ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಬಲಿ…ಕೊಲೆ ಪ್ರಕರಣ ದಾಖಲು…ಗಂಡ,ಮಾವ ಅರೆಸ್ಟ್…ತಡವಾಗಿ ಬೆಳಕಿಗೆ ಬಂದ ಪ್ರಕರಣ…

ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಬಲಿ…ಕೊಲೆ ಪ್ರಕರಣ ದಾಖಲು…ಗಂಡ,ಮಾವ ಅರೆಸ್ಟ್…ತಡವಾಗಿ ಬೆಳಕಿಗೆ ಬಂದ ಪ್ರಕರಣ…

ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಬಲಿ…ಕೊಲೆ ಪ್ರಕರಣ ದಾಖಲು…ಗಂಡ,ಮಾವ ಅರೆಸ್ಟ್…ತಡವಾಗಿ ಬೆಳಕಿಗೆ ಬಂದ ಪ್ರಕರಣ…

ನಂಜನಗೂಡು,ಸೆ24,Tv10 ಕನ್ನಡ
ವರದಕ್ಷಿಣೆ ದಾಹಕ್ಕೆ ಗೃಹಿಣಿ ಬಲಿಯಾದ ಘಟನೆ ನಂಜನಗೂಡು ತಾಲೂಕಿನ ಹುಲ್ಲಹಳ್ಳಿಯಲ್ಲಿ ನಡೆದಿದೆ.ಘಟನೆಗೆ ಸಂಭಂಧಿಸಿದಂತೆ ಪತಿ ಸೇರಿದಂತೆ 5 ಮಂದಿ ವಿರುದ್ದ FIR ದಾಖಲಾಗಿದೆ.ಹುಲ್ಲಹಳ್ಳಿ ಠಾಣೆ ಪೊಲೀಸರು ಗಂಡ ಹಾಗೂ ಮಾವನನ್ನ ಅರೆಸ್ಟ್ ಮಾಡಿದ್ದಾರೆ.ಘಟನೆ ನಡೆದು 22 ದಿನಗಳ ನಂತರ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.

ಮಮತಾ(20) ಮೃತ ದುರ್ದೈವಿ.ಪತಿ ಪ್ರೇಮಚಂದ್ರ ನಾಯಕ ಹಾಗೂ ಮಾವ ಶಂಕರನಾಯಕ ಇದೀಗ ಪೊಲೀಸರ ಅತಿಥಿ.2021 ಮಾರ್ಚ್ ನಲ್ಲಿ ಮಮತಾ ಹಾಗೂ ಪ್ರೇಮಚಂದ್ರನಾಯಕ ವಿವಾಹ ಜರುಗಿತ್ತು.ಮದುವೆ ಸಂಧರ್ಭದಲ್ಲಿ 30 ಗ್ರಾಂ ಚಿನ್ನ 80 ಸಾವಿರ ನಗದು ವರದಕ್ಷಿಣೆಯಾಗಿ ನೀಡಿ ಅದ್ದೂರಿಯಿಂದ ಮದುವೆ ಮಾಡಿಕೊಡಲಾಗಿತ್ತು.ನಂತರದ ದಿನಗಳಲ್ಲಿ ವರದಕ್ಷಿಣೆ ವಿಚಾರದಲ್ಲಿ ಕ್ಯಾತೆ ತೆಗೆದ ಅಳೀಮಯ್ಯ ಮಮತಾ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿದ್ದ.ಇದಕ್ಕೆ ಮನೆಯವರ ಕುಮ್ಮಕ್ಕೂ ಇತ್ತು.ಗರ್ಭಿಣಿ ಆಗಿದ್ದ ಸಂಧರ್ಭದಲ್ಲಿ ಗರ್ಭಪಾತ ಮಾಡಿಸಿ ಅಟ್ಟಹಾಸ ಮೆರೆದಿದ್ರು.ಹೀಗಿದ್ದೂ ಕಿರುಕುಳ ನೀಡುತ್ತಿದ್ದ ಕಾರಣ ಮಗಳನ್ನ ಹೆತ್ತವರು ಮನೆಗೆ ಕರೆತಂದಿದ್ರು.ಈ ಮಧ್ಯೆ ತನ್ನ ತಪ್ಪಿನ ಅರಿವಾಗಿದೆ ಎಂದು ಕಾರಣ ನೀಡಿದ ಅಳೀಮಯ್ಯ ಅತ್ತೆ ಮನೆ ಸೇರಿಕೊಂಡ.ಕಳೆದ ತಿಂಗಳು ಗೌರಿಗಣೇಶ ಹಬ್ಬದ ದಿನ ಮಮತ ನೇಣಿನ ಕುಣಿಕೆಯಲ್ಲಿ ಕಾಣಿಸಿಕೊಂಡಳು.ಮಮತ ಸಾವನ್ನಪ್ಪಿದ ಮರುಕ್ಷಣವೇ ಪ್ರೇಮಚಂದ್ರನಾಯಕ್ ಎಸ್ಕೇಪ್ ಆದ.ಮಗಳನ್ನ ಪತಿ ಪ್ರೇಮಚಂದ್ರನಾಯಕ ಕೊಲೆ ಮಾಡಿದ್ದಾನೆ.ಕೃತ್ಯಕ್ಕೆ ಮನೆಯವರು ಕುಮ್ಮಕ್ಕು ನೀಡಿದ್ದಾರೆಂದು ಮಮತಾ ತಾಯಿ ಭಾಗ್ಯ ತಡವಾಗಿ ಪ್ರಕರಣ ದಾಖಲಿಸಿದ್ದಾರೆ.ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರೇಮನಾಯಕ,ಯಶೋಧ,ಚಿನ್ನ,ಶಂಕರನಾಯಕ,ಅನುಜ ಮೇಲೆ ಕೊಲೆ ಪ್ರಕರಣ ದಾಖಲಾಗಿದೆ…

Spread the love

Related post

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…
ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ…

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಎಚ್.ವಿ. ರಾಘವೇಂದ್ರ ಅವರ…
ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್… ಮೈಸೂರು,ಜೂ30,Tv10 ಕನ್ನಡ ಪ್ರೀತಿಸಿ ಮದುವೆಯಾದ ವಿವಾಹಿತೆಯನ್ನ ಮೂವರು ವ್ಯಕ್ತಿಗಳು ಕಿಡ್ನಾಪ್ ಮಾಡಿ ರಾಮನಗರದ ಮನೆಯೊಂದರಲ್ಲಿ ಅಕ್ರಮವಾಗಿ ಬಂಧನದಲ್ಲಿಟ್ಟ ಘಟನೆ…

Leave a Reply

Your email address will not be published. Required fields are marked *