ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಬಲಿ…ಕೊಲೆ ಪ್ರಕರಣ ದಾಖಲು…ಗಂಡ,ಮಾವ ಅರೆಸ್ಟ್…ತಡವಾಗಿ ಬೆಳಕಿಗೆ ಬಂದ ಪ್ರಕರಣ…

ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಬಲಿ…ಕೊಲೆ ಪ್ರಕರಣ ದಾಖಲು…ಗಂಡ,ಮಾವ ಅರೆಸ್ಟ್…ತಡವಾಗಿ ಬೆಳಕಿಗೆ ಬಂದ ಪ್ರಕರಣ…

ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಬಲಿ…ಕೊಲೆ ಪ್ರಕರಣ ದಾಖಲು…ಗಂಡ,ಮಾವ ಅರೆಸ್ಟ್…ತಡವಾಗಿ ಬೆಳಕಿಗೆ ಬಂದ ಪ್ರಕರಣ…

ನಂಜನಗೂಡು,ಸೆ24,Tv10 ಕನ್ನಡ
ವರದಕ್ಷಿಣೆ ದಾಹಕ್ಕೆ ಗೃಹಿಣಿ ಬಲಿಯಾದ ಘಟನೆ ನಂಜನಗೂಡು ತಾಲೂಕಿನ ಹುಲ್ಲಹಳ್ಳಿಯಲ್ಲಿ ನಡೆದಿದೆ.ಘಟನೆಗೆ ಸಂಭಂಧಿಸಿದಂತೆ ಪತಿ ಸೇರಿದಂತೆ 5 ಮಂದಿ ವಿರುದ್ದ FIR ದಾಖಲಾಗಿದೆ.ಹುಲ್ಲಹಳ್ಳಿ ಠಾಣೆ ಪೊಲೀಸರು ಗಂಡ ಹಾಗೂ ಮಾವನನ್ನ ಅರೆಸ್ಟ್ ಮಾಡಿದ್ದಾರೆ.ಘಟನೆ ನಡೆದು 22 ದಿನಗಳ ನಂತರ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.

ಮಮತಾ(20) ಮೃತ ದುರ್ದೈವಿ.ಪತಿ ಪ್ರೇಮಚಂದ್ರ ನಾಯಕ ಹಾಗೂ ಮಾವ ಶಂಕರನಾಯಕ ಇದೀಗ ಪೊಲೀಸರ ಅತಿಥಿ.2021 ಮಾರ್ಚ್ ನಲ್ಲಿ ಮಮತಾ ಹಾಗೂ ಪ್ರೇಮಚಂದ್ರನಾಯಕ ವಿವಾಹ ಜರುಗಿತ್ತು.ಮದುವೆ ಸಂಧರ್ಭದಲ್ಲಿ 30 ಗ್ರಾಂ ಚಿನ್ನ 80 ಸಾವಿರ ನಗದು ವರದಕ್ಷಿಣೆಯಾಗಿ ನೀಡಿ ಅದ್ದೂರಿಯಿಂದ ಮದುವೆ ಮಾಡಿಕೊಡಲಾಗಿತ್ತು.ನಂತರದ ದಿನಗಳಲ್ಲಿ ವರದಕ್ಷಿಣೆ ವಿಚಾರದಲ್ಲಿ ಕ್ಯಾತೆ ತೆಗೆದ ಅಳೀಮಯ್ಯ ಮಮತಾ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿದ್ದ.ಇದಕ್ಕೆ ಮನೆಯವರ ಕುಮ್ಮಕ್ಕೂ ಇತ್ತು.ಗರ್ಭಿಣಿ ಆಗಿದ್ದ ಸಂಧರ್ಭದಲ್ಲಿ ಗರ್ಭಪಾತ ಮಾಡಿಸಿ ಅಟ್ಟಹಾಸ ಮೆರೆದಿದ್ರು.ಹೀಗಿದ್ದೂ ಕಿರುಕುಳ ನೀಡುತ್ತಿದ್ದ ಕಾರಣ ಮಗಳನ್ನ ಹೆತ್ತವರು ಮನೆಗೆ ಕರೆತಂದಿದ್ರು.ಈ ಮಧ್ಯೆ ತನ್ನ ತಪ್ಪಿನ ಅರಿವಾಗಿದೆ ಎಂದು ಕಾರಣ ನೀಡಿದ ಅಳೀಮಯ್ಯ ಅತ್ತೆ ಮನೆ ಸೇರಿಕೊಂಡ.ಕಳೆದ ತಿಂಗಳು ಗೌರಿಗಣೇಶ ಹಬ್ಬದ ದಿನ ಮಮತ ನೇಣಿನ ಕುಣಿಕೆಯಲ್ಲಿ ಕಾಣಿಸಿಕೊಂಡಳು.ಮಮತ ಸಾವನ್ನಪ್ಪಿದ ಮರುಕ್ಷಣವೇ ಪ್ರೇಮಚಂದ್ರನಾಯಕ್ ಎಸ್ಕೇಪ್ ಆದ.ಮಗಳನ್ನ ಪತಿ ಪ್ರೇಮಚಂದ್ರನಾಯಕ ಕೊಲೆ ಮಾಡಿದ್ದಾನೆ.ಕೃತ್ಯಕ್ಕೆ ಮನೆಯವರು ಕುಮ್ಮಕ್ಕು ನೀಡಿದ್ದಾರೆಂದು ಮಮತಾ ತಾಯಿ ಭಾಗ್ಯ ತಡವಾಗಿ ಪ್ರಕರಣ ದಾಖಲಿಸಿದ್ದಾರೆ.ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರೇಮನಾಯಕ,ಯಶೋಧ,ಚಿನ್ನ,ಶಂಕರನಾಯಕ,ಅನುಜ ಮೇಲೆ ಕೊಲೆ ಪ್ರಕರಣ ದಾಖಲಾಗಿದೆ…

Spread the love

Related post

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ…55 ಲಕ್ಷ ಹಿಂದಿರುಗಿಸದ ಆರೋಪ…

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ…

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ…55 ಲಕ್ಷ ಹಿಂದಿರುಗಿಸದ ಆರೋಪ… ಮೈಸೂರು,ಮೇ20,Tv10 ಕನ್ನಡ ಸಾಲದ ಹಣ ವಾಪಸ್ ಕೇಳಲು ಹೋದ…
ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ…

ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ…

ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ… ಮಂಡ್ಯ,ಮೇ20,Tv10 ಕನ್ನಡ ಮಂಡ್ಯ ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೊಲೆ ನಡೆದಿದೆ.ಮಾರಕಾಸ್ತ್ರಗಳಿಂದ ಯುವಕನನ್ನ ದುಷ್ಕರ್ಮಿಗಳು ಕೊಚ್ಚಿ ಹಾಕಿದ್ದಾರೆ.ಮಂಡ್ಯ ಜಿಲ್ಲೆ ಮದ್ದೂರು…
ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ…

ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ…

ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ… ಶ್ರೀರಂಗಪಟ್ಟಣ,ಮೇ19,Tv10 ಕನ್ನಡ ಅಕ್ರಮ ಗಣಿಗಾರಿಕೆ ವಿರುದ್ಧ ಮಂಡ್ಯ ಜಿಲ್ಲಾಡಳಿತದ ಸಮರ ಸಾರಿದೆ.ನಿಷೇಧದ ನಡುವೆಯೂ ಎಗ್ಗಿಲ್ಲದೆ ನಡೆಯುತ್ತಿದ್ದ ಅಕ್ರಮ…

Leave a Reply

Your email address will not be published. Required fields are marked *