ಒಂಟಿಯಾಗಿದ್ದ ಪೂಜಾರಿ ಕೈಕಾಲು ಕಟ್ಟಿ ಹತ್ಯೆ…ಚಿನ್ನಾಭರಣಕ್ಕಾಗಿ ನಡೆಯಿತಾ ಕೃತ್ಯ…?

ಒಂಟಿಯಾಗಿದ್ದ ಪೂಜಾರಿ ಕೈಕಾಲು ಕಟ್ಟಿ ಹತ್ಯೆ…ಚಿನ್ನಾಭರಣಕ್ಕಾಗಿ ನಡೆಯಿತಾ ಕೃತ್ಯ…?

ಒಂಟಿಯಾಗಿದ್ದ ಪೂಜಾರಿ ಕೈಕಾಲು ಕಟ್ಟಿ ಹತ್ಯೆ…ಚಿನ್ನಾಭರಣಕ್ಕಾಗಿ ನಡೆಯಿತಾ ಕೃತ್ಯ…?

ಹೆಚ್.ಡಿ.ಕೋಟೆ,ಸೆ18,Tv10 ಕನ್ನಡ
ಒಂಟಿಯಾಗಿದ್ದ ಪೂಜಾರಿಯ ಕೈಕಾಲು ಕಟ್ಟಿಹಾಕಿ ಕೊಲೆ ಮಾಡಿದ ಘಟನೆ ಹೆಚ್.ಡಿ.ಕೋಟೆ ತಾಲೂಕಿನ ಗಣೇಶ್ ಪುರ ಗ್ರಾಮದಲ್ಲಿ ನಡೆದಿದೆ.ಕೆಂಪದೇವರು(60) ಮೃತ ಅರ್ಚಕ.ಚಿನ್ನಾಭರಣಕ್ಕಾಗಿ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದೆ.ಗಣೇಶ್ ಪುರದ ದೇವಸ್ಥಾನದಲ್ಲಿ ಅರ್ಚಕರಾಗಿದ್ದ ಕೆಂಪದೇವರು ಸಮೀಪದ ಮನೆಯೊಂದರಲ್ಲಿ ಒಂಟಿಯಾಗಿ ವಾಸಿಸುತ್ತಿದ್ದರು.ಬೆಳಿಗ್ಗೆ ಎಷ್ಟುಹೊತ್ತಾದರೂ ಮನೆಯಿಂದ ಹೊರಬಾರದ ಕಾರಣ ಸ್ಥಳೀಯರು ಪರಿಶೀಲನೆ ನಡೆಸಿದಾಗ ಕೈಕಾಲು ಕಟ್ಟಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.ಮನೆಯಲ್ಲಿದ್ದ ಪದಾರ್ಥಗಳು ಚೆಲ್ಲಾಪಿಲ್ಲಿಯಾಗಿದೆ.ದೇವಸ್ಥಾನಕ್ಕೆ ಸೇರಿದ ಚಿನ್ನಾಭರಣ ದೋಚಿ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ.ಒಂಟಿಯಾಗಿದ್ದ ಕಾರಣ ಕಳುವಾದ ಪದಾರ್ಥಗಳ ಬಗ್ಗೆ ಪೊಲೀಸರಿಗೆ ಮಾಹಿತಿ ದೊರೆತಿಲ್ಲ.ಘಟನೆ ನಡೆದ ಸ್ಥಳಕ್ಕೆ ಎಸ್ಪಿ ಆರ್. ಚೇತನ್ ಹಾಗೂ ಅಡಿಷನಲ್ ಎಸ್ಪಿ ನಂದಿನಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಹೆಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…
ಕ್ಯಾಪ್ಟನ್ ಅಭಿಮನ್ಯುವಿಗೆ ರಾಜೋಚಿತ ಬೀಳ್ಕೊಡುಗೆ ನೀಡಿ…ಸಚಿವ ಈಶ್ವರ ಖಂಡ್ರೆ

ಕ್ಯಾಪ್ಟನ್ ಅಭಿಮನ್ಯುವಿಗೆ ರಾಜೋಚಿತ ಬೀಳ್ಕೊಡುಗೆ ನೀಡಿ…ಸಚಿವ ಈಶ್ವರ ಖಂಡ್ರೆ

ಕ್ಯಾಪ್ಟನ್ ಅಭಿಮನ್ಯುವಿಗೆ ರಾಜೋಚಿತ ಬೀಳ್ಕೊಡುಗೆ ನೀಡಿ…ಸಚಿವ ಈಶ್ವರ ಖಂಡ್ರೆ ಬೆಂಗಳೂರು,ಆ19,Tv10 ಕನ್ನಡ ಆರು ಬಾರಿ ಚಿನ್ನದ ಅಂಬಾರಿ ಹೊತ್ತಿರುವ 60 ವರ್ಷದ ಕ್ಯಾಪ್ಟನ್ ಅಭಿಮನ್ಯುವಿಗೆ ಈ ಬಾರಿಯ ಮೈಸೂರು…
ಮೂವರು ಗುಂಡೇಟಿಗೆ ಬಲಿ ಪ್ರಕರಣ…ಬೇಟೆಗಾರರು ಎಂಬುದಕ್ಕೆ ಪುರಾವೆ…ಸಾಕ್ಷ್ಯ ಸಲ್ಲಿಸಿದ ಅರಣ್ಯ ಇಲಾಖೆ…

ಮೂವರು ಗುಂಡೇಟಿಗೆ ಬಲಿ ಪ್ರಕರಣ…ಬೇಟೆಗಾರರು ಎಂಬುದಕ್ಕೆ ಪುರಾವೆ…ಸಾಕ್ಷ್ಯ ಸಲ್ಲಿಸಿದ ಅರಣ್ಯ ಇಲಾಖೆ…

ಮೂವರು ಗುಂಡೇಟಿಗೆ ಬಲಿ ಪ್ರಕರಣ…ಬೇಟೆಗಾರರು ಎಂಬುದಕ್ಕೆ ಪುರಾವೆ…ಸಾಕ್ಷ್ಯ ಸಲ್ಲಿಸಿದ ಅರಣ್ಯ ಇಲಾಖೆ… ಚಾಮರಾಜನಗರ,ಆ17,Tv10 ಕನ್ನಡ ಚಾಮರಾಜನಗರದಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರು ಬೇಟೆಗಾರರು ಎಂಬುದಕ್ಕೆ ಅರಣ್ಯ ಇಲಾಖೆ…

Leave a Reply

Your email address will not be published. Required fields are marked *