ದಸರಾ ಆನೆಗಳಿಗೆ ಎರಡನೇ ಸುತ್ತಿನ ಸಿಡಿಮದ್ದಿನ ತಾಲೀಮು…ಶಬ್ಧಕ್ಕೆ ಜಗ್ಗದ ಗಜಪಡೆ…

ದಸರಾ ಆನೆಗಳಿಗೆ ಎರಡನೇ ಸುತ್ತಿನ ಸಿಡಿಮದ್ದಿನ ತಾಲೀಮು…ಶಬ್ಧಕ್ಕೆ ಜಗ್ಗದ ಗಜಪಡೆ…

  • Mysore
  • September 16, 2022
  • No Comment
  • 205

ದಸರಾ ಆನೆಗಳಿಗೆ ಎರಡನೇ ಸುತ್ತಿನ ಸಿಡಿಮದ್ದಿನ ತಾಲೀಮು…ಶಬ್ಧಕ್ಕೆ ಜಗ್ಗದ ಗಜಪಡೆ…

ಮೈಸೂರು,ಸೆ16,Tv10 ಕನ್ನಡ ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಈಗಾಗಲೇ ದಸರಾ ಜಂಬೂ ಸವಾರಿಯಲ್ಲಿ ಭಾಗವಹಿಸುವ ಗಜಪಡೆಗೆ ಮೊದಲ ಹಂತದ ಸಿಡಿಮದ್ದಿನ ತಾಲೀಮು ನಡೆದಿದೆ.ಇಂದು ಎರಡನೇ ಹಂತದ ತಾಲೀಮು ನಡೆದಿದೆ.ದಸರಾ ವಸ್ತುಪ್ರದರ್ಶನದ ಪಾರ್ಕಿಂಗ್ ಸ್ಥಳದಲ್ಲಿ ತಾಲೀಮು ನಡೆದಿದೆ. ಫಿರಂಗಿ ಮೂಲಕ ಸಿಡಿಮದ್ದು ಸಿಡಿಸುವ ತಾಲೀಮು ನಡೆಸಲಾಗಿದೆ.ಈಬಾರಿ ಗಜಪಡೆ, ಅಶ್ವಗಳು ವಿಚಲಿತವಾಗದೇ ಪಿರಂಗಿಯಿಂದ ಹೊರಟ ಸಿಡಿಮದ್ದಿನ ಶಬ್ಧಕ್ಕೆ ಹೊಂದಿಕೊಳ್ಳುವ ಮೂಲಕ ತಾಲೀಮು ಯಶಸ್ವಿಗೊಳಿಸಿದೆ.
ಅಕ್ಟೋಬರ್ 5ರಂದು ನಡೆಯಲಿರುವ ವಿಶ್ವವಿಖ್ಯಾತ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಲಿರುವ ಗಜಪಡೆ ಮತ್ತು ಅಶ್ವಾರೋಹಿದಳದ ಕುದುರೆಗಳು ಭಾರೀ ಶಬ್ದಗಳಿಗೆ ಬೆಚ್ಚದಂತೆ ಅವು ಶಬ್ದಗಳಿಗೆ ಹೊಂದಿಕೊಳ್ಳಲು ಅನುಕೂಲವಾಗಲೆಂದು ತಾಲೀಮು ನಡೆಸಲಾಗುತ್ತಿದೆ. ಮೂರು ಸುತ್ತಿನಲ್ಲಿ 21 ಬಾರಿ ಫಿರಂಗಿ ಮೂಲಕ ಸಿಡಿಮದ್ದು ಸಿಡಿಸಲಾಗಿದೆ.
ಸೆ.12ರಂದು ಮೊದಲ ಸಿಡಿಮದ್ದು ಸಿಡಿಸುವ ತಾಲೀಮು ನಡೆದಿತ್ತು. ಆ ವೇಳೆ ಕುದುರೆಗಳು, ಮೂರು ಆನೆಗಳು ಬೆಚ್ಚಿದ್ದವು. ಆದರೆ ಈ ಬಾರಿ ಶಬ್ದಗಳಿಗೆ ಯಾವುದೂ ವಿಚಲಿತವಾಗದೆ ಶಬ್ಧಕ್ಕೆ ಹೊಂದಿಕೊಂಡಿವೆ.ಇಂದು ನಡೆದ ತಾಲೀಮಿನಲ್ಲಿ 12 ಆನೆಗಳು,41 ಕುದುರೆಗಳು ಭಾಗಿಯಾಗಿದ್ದವು.ಸೆ.23 ಕ್ಕೆ ಮೂರನೇ ಸುತ್ತಿನ ತಾಲೀಮು ನಡೆಯಲಿದೆ. ಡಿಸಿಪಿ-3 ಶಿವರಾಜ್ ಮಾತನಾಡಿ ಪ್ರತಿಬಾರಿ ಅರಮನೆ ಬಳಿ ತಾಲೀಮು ನಡೆಯುತ್ತಿತ್ತು. ಅರಮನೆಯ ಗೋಡೆಗಳಿಗೆ ತೊಂದರೆಯಾಗಲಿವೆ ಎನ್ನುವ ಕಾರಣಕ್ಕೆ ಇಲ್ಲಿ ಮಾಡಿದ್ದೇವೆ ಸಿಡಿಮದ್ದು ಒಟ್ಟಾರೆ 92.2ಡೆಸಿಬಲ್ ಎವರೇಜ್ ಇದೆ ಎಂದು ತಿಳಿಸಿದರು…

Spread the love

Related post

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ… ಮೈಸೂರು,ಏ28,Tv10 ಕನ್ನಡ ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ ಶುರುವಾಗಿದೆ.ಭಿಕ್ಷೆ…
ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…

Leave a Reply

Your email address will not be published. Required fields are marked *