ದಸರಾ ಆನೆಗಳಿಗೆ ಎರಡನೇ ಸುತ್ತಿನ ಸಿಡಿಮದ್ದಿನ ತಾಲೀಮು…ಶಬ್ಧಕ್ಕೆ ಜಗ್ಗದ ಗಜಪಡೆ…

ದಸರಾ ಆನೆಗಳಿಗೆ ಎರಡನೇ ಸುತ್ತಿನ ಸಿಡಿಮದ್ದಿನ ತಾಲೀಮು…ಶಬ್ಧಕ್ಕೆ ಜಗ್ಗದ ಗಜಪಡೆ…

  • Mysore
  • September 16, 2022
  • No Comment
  • 196

ದಸರಾ ಆನೆಗಳಿಗೆ ಎರಡನೇ ಸುತ್ತಿನ ಸಿಡಿಮದ್ದಿನ ತಾಲೀಮು…ಶಬ್ಧಕ್ಕೆ ಜಗ್ಗದ ಗಜಪಡೆ…

ಮೈಸೂರು,ಸೆ16,Tv10 ಕನ್ನಡ ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಈಗಾಗಲೇ ದಸರಾ ಜಂಬೂ ಸವಾರಿಯಲ್ಲಿ ಭಾಗವಹಿಸುವ ಗಜಪಡೆಗೆ ಮೊದಲ ಹಂತದ ಸಿಡಿಮದ್ದಿನ ತಾಲೀಮು ನಡೆದಿದೆ.ಇಂದು ಎರಡನೇ ಹಂತದ ತಾಲೀಮು ನಡೆದಿದೆ.ದಸರಾ ವಸ್ತುಪ್ರದರ್ಶನದ ಪಾರ್ಕಿಂಗ್ ಸ್ಥಳದಲ್ಲಿ ತಾಲೀಮು ನಡೆದಿದೆ. ಫಿರಂಗಿ ಮೂಲಕ ಸಿಡಿಮದ್ದು ಸಿಡಿಸುವ ತಾಲೀಮು ನಡೆಸಲಾಗಿದೆ.ಈಬಾರಿ ಗಜಪಡೆ, ಅಶ್ವಗಳು ವಿಚಲಿತವಾಗದೇ ಪಿರಂಗಿಯಿಂದ ಹೊರಟ ಸಿಡಿಮದ್ದಿನ ಶಬ್ಧಕ್ಕೆ ಹೊಂದಿಕೊಳ್ಳುವ ಮೂಲಕ ತಾಲೀಮು ಯಶಸ್ವಿಗೊಳಿಸಿದೆ.
ಅಕ್ಟೋಬರ್ 5ರಂದು ನಡೆಯಲಿರುವ ವಿಶ್ವವಿಖ್ಯಾತ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಲಿರುವ ಗಜಪಡೆ ಮತ್ತು ಅಶ್ವಾರೋಹಿದಳದ ಕುದುರೆಗಳು ಭಾರೀ ಶಬ್ದಗಳಿಗೆ ಬೆಚ್ಚದಂತೆ ಅವು ಶಬ್ದಗಳಿಗೆ ಹೊಂದಿಕೊಳ್ಳಲು ಅನುಕೂಲವಾಗಲೆಂದು ತಾಲೀಮು ನಡೆಸಲಾಗುತ್ತಿದೆ. ಮೂರು ಸುತ್ತಿನಲ್ಲಿ 21 ಬಾರಿ ಫಿರಂಗಿ ಮೂಲಕ ಸಿಡಿಮದ್ದು ಸಿಡಿಸಲಾಗಿದೆ.
ಸೆ.12ರಂದು ಮೊದಲ ಸಿಡಿಮದ್ದು ಸಿಡಿಸುವ ತಾಲೀಮು ನಡೆದಿತ್ತು. ಆ ವೇಳೆ ಕುದುರೆಗಳು, ಮೂರು ಆನೆಗಳು ಬೆಚ್ಚಿದ್ದವು. ಆದರೆ ಈ ಬಾರಿ ಶಬ್ದಗಳಿಗೆ ಯಾವುದೂ ವಿಚಲಿತವಾಗದೆ ಶಬ್ಧಕ್ಕೆ ಹೊಂದಿಕೊಂಡಿವೆ.ಇಂದು ನಡೆದ ತಾಲೀಮಿನಲ್ಲಿ 12 ಆನೆಗಳು,41 ಕುದುರೆಗಳು ಭಾಗಿಯಾಗಿದ್ದವು.ಸೆ.23 ಕ್ಕೆ ಮೂರನೇ ಸುತ್ತಿನ ತಾಲೀಮು ನಡೆಯಲಿದೆ. ಡಿಸಿಪಿ-3 ಶಿವರಾಜ್ ಮಾತನಾಡಿ ಪ್ರತಿಬಾರಿ ಅರಮನೆ ಬಳಿ ತಾಲೀಮು ನಡೆಯುತ್ತಿತ್ತು. ಅರಮನೆಯ ಗೋಡೆಗಳಿಗೆ ತೊಂದರೆಯಾಗಲಿವೆ ಎನ್ನುವ ಕಾರಣಕ್ಕೆ ಇಲ್ಲಿ ಮಾಡಿದ್ದೇವೆ ಸಿಡಿಮದ್ದು ಒಟ್ಟಾರೆ 92.2ಡೆಸಿಬಲ್ ಎವರೇಜ್ ಇದೆ ಎಂದು ತಿಳಿಸಿದರು…

Spread the love

Related post

ಮೈಸೂರು ನಗರ ನೂತನ ಡಿಸಿಪಿ ಯಾಗಿ ಡಾ.ಹರ್ಷ ಪ್ರಿಯಂವದ ನೇಮಕ…77 ದಿನಗಳ ನಂತರ ನಿಯೋಜನೆ…

ಮೈಸೂರು ನಗರ ನೂತನ ಡಿಸಿಪಿ ಯಾಗಿ ಡಾ.ಹರ್ಷ ಪ್ರಿಯಂವದ ನೇಮಕ…77 ದಿನಗಳ…

ಮೈಸೂರು ನಗರ ನೂತನ ಡಿಸಿಪಿ ಯಾಗಿ ಡಾ.ಹರ್ಷ ಪ್ರಿಯಂವದ ನೇಮಕ…77 ದಿನಗಳ ನಂತರ ನಿಯೋಜನೆ… ಮೈಸೂರು,ಮಾ18,Tv10 ಕನ್ನಡ ಮೈಸೂರು ನಗರ ಪೊಲೀಸ್‌ ಇಲಾಖೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ…
ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಕೋರ್ಸ್‌ ಮುಚ್ಚುವಿಕೆ: ಪ್ರೊ. ಕೆ.ಎಸ್. ರಂಗಪ ತೀವ್ರ ಅಸಮಾಧಾನ

ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಕೋರ್ಸ್‌ ಮುಚ್ಚುವಿಕೆ: ಪ್ರೊ. ಕೆ.ಎಸ್. ರಂಗಪ ತೀವ್ರ ಅಸಮಾಧಾನ

ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಕೋರ್ಸ್‌ ಮುಚ್ಚುವಿಕೆ: ಪ್ರೊ. ಕೆ.ಎಸ್. ರಂಗಪ ತೀವ್ರ ಅಸಮಾಧಾನ ಮೈಸೂರು: 100 ವರ್ಷಗಳ ಇತಿಹಾಸ ಹೊಂದಿರುವ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ವಿವಿಧ ಕೋರ್ಸ್‌ಗಳನ್ನು ಹಂತ ಹಂತವಾಗಿ ಮುಚ್ಚಲಾಗುತ್ತಿರುವ…
ಲೋಕಾಯುಕ್ತ ಟ್ರಾಪ್…ಗ್ರಾ.ಪಂ.ಪಿಡಿಓ ಲೋಕಾ ಬಲೆಗೆ…25 ಸಾವಿರ ಲಂಚ ಪಡೆದು ಲಾಕ್…ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಪಿಡಿಓ…ಅಧಿಕಾರಿಗಳ ಮುಂದೆ ಹರಿತವಾದ ಆಯುಧದಿಂದ ಕೈ ಕೊಯ್ದುಕೊಂಡ ಮಂಜುಳಾ…

ಲೋಕಾಯುಕ್ತ ಟ್ರಾಪ್…ಗ್ರಾ.ಪಂ.ಪಿಡಿಓ ಲೋಕಾ ಬಲೆಗೆ…25 ಸಾವಿರ ಲಂಚ ಪಡೆದು ಲಾಕ್…ರೆಡ್ ಹ್ಯಾಂಡಾಗಿ…

ಲೋಕಾಯುಕ್ತ ಟ್ರಾಪ್…ಗ್ರಾ.ಪಂ.ಪಿಡಿಓ ಲೋಕಾ ಬಲೆಗೆ…25 ಸಾವಿರ ಲಂಚ ಪಡೆದು ಲಾಕ್…ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಪಿಡಿಓ…ಅಧಿಕಾರಿಗಳ ಮುಂದೆ ಹರಿತವಾದ ಆಯುಧದಿಂದ ಕೈ ಕೊಯ್ದುಕೊಂಡ ಮಂಜುಳಾ… ಹುಣಸೂರು,ಮಾ16,Tv10 ಕನ್ನಡ ಬಾಕಿ ಸಂಬಳ…

Leave a Reply

Your email address will not be published. Required fields are marked *