ಮನೆಮನೆಗಳಲ್ಲಿ ಗೊಂಬೆ ಕೂರಿಸುವುದರಿಂದ ಗೃಹಿಣಿಯರು ನಮ್ಮ ಪರಂಪರೆಯನ್ನು ಉಳಿಸಿ ಬೆಳೆಸುತ್ತಿದ್ದಾರೆ ಶಾಸಕ ಎಲ್ ನಾಗೇಂದ್ರ

ಮನೆಮನೆಗಳಲ್ಲಿ ಗೊಂಬೆ ಕೂರಿಸುವುದರಿಂದ ಗೃಹಿಣಿಯರು ನಮ್ಮ ಪರಂಪರೆಯನ್ನು ಉಳಿಸಿ ಬೆಳೆಸುತ್ತಿದ್ದಾರೆ ಶಾಸಕ ಎಲ್ ನಾಗೇಂದ್ರ

  • Mysore
  • September 23, 2022
  • No Comment
  • 160

ಮನೆಮನೆಗಳಲ್ಲಿ ಗೊಂಬೆ ಕೂರಿಸುವುದರಿಂದ ಗೃಹಿಣಿಯರು ನಮ್ಮ ಪರಂಪರೆಯನ್ನು ಉಳಿಸಿ ಬೆಳೆಸುತ್ತಿದ್ದಾರೆ ಶಾಸಕ ಎಲ್ ನಾಗೇಂದ್ರ

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2022 ರ ಕೆ ಎಂ ಪ್ರವೀಣ್ ಕುಮಾರ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಮನೆ ಮನೆಗಳಲ್ಲಿ ದಸರಾ ಗೊಂಬೆ ಕೂರಿಸುವ ಸ್ಪರ್ಧೆಯನ್ನು ಆಯೋಜಿಸಿದ್ದು ಅದರ ಪ್ರಚಾರ ಸಾಮಗ್ರಿಗಳನ್ನು
ಬಿ ಎನ್ ರಸ್ತೆಯಲ್ಲಿರುವ ಖಾಸಗಿ ಹೋಟೆಲ್ ನಲ್ಲಿ
ಉದ್ಘಾಟಿಸಿ ನಂತರ ಮಾತನಾಡಿದ
ಶಾಸಕರಾದ ಎಲ್ ನಾಗೇಂದ್ರ
ಸಂಸ್ಕೃತಿಯ ಮತ್ತು ನಮ್ಮ ಪರಂಪರೆಯ ಉಳಿವಿಗಾಗಿ ಹೋರಾಡುವ ಸಂದರ್ಭ ಎದುರಾಗಿದೆ ಪ್ರತಿಯೊಬ್ಬರು ಅದಕ್ಕಾಗಿ ಶ್ರಮಿಸಬೇಕು.ನಮ್ಮ ಸಂಪ್ರದಾಯ ಮತ್ತು ಧಾರ್ಮಿಕತೆಯ ರಕ್ಷಣೆಗಾಗಿ ಪ್ರತಿಯೊಬ್ಬ ಹಿಂದುಗಳು ಒಗ್ಗಟ್ಟಾಗಿ ಕಲೆತು ಮುಂದಿನ ಪೀಳಿಗೆಗೆ ಸಂರಕ್ಷಿಸಬೇಕು ಎಂದು ಕರೆ ನೀಡಿದರು .
ನವರಾತ್ರಿಯು ಮೈಸೂರು ಪರಂಪರೆಯಲ್ಲಿ ಅತ್ಯಂತ ಪವಿತ್ರವಾದದ್ದು ದಸರಾ ಗೊಂಬೆ ಪ್ರದರ್ಶನಕ್ಕೆ ಅತ್ಯಂತ ಮಹತ್ವವಿದೆ .ಪಟ್ಟದ ಗೊಂಬೆಗಳನ್ನು ಲಕ್ಷ್ಮಿನಾರಾಯಣ ಸ್ವರೂಪದಲ್ಲಿ ಪೂಜಿಸಿ ಪುರಾಣ ಪುಣ್ಯಕಥೆಗಳನ್ನು ಗೊಂಬೆಗಳ ಮೂಲಕ ರೂಪಕವಾಗಿ ಪ್ರಚುರಪಡಿಸಿ ಅದನ್ನು ಮುಂದಿನ ಪೀಳಿಗೆಗೆ ಪರಿಚಯಿಸುವುದೇ ಇದರ ಮೂಲ ಉದ್ದೇಶ .ಮೈಸೂರಿನ ಮನೆಮನೆಗಳಲ್ಲಿ ಕೂರಿಸುವುದರಿಂದ ಗೃಹಿಣಿಯರು ನಮ್ಮ ಪರಂಪರೆಯನ್ನು ಉಳಿಸಿ ಬೆಳೆಸುತ್ತಿದ್ದಾರೆ ಎಂದರು
ನಂತರ ಮಾತನಾಡಿ ಸ್ಪರ್ಧೆಯ ವಿವರ ನೀಡಿದ ಕೆ ಎಂ ಪಿ ಕೆ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್
ಸ್ಪರ್ಧೆಯಲ್ಲಿ ಸ್ಪರ್ಧೆ ಮಾಡುವವರು 200 ರೂ ನೋಂದಣಿ ಶುಲ್ಕ ಇರುತ್ತದೆ ,
ದಸರಾ ಗೊಂಬೆ ಸ್ಪರ್ಧೆಯು
ಸಂಸ್ಕೃತಿ ಇತಿಹಾಸ ಸಾರುವ ಹಾಗೂ ಐತಿಹಾಸಿಕ ಹಿನ್ನಲೆ ಒಳಗೊಂಡಂತೆ ಗೊಂಬೆಗಳನ್ನು ಕೂರಿಸಿ ದವರಿಗೆ ಮೊದಲನೇ ಬಹುಮಾನ ಶ್ರೀ ಶ್ರೀ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರಿನಲ್ಲೇ 2000 ರೂ ನಗದು ಹಾಗೂ ಪಾರಿತೋಷಕ ಹಾಗೂ ಪ್ರಮಾಣಪತ್ರ ನೀಡಲಾಗುವುದು ಎರಡನೇ ಬಹುಮಾನ 1000 ರೂ ನಗದು
ಪಾರಿತೋಷಕ ಹಾಗೂ ಪ್ರಮಾಣಪತ್ರ,ಮೂರನೇ ಬಹುಮಾನ 500ರೂ ನಗದು
ಪಾರಿತೋಷಕ ಹಾಗೂ
10 ಸ್ಪರ್ಧಿಗಳಿಗೆ ಸಮಾಧಾನಕರ ಬಹುಮಾನ ಹಾಗೂ ಪ್ರಮಾಣಪತ್ರನೀಡಲಾಗುವುದು ಸ್ಪರ್ಧೆಯಲ್ಲಿ ಸ್ಪರ್ಧಿಸಿದ ಎಲ್ಲಾ ಸ್ಪರ್ಧಾಳುಗಳಿಗೆ ಪ್ರಮಾಣ ಪತ್ರ ಹಾಗೂ ನೆನಪಿನ ಕಾಣಿಕೆ ನೀಡಲಾಗುವುದು

ಕಡೆಯ ದಿನಾಂಕ 5/10/2022 ರ ಒಳಗೆ 9880752727ಈ ದೂರವಾಣಿ ಸಂಖ್ಯೆಗೆ ವಾಟ್ಸ್ ಆ್ಯಪ್ ಮೂಲಕ ಗೊಂಬೆ ಜೋಡಣೆ ಮಾಡಿರುವ ಚಿತ್ರ ಹಾಗೂ 3ನಿಮಿಷದ ವೀಡಿಯೊವನ್ನು ಕಲಿಸಿಕೊಡಬೇಕು ಆನಂತರ ನುರಿತ ತೀರ್ಪುಗಾರರು ಅವರ ನಿವಾಸಕ್ಕೆ ತೆರಳಿ ವೀಕ್ಷಿಸಿ ಸಂಸ್ಕೃತಿ ಇತಿಹಾಸ ಸಾರುವ ಹಾಗೂ ಐತಿಹಾಸಿಕ ಹಿನ್ನಲೆ ಒಳಗೊಂಡ ಅದ್ಭುತವಾಗಿ ಗೊಂಬೆ ಜೋಡಣೆ ಮಾಡಿದಂತಹ ಸ್ಪರ್ಧಿಗಳನ್ನು ಆಯ್ಕೆ ಮಾಡುತ್ತಾರೆ ಎಂದು ಹೇಳಿದರು
ಶಾಸಕರಾದ ಎಲ್ ನಾಗೇಂದ್ರ ,ಜೀವಧಾರ ರಕ್ತನಿಧಿ ಕೇಂದ್ರದ ನಿರ್ದೇಶಕ ಗಿರೀಶ್ ,ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್ ,ಉಪಾಧ್ಯಕ್ಷರಾದ ಎಸ್ ಎನ್ ರಾಜೇಶ್ ,
ಮೈಸೂರು ಮಹಾನಗರ ಪಾಲಿಕೆ ಉಪಾಯುಕ್ತರು ಅಭಿವೃದ್ಧಿ ಮಹೇಶ್ ,ಕಾರ್ಯಪಾಲಕ ಅಭಿಯಂತರುರಜಿತ್ ಕುಮಾರ್,ಅಭಿವೃದ್ಧಿ ಅಧಿಕಾರಿ ಮಂಜುನಾಥ ,
ಹಾಗೂ ಇನ್ನಿತರರು ಹಾಜರಿದ್ದರು

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *