ಜಮೀನಿನಲ್ಲಿ ಅಕ್ರಮ ಗಾಂಜಾ ಪತ್ತೆ…ವ್ಯಕ್ತಿ ಬಂಧನ…

ಜಮೀನಿನಲ್ಲಿ ಅಕ್ರಮ ಗಾಂಜಾ ಪತ್ತೆ…ವ್ಯಕ್ತಿ ಬಂಧನ…

ಜಮೀನಿನಲ್ಲಿ ಅಕ್ರಮ ಗಾಂಜಾ ಪತ್ತೆ…ವ್ಯಕ್ತಿ ಬಂಧನ…

ಶ್ರೀರಂಗಪಟ್ಟಣ,ಸೆ20,Tv10 ಕನ್ನಡ
ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಸಂಗ್ರಹಿಸಿದ್ದ ವ್ಯಕ್ತಿಯನ್ನ ಅಬಕಾರಿ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಗಾಂಜಾ ವಶಪಡಿಸಿಕೊಂಡಿದ್ದಾರೆ.ಮೈಸೂರಿನ ಸುಭಾಷ್ ನಗರದ ಕೃಷ್ಣಮೂರ್ತಿ (೫೭) ಬಂಧಿತ ಆರೋಪಿ. ಶ್ರೀರಂಗಪಟ್ಟಣ ತಾಲ್ಲೂಕಿನ ಮೊಗರಹಳ್ಳಿ ಗ್ರಾಮದ ಸರ್ವೇ ನಂ೩೧ ರಲ್ಲಿನ ಕೃಷ್ಣಮೂರ್ತಿ ಎಂಬುವವರು ತಮ್ಮ ತೋಟದ ಮನೆಯಲ್ಲಿ ಅಕ್ರಮವಾಗಿ ಒಣ ಗಾಂಜಾ ಶೇಖರಿಸಿ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದು ಅಬಕಾರಿ ಅಧಿಕಾರಿಗಳು ದಾಳಿ ನಡೆಸಿದ ವೇಳೆ ಮನೆಯ ಮುಂಭಾಗದಲ್ಲಿ ನಿಂತಿದ್ದ ಸುಜೂಕಿ ಆಕ್ಸಿಸ್-೧೨೫ ಸ್ಕೂಟರ್‌ನಲ್ಲಿ ೧.೧೦೦ ಗ್ರಾಂ ಒಣ ಗಾಂಜಾ ಪತ್ತೆಯಾಗಿದೆ.
ಆತನನ್ನು ವಿಚಾರಣೆ ನಡೆಸಿದಾಗ ತಾನೆ ತೋಟದಲ್ಲಿ ಬೆಳೆದಿರುವುದಾಗಿ ತಪ್ಪೊಪ್ಪಿಕೊಂಡಿದ್ದು, ತನ್ನ ಬಾಳೆಗಿಡದ ತೋಟದ ಮದ್ಯದಲ್ಲಿ ೧೦ ಅಡಿಯ-೧೦, ೯ ಅಡಿಯ-೦೫, ೬ ಅಡಿಯ-೧೦, ೫ ಅಡಿಯ-೦೫, ಗಾಂಜಾ ಗಿಡಗಳಿದ್ದು, ಒಟ್ಟು ೩೦ ಹೂವು, ತೆನೆಯಿಂದ ಕೂಡಿದ ಹಸಿ ಗಾಂಜಾ ಗಿಡಗಳು ಪತ್ತೆಯಾಗಿವೆ. ಎನ್.ಡಿ.ಪಿ.ಎಸ್ ಕಾಯಿದೆ ೧೯೮೫ರ ಕಲಂ ೮(b),೮(ಛಿ) ೨೦(b)(i), ೨೦(b)(ii)(ಃ) ನಡಿ ಆರೋಪಿ ಕೃಷ್ಣಮೂರ್ತಿ ವಿರುದ್ಧ ಪ್ರಕರಣ ದಾಖಲಿಸಿ ಆರೋಪಿಯನ್ನು ದಸ್ತಗಿರಿ ಮಾಡಿ ನ್ಯಾಯಾದೀಶರ ಮುಂದೆ ಹಾಜರು ಪಡಿಸಿರುವುದಾಗಿ ಅಬಕಾರಿ ಅಧಿಕಾರಿಗಳು ತಿಳಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಅಬಕಾರಿ ಉಪ ಆಯುಕ್ತ ಡಾ|| ಮಹಾದೇವಿ ಬಾಯಿ, ಉಪ ಅದೀಕ್ಷಕ ಎನ್.ಟಿ ಆನಂದಕುಮಾರ್, ನಿರೀಕ್ಷಕರಾದ ಹೆಚ್.ಡಿ ರಮ್ಯ, ಬಿ.ಸಿ ರಮೇಶ್, ಉಪ ನಿರೀಕ್ಷಕರಾದ ಎಂ. ರಾಜಶೇಖರ, ಬಿ. ಶಿವಣ್ಣ, ಕಂದಾಯ ಇಲಾಖೆ ಆರ್‌ಐ ಉಮೇಶ್, ಗ್ರಾಮ ಲೆಕ್ಕಿಗ ಮಹೇಂದ್ರ, ಸಿಬ್ಬಂದಿಗಳಾದ ರಾಮು ಹೆಚ್.ವಿ, ದಿಲೀಪ್ ಕುಮಾರ್ ಪಿ.ಜಿ, ರಘು ಎಸ್, ನಾಗರಾಜು ಎಂ.ಜಿ, ಸಂದೀಪ ಬಿ.ಆರ್ ಇತರರು ಇದ್ದರು.

Spread the love

Related post

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…
ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…

Leave a Reply

Your email address will not be published. Required fields are marked *