ನೀಡಿದ ಕರ್ತವ್ಯ ಲೋಪ ಹಿನ್ನಲೆ ಸೇವೆಯಿಂದ…
ಲಷ್ಕರ್ ಠಾಣೆ ಪೊಲೀಸರ ಮಿಂಚಿನ ಕಾರ್ಯಾಚರಣೆ…ಆಟೋದಲ್ಲಿ ಮರೆತುಹೋಗಿದ್ದ ಚಿನ್ನಾಭರಣ ಬ್ಯಾಗ್ ಮಾಲೀಕರ ವಶಕ್ಕೆ…

ಲಷ್ಕರ್ ಠಾಣೆ ಪೊಲೀಸರ ಮಿಂಚಿನ ಕಾರ್ಯಾಚರಣೆ…ಆಟೋದಲ್ಲಿ ಮರೆತುಹೋಗಿದ್ದ ಚಿನ್ನಾಭರಣ ಬ್ಯಾಗ್ ಮಾಲೀಕರ…

ಮೈಸೂರು,ಮಾ28,Tv10 ಕನ್ನಡ ಆಟೋದಲ್ಲಿ ಮರೆತುಹೋಗಿದ್ದ ಚಿನ್ನಾಭರಣವಿದ್ದ ಬ್ಯಾಗ್ ಮಾಲೀಕರ ವಶಕ್ಕೆ ತಲುಪಿಸುವಲ್ಲಿ ಲಷ್ಕರ್ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.ಇನ್ಸ್ಪೆಕ್ಟರ್ ಮಹಮದ್ ಸಲೀಂ ಅಬ್ಬಾಸ್ ರವರ ಸಮಯೋಚಿತ ಕಾರ್ಯಾಚರಣೆಯಿಂದ ಚಿನ್ನದ ಬ್ಯಾಗ್…

Leave a Reply

Your email address will not be published. Required fields are marked *