ಒಂಟಿಯಾಗಿದ್ದ ಪೂಜಾರಿ ಕೈಕಾಲು ಕಟ್ಟಿ ಹತ್ಯೆ…ಚಿನ್ನಾಭರಣಕ್ಕಾಗಿ ನಡೆಯಿತಾ ಕೃತ್ಯ…?

ಒಂಟಿಯಾಗಿದ್ದ ಪೂಜಾರಿ ಕೈಕಾಲು ಕಟ್ಟಿ ಹತ್ಯೆ…ಚಿನ್ನಾಭರಣಕ್ಕಾಗಿ ನಡೆಯಿತಾ ಕೃತ್ಯ…?

ಒಂಟಿಯಾಗಿದ್ದ ಪೂಜಾರಿ ಕೈಕಾಲು ಕಟ್ಟಿ ಹತ್ಯೆ…ಚಿನ್ನಾಭರಣಕ್ಕಾಗಿ ನಡೆಯಿತಾ ಕೃತ್ಯ…?

ಹೆಚ್.ಡಿ.ಕೋಟೆ,ಸೆ18,Tv10 ಕನ್ನಡ
ಒಂಟಿಯಾಗಿದ್ದ ಪೂಜಾರಿಯ ಕೈಕಾಲು ಕಟ್ಟಿಹಾಕಿ ಕೊಲೆ ಮಾಡಿದ ಘಟನೆ ಹೆಚ್.ಡಿ.ಕೋಟೆ ತಾಲೂಕಿನ ಗಣೇಶ್ ಪುರ ಗ್ರಾಮದಲ್ಲಿ ನಡೆದಿದೆ.ಕೆಂಪದೇವರು(60) ಮೃತ ಅರ್ಚಕ.ಚಿನ್ನಾಭರಣಕ್ಕಾಗಿ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದೆ.ಗಣೇಶ್ ಪುರದ ದೇವಸ್ಥಾನದಲ್ಲಿ ಅರ್ಚಕರಾಗಿದ್ದ ಕೆಂಪದೇವರು ಸಮೀಪದ ಮನೆಯೊಂದರಲ್ಲಿ ಒಂಟಿಯಾಗಿ ವಾಸಿಸುತ್ತಿದ್ದರು.ಬೆಳಿಗ್ಗೆ ಎಷ್ಟುಹೊತ್ತಾದರೂ ಮನೆಯಿಂದ ಹೊರಬಾರದ ಕಾರಣ ಸ್ಥಳೀಯರು ಪರಿಶೀಲನೆ ನಡೆಸಿದಾಗ ಕೈಕಾಲು ಕಟ್ಟಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.ಮನೆಯಲ್ಲಿದ್ದ ಪದಾರ್ಥಗಳು ಚೆಲ್ಲಾಪಿಲ್ಲಿಯಾಗಿದೆ.ದೇವಸ್ಥಾನಕ್ಕೆ ಸೇರಿದ ಚಿನ್ನಾಭರಣ ದೋಚಿ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ.ಒಂಟಿಯಾಗಿದ್ದ ಕಾರಣ ಕಳುವಾದ ಪದಾರ್ಥಗಳ ಬಗ್ಗೆ ಪೊಲೀಸರಿಗೆ ಮಾಹಿತಿ ದೊರೆತಿಲ್ಲ.ಘಟನೆ ನಡೆದ ಸ್ಥಳಕ್ಕೆ ಎಸ್ಪಿ ಆರ್. ಚೇತನ್ ಹಾಗೂ ಅಡಿಷನಲ್ ಎಸ್ಪಿ ನಂದಿನಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಹೆಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…
ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…
ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…

Leave a Reply

Your email address will not be published. Required fields are marked *