ದಸರಾ ಮಹೋತ್ಸವಕ್ಕೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ರವರಿಗೆ ಸಚಿವ ಎಸ್.ಟಿ.ಎಸ್.ರಿಂದ ಅಧಿಕೃತ ಆಹ್ವಾನ…

ದಸರಾ ಮಹೋತ್ಸವಕ್ಕೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ರವರಿಗೆ ಸಚಿವ ಎಸ್.ಟಿ.ಎಸ್.ರಿಂದ ಅಧಿಕೃತ ಆಹ್ವಾನ…

  • Mysore
  • September 24, 2022
  • No Comment
  • 232

ದಸರಾ ಮಹೋತ್ಸವಕ್ಕೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ರವರಿಗೆ ಸಚಿವ ಎಸ್.ಟಿ.ಎಸ್.ರಿಂದ ಅಧಿಕೃತ ಆಹ್ವಾನ…

ಮೈಸೂರು,ಸೆ24,Tv10 ಕನ್ನಡ
ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವಕ್ಕೆ ರಾಜವಂಶಸ್ಥೆ ಪ್ರಮೋದದೇವಿ ಒಡೆಯರ್ ರವರಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಅಧಿಕೃತವಾಗಿ ಆಹ್ವಾನಿಸಿದರು. ಮೈಸೂರು ಅರಮನೆಯ ಖಾಸಗಿ ನಿವಾಸದಲ್ಲಿ ಭೇಟಿಯಾಗಿ ಸಾಂಪ್ರದಾಯಿಕವಾಗಿ ಫಲಪುಷ್ಪ ತಾಂಬೂಲ ನೀಡಿ ದಸರಾ ಉತ್ಸವಕ್ಕೆ ಆಹ್ವಾನ ನೀಡಿದರು.ಈ ಸಂಧರ್ಭದಲ್ಲಿ
ಸಂಸದರಾದ ಪ್ರತಾಪ್ ಸಿಂಹ, ವಿಧಾನಪರಿಷತ್ ಸದಸ್ಯರಾದ ಮಂಜೇಗೌಡ, ಮೇಯರ್ ಶಿವಕುಮಾರ್, ಉಪಮೇಯರ್ ಜಿ.ರೂಪಾ, , ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಸೇರಿದಂತೆ ನಾನಾ ನಿಗಮ ಮಂಡಳಿಗಳ ಅಧ್ಯಕ್ಷರು ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಪ್ರಮೋದಾದೇವಿ ಒಡೆಯರ್‌ ಅವರಿಗೆ ಸನ್ಮಾನ ಮಾಡಿ, ಸರ್ಕಾರದಿಂದ ಪ್ರತಿವರ್ಷ ನೀಡಲಾಗುವ ಗೌರವಧನ ನೀಡಿದರು.
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ದಸರಾ ಉತ್ಸವಕ್ಕೆ ವ್ಯವಸ್ಥಿತವಾಗಿ ಸಿದ್ಧತೆಗಳು ನಡೆಯುತ್ತಿದೆ. ದಸರಾ ಉತ್ಸವಕ್ಕೆ ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್‌ ಅವರನ್ನು ಆಹ್ವಾನಿಸಲಾಯಿತು. ದಸರಾಗೆ ಸಂಪೂರ್ಣ ಸಹಕಾರ ನೀಡುವುದಾಗಿ ಅವರು ಹೇಳಿದ್ದಾರೆ ಎಂದರು.
ಯುವ ದಸರಾಗೆ ನಟ ಕಿಚ್ಚ ಸುದೀಪ್ ಅವರು ಆಗಮಿಸುತ್ತಿಲ್ಲ. ಅನಿವಾರ್ಯ ಕಾರಣಗಳಿಂದ ಫಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದ್ದಾರೆ. ಹೀಗಾಗಿ ಪರ್ಯಾಯ ವ್ಯವಸ್ಥೆ ಮಾಡಲಾಗುತ್ತಿದೆ ಎಂದರು.ದಸರಾ ಕಾರ್ಯಕ್ರಮಗಳಲ್ಲಿ ಶಾಸಕ ರಾಮದಾಸ್ ಅವರು ಪಾಲ್ಗೊಳ್ಳುತ್ತಿಲ್ಲ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿ, ರಾಮದಾಸ್ ಅವರು ಮೋದಿ ಯುಗ ಉತ್ಸವ ಮಾಡುತ್ತಿದ್ದಾರೆ. ದಸರಾ ಉದ್ಘಾಟನೆ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ ಎಂದು ಹೇಳಿದರು.
ದಸರಾ ಸಂಬಂಧ ಪ್ರಚಾರದ ಕೊರತೆ ಆಗಿಲ್ಲ. ಏನಾದರೂ ಸಮಸ್ಯೆ ಇದ್ದರೆ ಪರಿಹರಿಸಲಾಗುವುದು ಪ್ರಚಾರ ಸಮಿತಿ ರಚನೆ ಮಾಡಿದ್ದು ಎಲ್ಲಾ ರೀತಿಯಲ್ಲಿ ಕೆಲಸ ಮಾಡಲಾಗುತ್ತಿದೆ ಎಂದರು.ಸೋಮವಾರ ರಾಷ್ಟ್ರಪತಿಗಳು ಚಾಮುಂಡಿಬೆಟ್ಟದಲ್ಲಿ ದಸರಾ ಉದ್ಘಾಟನೆ ಮಾಡಲಿದ್ದಾರೆ. ವೇದಿಕೆಯಲ್ಲಿ 13 ಆಸನಗಳಿರಲಿವೆ. ರಾಷ್ಟ್ರಪತಿಗಳು, ರಾಜ್ಯಪಾಲರು, ಮುಖ್ಯಮಂತ್ರಿಗಳು,
ಆರು ಕೇಂದ್ರ ಸಚಿವರು, ನಾಲ್ವರು ರಾಜ್ಯ ಸಚಿವರು ವೇದಿಕೆಯಲ್ಲಿ ಇರಲಿದ್ದಾರೆ ಎಂದು ತಿಳಿಸಿದರು…

Spread the love

Related post

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…
ಕ್ಯಾಪ್ಟನ್ ಅಭಿಮನ್ಯುವಿಗೆ ರಾಜೋಚಿತ ಬೀಳ್ಕೊಡುಗೆ ನೀಡಿ…ಸಚಿವ ಈಶ್ವರ ಖಂಡ್ರೆ

ಕ್ಯಾಪ್ಟನ್ ಅಭಿಮನ್ಯುವಿಗೆ ರಾಜೋಚಿತ ಬೀಳ್ಕೊಡುಗೆ ನೀಡಿ…ಸಚಿವ ಈಶ್ವರ ಖಂಡ್ರೆ

ಕ್ಯಾಪ್ಟನ್ ಅಭಿಮನ್ಯುವಿಗೆ ರಾಜೋಚಿತ ಬೀಳ್ಕೊಡುಗೆ ನೀಡಿ…ಸಚಿವ ಈಶ್ವರ ಖಂಡ್ರೆ ಬೆಂಗಳೂರು,ಆ19,Tv10 ಕನ್ನಡ ಆರು ಬಾರಿ ಚಿನ್ನದ ಅಂಬಾರಿ ಹೊತ್ತಿರುವ 60 ವರ್ಷದ ಕ್ಯಾಪ್ಟನ್ ಅಭಿಮನ್ಯುವಿಗೆ ಈ ಬಾರಿಯ ಮೈಸೂರು…

Leave a Reply

Your email address will not be published. Required fields are marked *