ಜಮೀನಿನಲ್ಲಿ ಅಕ್ರಮ ಗಾಂಜಾ ಪತ್ತೆ…ವ್ಯಕ್ತಿ ಬಂಧನ…

ಜಮೀನಿನಲ್ಲಿ ಅಕ್ರಮ ಗಾಂಜಾ ಪತ್ತೆ…ವ್ಯಕ್ತಿ ಬಂಧನ…

ಜಮೀನಿನಲ್ಲಿ ಅಕ್ರಮ ಗಾಂಜಾ ಪತ್ತೆ…ವ್ಯಕ್ತಿ ಬಂಧನ…

ಶ್ರೀರಂಗಪಟ್ಟಣ,ಸೆ20,Tv10 ಕನ್ನಡ
ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಸಂಗ್ರಹಿಸಿದ್ದ ವ್ಯಕ್ತಿಯನ್ನ ಅಬಕಾರಿ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಗಾಂಜಾ ವಶಪಡಿಸಿಕೊಂಡಿದ್ದಾರೆ.ಮೈಸೂರಿನ ಸುಭಾಷ್ ನಗರದ ಕೃಷ್ಣಮೂರ್ತಿ (೫೭) ಬಂಧಿತ ಆರೋಪಿ. ಶ್ರೀರಂಗಪಟ್ಟಣ ತಾಲ್ಲೂಕಿನ ಮೊಗರಹಳ್ಳಿ ಗ್ರಾಮದ ಸರ್ವೇ ನಂ೩೧ ರಲ್ಲಿನ ಕೃಷ್ಣಮೂರ್ತಿ ಎಂಬುವವರು ತಮ್ಮ ತೋಟದ ಮನೆಯಲ್ಲಿ ಅಕ್ರಮವಾಗಿ ಒಣ ಗಾಂಜಾ ಶೇಖರಿಸಿ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದು ಅಬಕಾರಿ ಅಧಿಕಾರಿಗಳು ದಾಳಿ ನಡೆಸಿದ ವೇಳೆ ಮನೆಯ ಮುಂಭಾಗದಲ್ಲಿ ನಿಂತಿದ್ದ ಸುಜೂಕಿ ಆಕ್ಸಿಸ್-೧೨೫ ಸ್ಕೂಟರ್‌ನಲ್ಲಿ ೧.೧೦೦ ಗ್ರಾಂ ಒಣ ಗಾಂಜಾ ಪತ್ತೆಯಾಗಿದೆ.
ಆತನನ್ನು ವಿಚಾರಣೆ ನಡೆಸಿದಾಗ ತಾನೆ ತೋಟದಲ್ಲಿ ಬೆಳೆದಿರುವುದಾಗಿ ತಪ್ಪೊಪ್ಪಿಕೊಂಡಿದ್ದು, ತನ್ನ ಬಾಳೆಗಿಡದ ತೋಟದ ಮದ್ಯದಲ್ಲಿ ೧೦ ಅಡಿಯ-೧೦, ೯ ಅಡಿಯ-೦೫, ೬ ಅಡಿಯ-೧೦, ೫ ಅಡಿಯ-೦೫, ಗಾಂಜಾ ಗಿಡಗಳಿದ್ದು, ಒಟ್ಟು ೩೦ ಹೂವು, ತೆನೆಯಿಂದ ಕೂಡಿದ ಹಸಿ ಗಾಂಜಾ ಗಿಡಗಳು ಪತ್ತೆಯಾಗಿವೆ. ಎನ್.ಡಿ.ಪಿ.ಎಸ್ ಕಾಯಿದೆ ೧೯೮೫ರ ಕಲಂ ೮(b),೮(ಛಿ) ೨೦(b)(i), ೨೦(b)(ii)(ಃ) ನಡಿ ಆರೋಪಿ ಕೃಷ್ಣಮೂರ್ತಿ ವಿರುದ್ಧ ಪ್ರಕರಣ ದಾಖಲಿಸಿ ಆರೋಪಿಯನ್ನು ದಸ್ತಗಿರಿ ಮಾಡಿ ನ್ಯಾಯಾದೀಶರ ಮುಂದೆ ಹಾಜರು ಪಡಿಸಿರುವುದಾಗಿ ಅಬಕಾರಿ ಅಧಿಕಾರಿಗಳು ತಿಳಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಅಬಕಾರಿ ಉಪ ಆಯುಕ್ತ ಡಾ|| ಮಹಾದೇವಿ ಬಾಯಿ, ಉಪ ಅದೀಕ್ಷಕ ಎನ್.ಟಿ ಆನಂದಕುಮಾರ್, ನಿರೀಕ್ಷಕರಾದ ಹೆಚ್.ಡಿ ರಮ್ಯ, ಬಿ.ಸಿ ರಮೇಶ್, ಉಪ ನಿರೀಕ್ಷಕರಾದ ಎಂ. ರಾಜಶೇಖರ, ಬಿ. ಶಿವಣ್ಣ, ಕಂದಾಯ ಇಲಾಖೆ ಆರ್‌ಐ ಉಮೇಶ್, ಗ್ರಾಮ ಲೆಕ್ಕಿಗ ಮಹೇಂದ್ರ, ಸಿಬ್ಬಂದಿಗಳಾದ ರಾಮು ಹೆಚ್.ವಿ, ದಿಲೀಪ್ ಕುಮಾರ್ ಪಿ.ಜಿ, ರಘು ಎಸ್, ನಾಗರಾಜು ಎಂ.ಜಿ, ಸಂದೀಪ ಬಿ.ಆರ್ ಇತರರು ಇದ್ದರು.

Spread the love

Related post

ಮಾಧ್ಯಮದವರ ಜೊತೆ ರಿಷಬ್ ಶೆಟ್ಟಿ ಸೆಲ್ಫಿ…

ಮಾಧ್ಯಮದವರ ಜೊತೆ ರಿಷಬ್ ಶೆಟ್ಟಿ ಸೆಲ್ಫಿ…

ಮಾಧ್ಯಮದವರ ಜೊತೆ ರಿಷಬ್ ಶೆಟ್ಟಿ ಸೆಲ್ಫಿ… ಮೈಸೂರು,ಅ16,Tv10 ಕನ್ನಡ ಮಾಧ್ಯಮದ ಗೆಳೆಯರ ಜೊತೆ ರಿಷಬ್ ಶೆಟ್ಟಿ ಸೆಲ್ಫಿ ಕ್ಲಿಕ್ಕಿಸಿದ್ದಾರೆ.ಚಾಮುಂಡಿ ಬೆಟ್ಟಕ್ಕೆ ಭೇಟಿ‌ ನೀಡಿದ ವೇಳೆತಾವೇ ಮೊಬೈಲ್ ಪಡೆದು ಸೆಲ್ಫಿ…
ಉಪ ಪ್ರಾಂಶುಪಾಲರಾಗಿ ನೇಮಕ ಮಾಡುವ ಆಮಿಷ…7.45 ಲಕ್ಷ ವಂಚನೆ…ಸಿಎಆರ್ ಮುಖ್ಯಪೇದೆ,ಪತ್ನಿ ಸೇರಿದಂತೆ 7 ಮಂದಿ ವಿರುದ್ದ FIR…

ಉಪ ಪ್ರಾಂಶುಪಾಲರಾಗಿ ನೇಮಕ ಮಾಡುವ ಆಮಿಷ…7.45 ಲಕ್ಷ ವಂಚನೆ…ಸಿಎಆರ್ ಮುಖ್ಯಪೇದೆ,ಪತ್ನಿ ಸೇರಿದಂತೆ…

ಮೈಸೂರು,ಅ16,Tv10 ಕನ್ನಡ ಪಿಯು ಕಾಲೇಜಿಗೆ ಉಪ ಪ್ರಾಂಶುಪಾಲರಾಗಿ ಹಾಗೂ ಟ್ರಸ್ಟ್ ಗೆ ಟ್ರಸ್ಟಿಯಾಗಿ ನೇಮಕ ಮಾಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಗೆ ಸಿಎಆರ್ ಮುಖ್ಯಪೇದೆ ಹಾಗೂ ಪತ್ನಿ 7.45 ಲಕ್ಷ ವಂಚಿಸಿದ…
ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…

Leave a Reply

Your email address will not be published. Required fields are marked *