ಶ್ರೀಗಂಧದ ಮರಕ್ಕೆ ಕೊಡಲಿಪೆಟ್ಟು ಪ್ರಕರಣ…ಗುತ್ತಿಗೆದಾರನ ಮೇಲೆ FIR ದಾಖಲು…Tv10 ವರದಿ ಫಲಶೃತಿ…

ಶ್ರೀಗಂಧದ ಮರಕ್ಕೆ ಕೊಡಲಿಪೆಟ್ಟು ಪ್ರಕರಣ…ಗುತ್ತಿಗೆದಾರನ ಮೇಲೆ FIR ದಾಖಲು…Tv10 ವರದಿ ಫಲಶೃತಿ…

ಶ್ರೀಗಂಧದ ಮರಕ್ಕೆ ಕೊಡಲಿಪೆಟ್ಟು ಪ್ರಕರಣ…ಗುತ್ತಿಗೆದಾರನ ಮೇಲೆ FIR ದಾಖಲು…Tv10 ವರದಿ ಫಲಶೃತಿ…

ಮೈಸೂರು,ಸೆ23,Tv10 ಕನ್ನಡ
ರಸ್ತೆ ಅಭಿವೃದ್ದಿ ಕಾಮಗಾರಿ ವೇಳೆ ಶ್ರೀಗಂಧದ ಮರ ಹನನ ಮಾಡಿದ ಗುತ್ತಿಗೆದಾರನ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು FIR ದಾಖಲು ಮಾಡಿದ್ದಾರೆ.ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಎಸ್.ಎಲ್.ಜಿ.ಕನ್ಸ್ಟ್ರಕ್ಷನ್ಸ್ ನ ಮಾಲೀಕರಾದ ಲಕ್ಷ್ಮೇಗೌಡ ಮೇಲೆ ಪ್ರಕರಣ ದಾಖಲಾಗಿದೆ.ಮೈಸೂರಿನ ಮೇಟಗಳ್ಳಿ ಬಡಾವಣೆಯ ರೈಲ್ವೆ ಹಳಿ ಪಕ್ಕದಲ್ಲಿ ರಸ್ತೆ ಅಭಿವೃದ್ದಿ ಕಾಮಗಾರಿಯನ್ನ ಮೈಸೂರು ನಗರಾಭಿವೃದ್ದಿ ವತಿಯಿಂದ ಎಸ್.ಎಲ್.ಜಿ.ಕನ್ಸ್ಟ್ರಕ್ಷನ್ಸ್ ಗೆ ಗುತ್ತಿಗೆ ನೀಡಲಾಗಿತ್ತು.ಕಾಮಗಾರಿ ವೇಳೆ ಗುತ್ತಿಗೆದಾರನ ನಿರ್ಲಕ್ಷ್ಯತನಕ್ಕೆ ಶ್ರೀಗಂಧದ ಮರ ಹನನವಾಗಿತ್ತು.ಈ ಬಗ್ಗೆ ಆರ್.ಟಿ.ಐ.ಕಾರ್ಯಕರ್ತ ಬಿ.ಎನ್.ನಾಗೇಂದ್ರ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು.ಜೊತೆಗೆ ಪರಿಸರವಾದಿ ಬಾನುಮೋಹನ್ ರವರು ಗುತ್ತಿಗೆದಾರನ ವಿರುದ್ದ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದರು. ಈ ಸಂಭಂಧ Tv10 ಕನ್ನಡ ವಾಹಿನಿ ಸುದ್ದಿ ಮಾಡಿ ಅರಣ್ಯ ಇಲಾಖೆ ಅಧಿಕಾರಿಗಳ ಗಮನ ಸೆಳೆದಿತ್ತು.ಆರ್.ಎಫ್.ಓ.ಸುರೇಂದ್ರ,ಡಿ.ಆರ್.ಎಫ್.ಚಂದ್ರಶೇಖರ್,ಫಾರೆಸ್ಟ್ ಗಾರ್ಡ್ ಜಗದೀಶ್ ರವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.ಮುಡಾ 5A ವಲಯದ AEE ರೂಪಶ್ರೀ ಹಾಗೂ AE ರವೀಂದ್ರ ರವರ ಬಳಿ ಮಾಹಿತಿ ಪಡೆದ ಅರಣ್ಯಾಧಿಕಾರಿಗಳು ಇದೀಗ ಗುತ್ತಿಗೆದಾರನ ಮೇಲೆ ಪ್ರಕರಣ ದಾಖಲಿಸಿದ್ದಾರೆ.ಇದು Tv10 ಕನ್ನಡ ಇಂಪ್ಯಾಕ್ಟ್ ಆಗಿದೆ…

Spread the love

Related post

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ…

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಎಚ್.ವಿ. ರಾಘವೇಂದ್ರ ಅವರ…
ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್… ಮೈಸೂರು,ಜೂ30,Tv10 ಕನ್ನಡ ಪ್ರೀತಿಸಿ ಮದುವೆಯಾದ ವಿವಾಹಿತೆಯನ್ನ ಮೂವರು ವ್ಯಕ್ತಿಗಳು ಕಿಡ್ನಾಪ್ ಮಾಡಿ ರಾಮನಗರದ ಮನೆಯೊಂದರಲ್ಲಿ ಅಕ್ರಮವಾಗಿ ಬಂಧನದಲ್ಲಿಟ್ಟ ಘಟನೆ…
ಗಣಪತಿ ಆಶ್ರಮಕ್ಕೆ ತಲುಪಿದ ಲಕ್ಷ್ಮಿನರಸಿಂಹ ಹಾಗೂ ಪಂಚಮುಖಿ ಆಂಜನೇಯ ವಿಗ್ರಹಗಳು…ಗಟ್ಟವಾಡಿ ಗ್ರಾಮಕ್ಕೆ ತೆರಳಲಿರುವ ಮೂರ್ತಿಗಳು…

ಗಣಪತಿ ಆಶ್ರಮಕ್ಕೆ ತಲುಪಿದ ಲಕ್ಷ್ಮಿನರಸಿಂಹ ಹಾಗೂ ಪಂಚಮುಖಿ ಆಂಜನೇಯ ವಿಗ್ರಹಗಳು…ಗಟ್ಟವಾಡಿ ಗ್ರಾಮಕ್ಕೆ…

ಗಣಪತಿ ಆಶ್ರಮಕ್ಕೆ ತಲುಪಿದ ಲಕ್ಷ್ಮಿನರಸಿಂಹ ಹಾಗೂ ಪಂಚಮುಖಿ ಆಂಜನೇಯ ವಿಗ್ರಹಗಳು…ಗಟ್ಟವಾಡಿ ಗ್ರಾಮಕ್ಕೆ ತೆರಳಲಿರುವ ಮೂರ್ತಿಗಳು ಮೈಸೂರು,ಜೂ29,Tv10 ಕನ್ನಡ ನಂಜನಗೂಡು ತಾಲೂಕು ಗಟ್ಟವಾಡಿ ಗ್ರಾಮದ ಶ್ರೀ ಸುಭ್ರಹ್ಮಣ್ಯ ಕ್ಷೇತ್ರದಲ್ಲಿ ಪ್ರತಿಷ್ಠಾಪನೆಯಾಗಲಿರುವ…

Leave a Reply

Your email address will not be published. Required fields are marked *