ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಬಲಿ…ಕೊಲೆ ಪ್ರಕರಣ ದಾಖಲು…ಗಂಡ,ಮಾವ ಅರೆಸ್ಟ್…ತಡವಾಗಿ ಬೆಳಕಿಗೆ ಬಂದ ಪ್ರಕರಣ…

ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಬಲಿ…ಕೊಲೆ ಪ್ರಕರಣ ದಾಖಲು…ಗಂಡ,ಮಾವ ಅರೆಸ್ಟ್…ತಡವಾಗಿ ಬೆಳಕಿಗೆ ಬಂದ ಪ್ರಕರಣ…

ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಬಲಿ…ಕೊಲೆ ಪ್ರಕರಣ ದಾಖಲು…ಗಂಡ,ಮಾವ ಅರೆಸ್ಟ್…ತಡವಾಗಿ ಬೆಳಕಿಗೆ ಬಂದ ಪ್ರಕರಣ…

ನಂಜನಗೂಡು,ಸೆ24,Tv10 ಕನ್ನಡ
ವರದಕ್ಷಿಣೆ ದಾಹಕ್ಕೆ ಗೃಹಿಣಿ ಬಲಿಯಾದ ಘಟನೆ ನಂಜನಗೂಡು ತಾಲೂಕಿನ ಹುಲ್ಲಹಳ್ಳಿಯಲ್ಲಿ ನಡೆದಿದೆ.ಘಟನೆಗೆ ಸಂಭಂಧಿಸಿದಂತೆ ಪತಿ ಸೇರಿದಂತೆ 5 ಮಂದಿ ವಿರುದ್ದ FIR ದಾಖಲಾಗಿದೆ.ಹುಲ್ಲಹಳ್ಳಿ ಠಾಣೆ ಪೊಲೀಸರು ಗಂಡ ಹಾಗೂ ಮಾವನನ್ನ ಅರೆಸ್ಟ್ ಮಾಡಿದ್ದಾರೆ.ಘಟನೆ ನಡೆದು 22 ದಿನಗಳ ನಂತರ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.

ಮಮತಾ(20) ಮೃತ ದುರ್ದೈವಿ.ಪತಿ ಪ್ರೇಮಚಂದ್ರ ನಾಯಕ ಹಾಗೂ ಮಾವ ಶಂಕರನಾಯಕ ಇದೀಗ ಪೊಲೀಸರ ಅತಿಥಿ.2021 ಮಾರ್ಚ್ ನಲ್ಲಿ ಮಮತಾ ಹಾಗೂ ಪ್ರೇಮಚಂದ್ರನಾಯಕ ವಿವಾಹ ಜರುಗಿತ್ತು.ಮದುವೆ ಸಂಧರ್ಭದಲ್ಲಿ 30 ಗ್ರಾಂ ಚಿನ್ನ 80 ಸಾವಿರ ನಗದು ವರದಕ್ಷಿಣೆಯಾಗಿ ನೀಡಿ ಅದ್ದೂರಿಯಿಂದ ಮದುವೆ ಮಾಡಿಕೊಡಲಾಗಿತ್ತು.ನಂತರದ ದಿನಗಳಲ್ಲಿ ವರದಕ್ಷಿಣೆ ವಿಚಾರದಲ್ಲಿ ಕ್ಯಾತೆ ತೆಗೆದ ಅಳೀಮಯ್ಯ ಮಮತಾ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿದ್ದ.ಇದಕ್ಕೆ ಮನೆಯವರ ಕುಮ್ಮಕ್ಕೂ ಇತ್ತು.ಗರ್ಭಿಣಿ ಆಗಿದ್ದ ಸಂಧರ್ಭದಲ್ಲಿ ಗರ್ಭಪಾತ ಮಾಡಿಸಿ ಅಟ್ಟಹಾಸ ಮೆರೆದಿದ್ರು.ಹೀಗಿದ್ದೂ ಕಿರುಕುಳ ನೀಡುತ್ತಿದ್ದ ಕಾರಣ ಮಗಳನ್ನ ಹೆತ್ತವರು ಮನೆಗೆ ಕರೆತಂದಿದ್ರು.ಈ ಮಧ್ಯೆ ತನ್ನ ತಪ್ಪಿನ ಅರಿವಾಗಿದೆ ಎಂದು ಕಾರಣ ನೀಡಿದ ಅಳೀಮಯ್ಯ ಅತ್ತೆ ಮನೆ ಸೇರಿಕೊಂಡ.ಕಳೆದ ತಿಂಗಳು ಗೌರಿಗಣೇಶ ಹಬ್ಬದ ದಿನ ಮಮತ ನೇಣಿನ ಕುಣಿಕೆಯಲ್ಲಿ ಕಾಣಿಸಿಕೊಂಡಳು.ಮಮತ ಸಾವನ್ನಪ್ಪಿದ ಮರುಕ್ಷಣವೇ ಪ್ರೇಮಚಂದ್ರನಾಯಕ್ ಎಸ್ಕೇಪ್ ಆದ.ಮಗಳನ್ನ ಪತಿ ಪ್ರೇಮಚಂದ್ರನಾಯಕ ಕೊಲೆ ಮಾಡಿದ್ದಾನೆ.ಕೃತ್ಯಕ್ಕೆ ಮನೆಯವರು ಕುಮ್ಮಕ್ಕು ನೀಡಿದ್ದಾರೆಂದು ಮಮತಾ ತಾಯಿ ಭಾಗ್ಯ ತಡವಾಗಿ ಪ್ರಕರಣ ದಾಖಲಿಸಿದ್ದಾರೆ.ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರೇಮನಾಯಕ,ಯಶೋಧ,ಚಿನ್ನ,ಶಂಕರನಾಯಕ,ಅನುಜ ಮೇಲೆ ಕೊಲೆ ಪ್ರಕರಣ ದಾಖಲಾಗಿದೆ…

Spread the love

Related post

MDA ಹೊಸಬಡಾವಣೆ ನಿರ್ಮಾಣ ಪ್ರಕ್ರಿಯೆ…ಡ್ರೋನ್ ಮೂಲಕ ಜಮೀನು ಸರ್ವೆ ಕಾರ್ಯ…ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಚಾಲನೆ…

MDA ಹೊಸಬಡಾವಣೆ ನಿರ್ಮಾಣ ಪ್ರಕ್ರಿಯೆ…ಡ್ರೋನ್ ಮೂಲಕ ಜಮೀನು ಸರ್ವೆ ಕಾರ್ಯ…ಜಿಲ್ಲಾಧಿಕಾರಿ ಲಕ್ಷ್ಮಿಕಾಂತ…

MDA ಹೊಸಬಡಾವಣೆ ನಿರ್ಮಾಣ ಪ್ರಕ್ರಿಯೆ…ಡ್ರೋನ್ ಮೂಲಕ ಜಮೀನು ಸರ್ವೆ ಕಾರ್ಯ…ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಚಾಲನೆ… ಮೈಸೂರು,ಏ4,Tv10 ಕನ್ನಡ ಮೈಸೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನೂತನ ಬಡಾವಣೆ ನಿರ್ಮಾಣ ಕಾರ್ಯ…
ಅರಮನೆ ಮಂಡಳಿ ಉಪನಿರ್ದೇಶಕ ಟಿ.ಎಸ್.ಸುಭ್ರಹ್ಮಣ್ಯ ವಿರುದ್ದ ಅವ್ಯವಹಾರ ಆರೋಪ…ಮಾನಹಾರಿಕ ಸುದ್ದಿ ಪ್ರಸಾರ ಮಾಡದಂತೆ ನ್ಯಾಯಾಲಯ ಆದೇಶ…

ಅರಮನೆ ಮಂಡಳಿ ಉಪನಿರ್ದೇಶಕ ಟಿ.ಎಸ್.ಸುಭ್ರಹ್ಮಣ್ಯ ವಿರುದ್ದ ಅವ್ಯವಹಾರ ಆರೋಪ…ಮಾನಹಾರಿಕ ಸುದ್ದಿ ಪ್ರಸಾರ…

ಅರಮನೆ ಮಂಡಳಿ ಉಪನಿರ್ದೇಶಕ ಟಿ.ಎಸ್.ಸುಭ್ರಹ್ಮಣ್ಯ ವಿರುದ್ದ ಅವ್ಯವಹಾರ ಆರೋಪ…ಮಾನಹಾರಿಕ ಸುದ್ದಿ ಪ್ರಸಾರ ಮಾಡದಂತೆ ನ್ಯಾಯಾಲಯ ಆದೇಶ… ಮೈಸೂರು,ಏ4,Tv10 ಕನ್ನಡ ಅರಮನೆ ಮಂಡಳಿ ಉಪನಿರ್ದೇಶಕ ಟಿ.ಎಸ್.ಸುಭ್ರಹ್ಮಣ್ಯ ಗೆ ಬಿಗ್ ರಿಲೀಫ್…
ರೈತನಿಗೆ FIR ಹಾಕಿಸುವ ಧಂಕಿ…ನಂಜನಗೂಡು ತಹಸೀಲ್ದಾರ್ ಸ್ಮಿತಾರಾಮು ವಿರುದ್ದ ದೂರು…ಕ್ರಮ ಕೈಗೊಳ್ಳುವಂತೆ ಪ್ರಾದೇಶಿಕ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳಿಂದ ಉಪವಿಭಾಗಾಧಿಕಾರಿಗಳಿಗೆ ಪತ್ರ…

ರೈತನಿಗೆ FIR ಹಾಕಿಸುವ ಧಂಕಿ…ನಂಜನಗೂಡು ತಹಸೀಲ್ದಾರ್ ಸ್ಮಿತಾರಾಮು ವಿರುದ್ದ ದೂರು…ಕ್ರಮ ಕೈಗೊಳ್ಳುವಂತೆ…

ರೈತನಿಗೆ FIR ಹಾಕಿಸುವ ಧಂಕಿ…ನಂಜನಗೂಡು ತಹಸೀಲ್ದಾರ್ ಸ್ಮಿತಾರಾಮು ವಿರುದ್ದ ದೂರು…ಕ್ರಮ ಕೈಗೊಳ್ಳುವಂತೆ ಪ್ರಾದೇಶಿಕ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳಿಂದ ಉಪವಿಭಾಗಾಧಿಕಾರಿಗಳಿಗೆ ಪತ್ರ… ನಂಜನಗೂಡು,ಏ4,Tv10 ಕನ್ನಡ ಅರ್ಜಿ ಬಗ್ಗೆ ಮಾಹಿತಿ ಕೇಳಲು…

Leave a Reply

Your email address will not be published. Required fields are marked *