ಮದುವೆ ಆದ ಒಂದು ವರ್ಷಕ್ಕೆ ಕೈಕೊಟ್ಟ ಪತಿ…ಅತಂತ್ರಕ್ಕೆ ಸಿಲುಕಿದ ಪತ್ನಿ…ಗಂಡ ಸೇರಿದಂತೆ 16 ಮಂದಿ ವಿರುದ್ದ FIR ದಾಖಲು…

ಮದುವೆ ಆದ ಒಂದು ವರ್ಷಕ್ಕೆ ಕೈಕೊಟ್ಟ ಪತಿ…ಅತಂತ್ರಕ್ಕೆ ಸಿಲುಕಿದ ಪತ್ನಿ…ಗಂಡ ಸೇರಿದಂತೆ 16 ಮಂದಿ ವಿರುದ್ದ FIR ದಾಖಲು…

ಮದುವೆ ಆದ ಒಂದು ವರ್ಷಕ್ಕೆ ಕೈಕೊಟ್ಟ ಪತಿ…ಅತಂತ್ರಕ್ಕೆ ಸಿಲುಕಿದ ಪತ್ನಿ…ಗಂಡ ಸೇರಿದಂತೆ 16 ಮಂದಿ ವಿರುದ್ದ FIR ದಾಖಲು…

ಹುಣಸೂರು,ಸೆ23,Tv10 ಕನ್ನಡ
ಪ್ರೀತಿಸಿ ವಿವಾಹವಾದ ಜೋಡಿ ಒಂದು ವರ್ಷಕ್ಕೆ ಬೇರ್ಪಟ್ಟಿದೆ.ಹೆತ್ತವರು ಹಾಗೂ ಸಂಭಂಧಿಕರ ಚಿತಾವಣೆಯಿಂದ ಪತಿರಾಯ ಕೈಕೊಟ್ಟಿದ್ದಾನೆ.ಜಾತಿ ನಿಂದನೆ ಮಾಡಿ ಅಪಪ್ರಚಾರ ಮಾಡಿ ಕೊಲೆ ಬೆದರಿಕೆ ಹಾಕಿ ದಂಪತಿಯನ್ನ ದೂರ ಮಾಡಿದ ಹಿನ್ನಲೆ ವಂಚನೆಗೆ ಒಳಗಾದ ವಿವಾಹಿತೆ ನ್ಯಾಯಕ್ಕಾಗಿ ಹುಣಸೂರು ಗ್ರಾಮಾಂತರ ಠಾಣೆ ಪೊಲೀಸರ ಮೊರೆ ಹೋಗಿದ್ದಾರೆ.ಗಂಡ ಸೇರಿದಂತೆ ಒಂದೇ ಕುಟುಂಬದ 16 ಮಂದಿ ಮೇಲೆ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.ಚಿತ್ರದುರ್ಗದ ಅಶ್ವಿನಿ(24) ಪತಿಯಿಂದ ವಂಚನೆಗೆ ಒಳಗಾದ ನತದೃಷ್ಟೆ.ಹುಣಸೂರು ತಾಲೂಕಿನ ಮರೂರು ಗ್ರಾಮದ ಅಭಿಷೇಕ್ ನ ಅಶ್ವಿನಿ ಜೂನ್ 2021 ರಲ್ಲಿ ಪ್ರೀತಿಸಿ ಮದುವೆ ಆಗಿದ್ದಳು.ಇವರಿಬ್ಬರ ಪ್ರೀತಿಗೆ ಇಬ್ಬರ ಕುಟುಂಬಸ್ಥರೂ ಸಹ ಒಪ್ಪಿಗೆ ನೀಡಿದ್ದರು.ನಂತರದ ದಿನಗಳಲ್ಲಿ ಇಬ್ಬರನ್ನೂ ಬೇರ್ಪಡಿಸುವ ಪ್ರಯತ್ನ ನಡೆದಿದೆ.ಜಾತಿ ಕಾರಣ ನೀಡಿರುವುದಲ್ಲದೆ ಅಶ್ವಿನಿ ಮೇಲೆ ಇಲ್ಲಸಲ್ಲದ ಅಪಪ್ರಚಾರ ಮಾಡಿದ್ದಾರೆ.ವಾಟ್ಸಾಪ್ ನಲ್ಲಿ ಬೆತ್ತಲೆ ಫೋಟೋ ಹಾಕುತ್ತಿದ್ದಾಳೆಂದು ಅಪಪ್ರಚಾರ ಮಾಡಿದ್ದಾರೆ.ಇದೇ ನೆಪ ಇಟ್ಟುಕೊಂಡು ಪತಿ ಅಭಿಷೇಕ್ ಗೆ ಮತ್ತೊಂದು ಮದುವೆಗೆ ಸಂಭಂಧ ಹುಡುಕುತ್ತಿರುವುದಾಗಿ ಅಶ್ವಿನಿ ದೂರಿನಲ್ಲಿ ಆರೋಪಿಸಿದ್ದಾರೆ.ದಲಿತ ಹುಡುಗಿ ಎಂದು ಕೊಟ್ಟಿಗೆಯಲ್ಲಿ ಇರಿಸಿದ್ದಾರೆ.ನ್ಯಾಯ ಕೇಳಲು ಹೋದ ಅಶ್ವಿನಿಗೆ ಅತ್ತೆ ಹಾಗೂ ಮಾವ ಹಲ್ಲೆ ಮಾಡಲು ಮುಂದಾಗಿದ್ದಾರೆ.ಗಂಡ ಹಾಗೂ ಮನೆಯವರಿಂದ ತ್ಯಜಿಸಲ್ಪಟ್ಟ ಅಶ್ವಿನಿ ಇದೀಗ ಅತಂತ್ರಕ್ಕೆ ಸಿಲುಕಿದ್ದಾರೆ.ಪ್ರೀತಿಸಿ ಮದುವೆ ಆದ ಗಂಡನಿಗಾಗಿ ಪೊಲೀಸ್ ಠಾಣೆ ಮೆಟ್ಟಲೇರಿರುವ ಅಶ್ವಿನಿಗೆ ನ್ಯಾಯ ದೊರೆಯಬೇಕಿದೆ.ಅಶ್ವಿನಿಯ ಹೆತ್ತವರು ಮಗಳ ಪರಿಸ್ಥಿತಿಗೆ ಕಣ್ಣೀರಿಡುತ್ತಿದ್ದಾರೆ…

Spread the love

Related post

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…
ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…

Leave a Reply

Your email address will not be published. Required fields are marked *