ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಬಲಿ…ಕೊಲೆ ಪ್ರಕರಣ ದಾಖಲು…ಗಂಡ,ಮಾವ ಅರೆಸ್ಟ್…ತಡವಾಗಿ ಬೆಳಕಿಗೆ ಬಂದ ಪ್ರಕರಣ…

ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಬಲಿ…ಕೊಲೆ ಪ್ರಕರಣ ದಾಖಲು…ಗಂಡ,ಮಾವ ಅರೆಸ್ಟ್…ತಡವಾಗಿ ಬೆಳಕಿಗೆ ಬಂದ ಪ್ರಕರಣ…

ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಬಲಿ…ಕೊಲೆ ಪ್ರಕರಣ ದಾಖಲು…ಗಂಡ,ಮಾವ ಅರೆಸ್ಟ್…ತಡವಾಗಿ ಬೆಳಕಿಗೆ ಬಂದ ಪ್ರಕರಣ…

ನಂಜನಗೂಡು,ಸೆ24,Tv10 ಕನ್ನಡ
ವರದಕ್ಷಿಣೆ ದಾಹಕ್ಕೆ ಗೃಹಿಣಿ ಬಲಿಯಾದ ಘಟನೆ ನಂಜನಗೂಡು ತಾಲೂಕಿನ ಹುಲ್ಲಹಳ್ಳಿಯಲ್ಲಿ ನಡೆದಿದೆ.ಘಟನೆಗೆ ಸಂಭಂಧಿಸಿದಂತೆ ಪತಿ ಸೇರಿದಂತೆ 5 ಮಂದಿ ವಿರುದ್ದ FIR ದಾಖಲಾಗಿದೆ.ಹುಲ್ಲಹಳ್ಳಿ ಠಾಣೆ ಪೊಲೀಸರು ಗಂಡ ಹಾಗೂ ಮಾವನನ್ನ ಅರೆಸ್ಟ್ ಮಾಡಿದ್ದಾರೆ.ಘಟನೆ ನಡೆದು 22 ದಿನಗಳ ನಂತರ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.

ಮಮತಾ(20) ಮೃತ ದುರ್ದೈವಿ.ಪತಿ ಪ್ರೇಮಚಂದ್ರ ನಾಯಕ ಹಾಗೂ ಮಾವ ಶಂಕರನಾಯಕ ಇದೀಗ ಪೊಲೀಸರ ಅತಿಥಿ.2021 ಮಾರ್ಚ್ ನಲ್ಲಿ ಮಮತಾ ಹಾಗೂ ಪ್ರೇಮಚಂದ್ರನಾಯಕ ವಿವಾಹ ಜರುಗಿತ್ತು.ಮದುವೆ ಸಂಧರ್ಭದಲ್ಲಿ 30 ಗ್ರಾಂ ಚಿನ್ನ 80 ಸಾವಿರ ನಗದು ವರದಕ್ಷಿಣೆಯಾಗಿ ನೀಡಿ ಅದ್ದೂರಿಯಿಂದ ಮದುವೆ ಮಾಡಿಕೊಡಲಾಗಿತ್ತು.ನಂತರದ ದಿನಗಳಲ್ಲಿ ವರದಕ್ಷಿಣೆ ವಿಚಾರದಲ್ಲಿ ಕ್ಯಾತೆ ತೆಗೆದ ಅಳೀಮಯ್ಯ ಮಮತಾ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿದ್ದ.ಇದಕ್ಕೆ ಮನೆಯವರ ಕುಮ್ಮಕ್ಕೂ ಇತ್ತು.ಗರ್ಭಿಣಿ ಆಗಿದ್ದ ಸಂಧರ್ಭದಲ್ಲಿ ಗರ್ಭಪಾತ ಮಾಡಿಸಿ ಅಟ್ಟಹಾಸ ಮೆರೆದಿದ್ರು.ಹೀಗಿದ್ದೂ ಕಿರುಕುಳ ನೀಡುತ್ತಿದ್ದ ಕಾರಣ ಮಗಳನ್ನ ಹೆತ್ತವರು ಮನೆಗೆ ಕರೆತಂದಿದ್ರು.ಈ ಮಧ್ಯೆ ತನ್ನ ತಪ್ಪಿನ ಅರಿವಾಗಿದೆ ಎಂದು ಕಾರಣ ನೀಡಿದ ಅಳೀಮಯ್ಯ ಅತ್ತೆ ಮನೆ ಸೇರಿಕೊಂಡ.ಕಳೆದ ತಿಂಗಳು ಗೌರಿಗಣೇಶ ಹಬ್ಬದ ದಿನ ಮಮತ ನೇಣಿನ ಕುಣಿಕೆಯಲ್ಲಿ ಕಾಣಿಸಿಕೊಂಡಳು.ಮಮತ ಸಾವನ್ನಪ್ಪಿದ ಮರುಕ್ಷಣವೇ ಪ್ರೇಮಚಂದ್ರನಾಯಕ್ ಎಸ್ಕೇಪ್ ಆದ.ಮಗಳನ್ನ ಪತಿ ಪ್ರೇಮಚಂದ್ರನಾಯಕ ಕೊಲೆ ಮಾಡಿದ್ದಾನೆ.ಕೃತ್ಯಕ್ಕೆ ಮನೆಯವರು ಕುಮ್ಮಕ್ಕು ನೀಡಿದ್ದಾರೆಂದು ಮಮತಾ ತಾಯಿ ಭಾಗ್ಯ ತಡವಾಗಿ ಪ್ರಕರಣ ದಾಖಲಿಸಿದ್ದಾರೆ.ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರೇಮನಾಯಕ,ಯಶೋಧ,ಚಿನ್ನ,ಶಂಕರನಾಯಕ,ಅನುಜ ಮೇಲೆ ಕೊಲೆ ಪ್ರಕರಣ ದಾಖಲಾಗಿದೆ…

Spread the love

Related post

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ… ನಂಜನಗೂಡು,ಫೆ16,Tv10 ಕನ್ನಡ ಜಾತ್ರೆ ವೇಳೆ ನಡೆಯುತ್ತಿದ್ದ ಜಗಳ ಬಿಡಿಸಿದ ತಪ್ಪಿಗೆ ಹೋಂಗಾರ್ಡ್ ಮೇಲೆ…
ಡ್ರಗ್ಸ್ ಮುಕ್ತ ಮೈಸೂರು…ವಿಮುಕ್ತಿ ಯೋಜನೆಗೆ ಚಾಲನೆ…ವಾಟ್ಸಾಪ್ ನಂ.ಬಿಡುಗಡೆ… ಮೇಟಗಳ್ಳಿ ಠಾಣೆಯಿಂದ ಜಾಗೃತಿ…ಶಾಲಾ ಕಾಲೇಜುಗಳಲ್ಲಿ ಅರಿವು…

ಡ್ರಗ್ಸ್ ಮುಕ್ತ ಮೈಸೂರು…ವಿಮುಕ್ತಿ ಯೋಜನೆಗೆ ಚಾಲನೆ…ವಾಟ್ಸಾಪ್ ನಂ.ಬಿಡುಗಡೆ… ಮೇಟಗಳ್ಳಿ ಠಾಣೆಯಿಂದ ಜಾಗೃತಿ…ಶಾಲಾ…

ಡ್ರಗ್ಸ್ ಮುಕ್ತ ಮೈಸೂರು…ವಿಮುಕ್ತಿ ಯೋಜನೆಗೆ ಚಾಲನೆ…ವಾಟ್ಸಾಪ್ ನಂ.ಬಿಡುಗಡೆ… ಮೇಟಗಳ್ಳಿ ಠಾಣೆಯಿಂದ ಜಾಗೃತಿ…ಶಾಲಾ ಕಾಲೇಜುಗಳಲ್ಲಿ ಅರಿವು… ಮೈಸೂರು,ಫೆ10,Tv10 ಕನ್ನಡ ಡ್ರಗ್ಸ್ ಮಾಫಿಯಾ ವಿರುದ್ದ ಮೈಸೂರು ಖಾಕಿ ಪಡೆ ಸಮರ ಸಾರಿದೆ.ಒಂದೆಡೆ…
ಗ್ರಾಮದೇವತೆ ಜಾತ್ರೆ ವಿಡಿಯೋ ಮಾಡಿದ್ರೆ ಹುಷಾರ್…30 ಸಾವಿರ ದಂಡ ಎಚ್ಚರಿಕೆ…ಡಂಗುರ ಸಾರಿ ಪ್ರಚಾರ…

ಗ್ರಾಮದೇವತೆ ಜಾತ್ರೆ ವಿಡಿಯೋ ಮಾಡಿದ್ರೆ ಹುಷಾರ್…30 ಸಾವಿರ ದಂಡ ಎಚ್ಚರಿಕೆ…ಡಂಗುರ ಸಾರಿ…

ಗ್ರಾಮದೇವತೆ ಜಾತ್ರೆ ವಿಡಿಯೋ ಮಾಡಿದ್ರೆ ಹುಷಾರ್…30 ಸಾವಿರ ದಂಡ ಎಚ್ಚರಿಕೆ…ಡಂಗುರ ಸಾರಿ ಪ್ರಚಾರ… ನಂಜನಗೂಡು,ಫೆ9,Tv10 ಕನ್ನಡ ಗ್ರಾಮದೇವತೆ ಜಾತ್ರೇಲಿ ಕುಡಿದು ಗಲಾಟೆ ಮಾಡಿದ್ರೆ,ಹೆಣ್ಣು ಮಕ್ಕಳ ವಿಡಿಯೋ ಮಾಡಿದ್ರೆ 30…

Leave a Reply

Your email address will not be published. Required fields are marked *