ಶ್ರೀಗಂಧದ ಮರಕ್ಕೆ ಕೊಡಲಿಪೆಟ್ಟು ಪ್ರಕರಣ…ಗುತ್ತಿಗೆದಾರನ ಮೇಲೆ FIR ದಾಖಲು…Tv10 ವರದಿ ಫಲಶೃತಿ…

ಶ್ರೀಗಂಧದ ಮರಕ್ಕೆ ಕೊಡಲಿಪೆಟ್ಟು ಪ್ರಕರಣ…ಗುತ್ತಿಗೆದಾರನ ಮೇಲೆ FIR ದಾಖಲು…Tv10 ವರದಿ ಫಲಶೃತಿ…

ಶ್ರೀಗಂಧದ ಮರಕ್ಕೆ ಕೊಡಲಿಪೆಟ್ಟು ಪ್ರಕರಣ…ಗುತ್ತಿಗೆದಾರನ ಮೇಲೆ FIR ದಾಖಲು…Tv10 ವರದಿ ಫಲಶೃತಿ…

ಮೈಸೂರು,ಸೆ23,Tv10 ಕನ್ನಡ
ರಸ್ತೆ ಅಭಿವೃದ್ದಿ ಕಾಮಗಾರಿ ವೇಳೆ ಶ್ರೀಗಂಧದ ಮರ ಹನನ ಮಾಡಿದ ಗುತ್ತಿಗೆದಾರನ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು FIR ದಾಖಲು ಮಾಡಿದ್ದಾರೆ.ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಎಸ್.ಎಲ್.ಜಿ.ಕನ್ಸ್ಟ್ರಕ್ಷನ್ಸ್ ನ ಮಾಲೀಕರಾದ ಲಕ್ಷ್ಮೇಗೌಡ ಮೇಲೆ ಪ್ರಕರಣ ದಾಖಲಾಗಿದೆ.ಮೈಸೂರಿನ ಮೇಟಗಳ್ಳಿ ಬಡಾವಣೆಯ ರೈಲ್ವೆ ಹಳಿ ಪಕ್ಕದಲ್ಲಿ ರಸ್ತೆ ಅಭಿವೃದ್ದಿ ಕಾಮಗಾರಿಯನ್ನ ಮೈಸೂರು ನಗರಾಭಿವೃದ್ದಿ ವತಿಯಿಂದ ಎಸ್.ಎಲ್.ಜಿ.ಕನ್ಸ್ಟ್ರಕ್ಷನ್ಸ್ ಗೆ ಗುತ್ತಿಗೆ ನೀಡಲಾಗಿತ್ತು.ಕಾಮಗಾರಿ ವೇಳೆ ಗುತ್ತಿಗೆದಾರನ ನಿರ್ಲಕ್ಷ್ಯತನಕ್ಕೆ ಶ್ರೀಗಂಧದ ಮರ ಹನನವಾಗಿತ್ತು.ಈ ಬಗ್ಗೆ ಆರ್.ಟಿ.ಐ.ಕಾರ್ಯಕರ್ತ ಬಿ.ಎನ್.ನಾಗೇಂದ್ರ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು.ಜೊತೆಗೆ ಪರಿಸರವಾದಿ ಬಾನುಮೋಹನ್ ರವರು ಗುತ್ತಿಗೆದಾರನ ವಿರುದ್ದ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದರು. ಈ ಸಂಭಂಧ Tv10 ಕನ್ನಡ ವಾಹಿನಿ ಸುದ್ದಿ ಮಾಡಿ ಅರಣ್ಯ ಇಲಾಖೆ ಅಧಿಕಾರಿಗಳ ಗಮನ ಸೆಳೆದಿತ್ತು.ಆರ್.ಎಫ್.ಓ.ಸುರೇಂದ್ರ,ಡಿ.ಆರ್.ಎಫ್.ಚಂದ್ರಶೇಖರ್,ಫಾರೆಸ್ಟ್ ಗಾರ್ಡ್ ಜಗದೀಶ್ ರವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.ಮುಡಾ 5A ವಲಯದ AEE ರೂಪಶ್ರೀ ಹಾಗೂ AE ರವೀಂದ್ರ ರವರ ಬಳಿ ಮಾಹಿತಿ ಪಡೆದ ಅರಣ್ಯಾಧಿಕಾರಿಗಳು ಇದೀಗ ಗುತ್ತಿಗೆದಾರನ ಮೇಲೆ ಪ್ರಕರಣ ದಾಖಲಿಸಿದ್ದಾರೆ.ಇದು Tv10 ಕನ್ನಡ ಇಂಪ್ಯಾಕ್ಟ್ ಆಗಿದೆ…

Spread the love

Related post

ಸಿಸಿಬಿ ಪೊಲೀಸರ ಕಾರ್ಯಾಚರಣೆ…ನಾಲ್ವರ ಬಂಧನ…10.40 ಲಕ್ಷ ಮೌಲ್ಯದ ಎಂಡಿಎಂಎ ಒಂದು ಕಾರ್ ವಶ…

ಸಿಸಿಬಿ ಪೊಲೀಸರ ಕಾರ್ಯಾಚರಣೆ…ನಾಲ್ವರ ಬಂಧನ…10.40 ಲಕ್ಷ ಮೌಲ್ಯದ ಎಂಡಿಎಂಎ ಒಂದು ಕಾರ್…

ಸಿಸಿಬಿ ಪೊಲೀಸರ ಕಾರ್ಯಾಚರಣೆ…ನಾಲ್ವರ ಬಂಧನ…10.40 ಲಕ್ಷ ಮೌಲ್ಯದ ಎಂಡಿಎಂಎ ಒಂದು ಕಾರ್ ವಶ… ಮೈಸೂರು,ಫೆ23,Tv10 ಕನ್ನಡ ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆಯಲ್ಲಿ ನಾಲ್ವರು ಆರೋಪಿಗಳನ್ನ ವಶಕ್ಕೆ ಪಡೆಯಲಾಗಿದ್ದು ಬಂಧಿತರಿಂದ…
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ! ಆಲ್ಫಾ ಅಂದರೇನೇ ಡಾಮಿನೇಶನ್. ಈ ವಾರ ತೆರೆಕಂಡ ಆಲ್ಫಾ‌ ಚಿತ್ರದಲ್ಲಿ ಡಾಮಿನೇಟ್ ಮಾಡುತ್ತಿರುವವರೇ ಚಿತ್ರದ ನಾಯಕ ಹೇಮಂತ್ ಕುಮಾರ್. ಹೇಮಂತ್…
ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್… ಮೈಸೂರು,ಫೆ17,Tv10 ಕನ್ನಡ ಮೈಸೂರಿನ ಹೃದಯಭಾಗದಲ್ಲಿರುವ…

Leave a Reply

Your email address will not be published. Required fields are marked *