ಮನೆಮನೆಗಳಲ್ಲಿ ಗೊಂಬೆ ಕೂರಿಸುವುದರಿಂದ ಗೃಹಿಣಿಯರು ನಮ್ಮ ಪರಂಪರೆಯನ್ನು ಉಳಿಸಿ ಬೆಳೆಸುತ್ತಿದ್ದಾರೆ ಶಾಸಕ ಎಲ್ ನಾಗೇಂದ್ರ

ಮನೆಮನೆಗಳಲ್ಲಿ ಗೊಂಬೆ ಕೂರಿಸುವುದರಿಂದ ಗೃಹಿಣಿಯರು ನಮ್ಮ ಪರಂಪರೆಯನ್ನು ಉಳಿಸಿ ಬೆಳೆಸುತ್ತಿದ್ದಾರೆ ಶಾಸಕ ಎಲ್ ನಾಗೇಂದ್ರ

  • Mysore
  • September 23, 2022
  • No Comment
  • 106

ಮನೆಮನೆಗಳಲ್ಲಿ ಗೊಂಬೆ ಕೂರಿಸುವುದರಿಂದ ಗೃಹಿಣಿಯರು ನಮ್ಮ ಪರಂಪರೆಯನ್ನು ಉಳಿಸಿ ಬೆಳೆಸುತ್ತಿದ್ದಾರೆ ಶಾಸಕ ಎಲ್ ನಾಗೇಂದ್ರ

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2022 ರ ಕೆ ಎಂ ಪ್ರವೀಣ್ ಕುಮಾರ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಮನೆ ಮನೆಗಳಲ್ಲಿ ದಸರಾ ಗೊಂಬೆ ಕೂರಿಸುವ ಸ್ಪರ್ಧೆಯನ್ನು ಆಯೋಜಿಸಿದ್ದು ಅದರ ಪ್ರಚಾರ ಸಾಮಗ್ರಿಗಳನ್ನು
ಬಿ ಎನ್ ರಸ್ತೆಯಲ್ಲಿರುವ ಖಾಸಗಿ ಹೋಟೆಲ್ ನಲ್ಲಿ
ಉದ್ಘಾಟಿಸಿ ನಂತರ ಮಾತನಾಡಿದ
ಶಾಸಕರಾದ ಎಲ್ ನಾಗೇಂದ್ರ
ಸಂಸ್ಕೃತಿಯ ಮತ್ತು ನಮ್ಮ ಪರಂಪರೆಯ ಉಳಿವಿಗಾಗಿ ಹೋರಾಡುವ ಸಂದರ್ಭ ಎದುರಾಗಿದೆ ಪ್ರತಿಯೊಬ್ಬರು ಅದಕ್ಕಾಗಿ ಶ್ರಮಿಸಬೇಕು.ನಮ್ಮ ಸಂಪ್ರದಾಯ ಮತ್ತು ಧಾರ್ಮಿಕತೆಯ ರಕ್ಷಣೆಗಾಗಿ ಪ್ರತಿಯೊಬ್ಬ ಹಿಂದುಗಳು ಒಗ್ಗಟ್ಟಾಗಿ ಕಲೆತು ಮುಂದಿನ ಪೀಳಿಗೆಗೆ ಸಂರಕ್ಷಿಸಬೇಕು ಎಂದು ಕರೆ ನೀಡಿದರು .
ನವರಾತ್ರಿಯು ಮೈಸೂರು ಪರಂಪರೆಯಲ್ಲಿ ಅತ್ಯಂತ ಪವಿತ್ರವಾದದ್ದು ದಸರಾ ಗೊಂಬೆ ಪ್ರದರ್ಶನಕ್ಕೆ ಅತ್ಯಂತ ಮಹತ್ವವಿದೆ .ಪಟ್ಟದ ಗೊಂಬೆಗಳನ್ನು ಲಕ್ಷ್ಮಿನಾರಾಯಣ ಸ್ವರೂಪದಲ್ಲಿ ಪೂಜಿಸಿ ಪುರಾಣ ಪುಣ್ಯಕಥೆಗಳನ್ನು ಗೊಂಬೆಗಳ ಮೂಲಕ ರೂಪಕವಾಗಿ ಪ್ರಚುರಪಡಿಸಿ ಅದನ್ನು ಮುಂದಿನ ಪೀಳಿಗೆಗೆ ಪರಿಚಯಿಸುವುದೇ ಇದರ ಮೂಲ ಉದ್ದೇಶ .ಮೈಸೂರಿನ ಮನೆಮನೆಗಳಲ್ಲಿ ಕೂರಿಸುವುದರಿಂದ ಗೃಹಿಣಿಯರು ನಮ್ಮ ಪರಂಪರೆಯನ್ನು ಉಳಿಸಿ ಬೆಳೆಸುತ್ತಿದ್ದಾರೆ ಎಂದರು
ನಂತರ ಮಾತನಾಡಿ ಸ್ಪರ್ಧೆಯ ವಿವರ ನೀಡಿದ ಕೆ ಎಂ ಪಿ ಕೆ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್
ಸ್ಪರ್ಧೆಯಲ್ಲಿ ಸ್ಪರ್ಧೆ ಮಾಡುವವರು 200 ರೂ ನೋಂದಣಿ ಶುಲ್ಕ ಇರುತ್ತದೆ ,
ದಸರಾ ಗೊಂಬೆ ಸ್ಪರ್ಧೆಯು
ಸಂಸ್ಕೃತಿ ಇತಿಹಾಸ ಸಾರುವ ಹಾಗೂ ಐತಿಹಾಸಿಕ ಹಿನ್ನಲೆ ಒಳಗೊಂಡಂತೆ ಗೊಂಬೆಗಳನ್ನು ಕೂರಿಸಿ ದವರಿಗೆ ಮೊದಲನೇ ಬಹುಮಾನ ಶ್ರೀ ಶ್ರೀ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರಿನಲ್ಲೇ 2000 ರೂ ನಗದು ಹಾಗೂ ಪಾರಿತೋಷಕ ಹಾಗೂ ಪ್ರಮಾಣಪತ್ರ ನೀಡಲಾಗುವುದು ಎರಡನೇ ಬಹುಮಾನ 1000 ರೂ ನಗದು
ಪಾರಿತೋಷಕ ಹಾಗೂ ಪ್ರಮಾಣಪತ್ರ,ಮೂರನೇ ಬಹುಮಾನ 500ರೂ ನಗದು
ಪಾರಿತೋಷಕ ಹಾಗೂ
10 ಸ್ಪರ್ಧಿಗಳಿಗೆ ಸಮಾಧಾನಕರ ಬಹುಮಾನ ಹಾಗೂ ಪ್ರಮಾಣಪತ್ರನೀಡಲಾಗುವುದು ಸ್ಪರ್ಧೆಯಲ್ಲಿ ಸ್ಪರ್ಧಿಸಿದ ಎಲ್ಲಾ ಸ್ಪರ್ಧಾಳುಗಳಿಗೆ ಪ್ರಮಾಣ ಪತ್ರ ಹಾಗೂ ನೆನಪಿನ ಕಾಣಿಕೆ ನೀಡಲಾಗುವುದು

ಕಡೆಯ ದಿನಾಂಕ 5/10/2022 ರ ಒಳಗೆ 9880752727ಈ ದೂರವಾಣಿ ಸಂಖ್ಯೆಗೆ ವಾಟ್ಸ್ ಆ್ಯಪ್ ಮೂಲಕ ಗೊಂಬೆ ಜೋಡಣೆ ಮಾಡಿರುವ ಚಿತ್ರ ಹಾಗೂ 3ನಿಮಿಷದ ವೀಡಿಯೊವನ್ನು ಕಲಿಸಿಕೊಡಬೇಕು ಆನಂತರ ನುರಿತ ತೀರ್ಪುಗಾರರು ಅವರ ನಿವಾಸಕ್ಕೆ ತೆರಳಿ ವೀಕ್ಷಿಸಿ ಸಂಸ್ಕೃತಿ ಇತಿಹಾಸ ಸಾರುವ ಹಾಗೂ ಐತಿಹಾಸಿಕ ಹಿನ್ನಲೆ ಒಳಗೊಂಡ ಅದ್ಭುತವಾಗಿ ಗೊಂಬೆ ಜೋಡಣೆ ಮಾಡಿದಂತಹ ಸ್ಪರ್ಧಿಗಳನ್ನು ಆಯ್ಕೆ ಮಾಡುತ್ತಾರೆ ಎಂದು ಹೇಳಿದರು
ಶಾಸಕರಾದ ಎಲ್ ನಾಗೇಂದ್ರ ,ಜೀವಧಾರ ರಕ್ತನಿಧಿ ಕೇಂದ್ರದ ನಿರ್ದೇಶಕ ಗಿರೀಶ್ ,ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್ ,ಉಪಾಧ್ಯಕ್ಷರಾದ ಎಸ್ ಎನ್ ರಾಜೇಶ್ ,
ಮೈಸೂರು ಮಹಾನಗರ ಪಾಲಿಕೆ ಉಪಾಯುಕ್ತರು ಅಭಿವೃದ್ಧಿ ಮಹೇಶ್ ,ಕಾರ್ಯಪಾಲಕ ಅಭಿಯಂತರುರಜಿತ್ ಕುಮಾರ್,ಅಭಿವೃದ್ಧಿ ಅಧಿಕಾರಿ ಮಂಜುನಾಥ ,
ಹಾಗೂ ಇನ್ನಿತರರು ಹಾಜರಿದ್ದರು

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *