ಶ್ರೀಗಂಧದ ಮರಕ್ಕೆ ಕೊಡಲಿಪೆಟ್ಟು ಪ್ರಕರಣ…ಗುತ್ತಿಗೆದಾರನ ಮೇಲೆ FIR ದಾಖಲು…Tv10 ವರದಿ ಫಲಶೃತಿ…

ಶ್ರೀಗಂಧದ ಮರಕ್ಕೆ ಕೊಡಲಿಪೆಟ್ಟು ಪ್ರಕರಣ…ಗುತ್ತಿಗೆದಾರನ ಮೇಲೆ FIR ದಾಖಲು…Tv10 ವರದಿ ಫಲಶೃತಿ…

ಶ್ರೀಗಂಧದ ಮರಕ್ಕೆ ಕೊಡಲಿಪೆಟ್ಟು ಪ್ರಕರಣ…ಗುತ್ತಿಗೆದಾರನ ಮೇಲೆ FIR ದಾಖಲು…Tv10 ವರದಿ ಫಲಶೃತಿ…

ಮೈಸೂರು,ಸೆ23,Tv10 ಕನ್ನಡ
ರಸ್ತೆ ಅಭಿವೃದ್ದಿ ಕಾಮಗಾರಿ ವೇಳೆ ಶ್ರೀಗಂಧದ ಮರ ಹನನ ಮಾಡಿದ ಗುತ್ತಿಗೆದಾರನ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು FIR ದಾಖಲು ಮಾಡಿದ್ದಾರೆ.ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಎಸ್.ಎಲ್.ಜಿ.ಕನ್ಸ್ಟ್ರಕ್ಷನ್ಸ್ ನ ಮಾಲೀಕರಾದ ಲಕ್ಷ್ಮೇಗೌಡ ಮೇಲೆ ಪ್ರಕರಣ ದಾಖಲಾಗಿದೆ.ಮೈಸೂರಿನ ಮೇಟಗಳ್ಳಿ ಬಡಾವಣೆಯ ರೈಲ್ವೆ ಹಳಿ ಪಕ್ಕದಲ್ಲಿ ರಸ್ತೆ ಅಭಿವೃದ್ದಿ ಕಾಮಗಾರಿಯನ್ನ ಮೈಸೂರು ನಗರಾಭಿವೃದ್ದಿ ವತಿಯಿಂದ ಎಸ್.ಎಲ್.ಜಿ.ಕನ್ಸ್ಟ್ರಕ್ಷನ್ಸ್ ಗೆ ಗುತ್ತಿಗೆ ನೀಡಲಾಗಿತ್ತು.ಕಾಮಗಾರಿ ವೇಳೆ ಗುತ್ತಿಗೆದಾರನ ನಿರ್ಲಕ್ಷ್ಯತನಕ್ಕೆ ಶ್ರೀಗಂಧದ ಮರ ಹನನವಾಗಿತ್ತು.ಈ ಬಗ್ಗೆ ಆರ್.ಟಿ.ಐ.ಕಾರ್ಯಕರ್ತ ಬಿ.ಎನ್.ನಾಗೇಂದ್ರ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು.ಜೊತೆಗೆ ಪರಿಸರವಾದಿ ಬಾನುಮೋಹನ್ ರವರು ಗುತ್ತಿಗೆದಾರನ ವಿರುದ್ದ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದರು. ಈ ಸಂಭಂಧ Tv10 ಕನ್ನಡ ವಾಹಿನಿ ಸುದ್ದಿ ಮಾಡಿ ಅರಣ್ಯ ಇಲಾಖೆ ಅಧಿಕಾರಿಗಳ ಗಮನ ಸೆಳೆದಿತ್ತು.ಆರ್.ಎಫ್.ಓ.ಸುರೇಂದ್ರ,ಡಿ.ಆರ್.ಎಫ್.ಚಂದ್ರಶೇಖರ್,ಫಾರೆಸ್ಟ್ ಗಾರ್ಡ್ ಜಗದೀಶ್ ರವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.ಮುಡಾ 5A ವಲಯದ AEE ರೂಪಶ್ರೀ ಹಾಗೂ AE ರವೀಂದ್ರ ರವರ ಬಳಿ ಮಾಹಿತಿ ಪಡೆದ ಅರಣ್ಯಾಧಿಕಾರಿಗಳು ಇದೀಗ ಗುತ್ತಿಗೆದಾರನ ಮೇಲೆ ಪ್ರಕರಣ ದಾಖಲಿಸಿದ್ದಾರೆ.ಇದು Tv10 ಕನ್ನಡ ಇಂಪ್ಯಾಕ್ಟ್ ಆಗಿದೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *