ದಸರಾ ಉದ್ಘಾಟನೆಗೆ ಕ್ಷಣಗಣನೆ…ರಾಷ್ಟ್ರಪತಿಗಳಿಂದ ಚಾಲನೆ…

ದಸರಾ ಉದ್ಘಾಟನೆಗೆ ಕ್ಷಣಗಣನೆ…ರಾಷ್ಟ್ರಪತಿಗಳಿಂದ ಚಾಲನೆ…

  • Mysore
  • September 26, 2022
  • No Comment
  • 207

ದಸರಾ ಉದ್ಘಾಟನೆಗೆ ಕ್ಷಣಗಣನೆ…ರಾಷ್ಟ್ರಪತಿಗಳಿಂದ ಚಾಲನೆ…

ಮೈಸೂರು,ಸೆ26,Tv10 ಕನ್ನಡ
ದಸರಾ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ.
ಇಂದು ದೇಶದ ಮೊದಲ ಪ್ರಜೆಯಿಂದ ದಸರಾ ಉದ್ಘಾಟನೆಯಾಗಲಿದೆ.ಸಾಂಸ್ಕೃತಿಕ ರಾಜಧಾನಿಗೆ ರಾಷಗಟ್ರಪತಿಗಳು ಆಗಮಿಸಲಿದ್ದಾರೆ.
ಚಾಮುಂಡಿಬೆಟ್ಟದಲ್ಲಿ ರಾಷ್ಟ್ರಪತಿಗಳಿಗೆ ಅದ್ದೂರಿ ಸ್ವಾಗತಕ್ಕೆ ಜಿಲ್ಲಾಡಳಿತ ಸಜ್ಜಾಗಿದೆ.
ಚಾಮುಂಡೇಶ್ವರಿ ದೇವಸ್ಥಾನದ ಆವರಣದಲ್ಲಿ ಬೃಹತ್ ವೇದಿಕೆ ನಿರ್ಮಿಸಲಾಗಿದೆ.
ಇಂದು ಬೆಳಗ್ಗೆ 9:45 ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ದಸರಾ ಉದ್ಘಾಟಿಸಲಿದ್ದಾರೆ.
ಬೆಳಗ್ಗೆ 9:45 ರಿಂದ 10:05 ರೊಳಗೆ ಸಲ್ಲುವ ವೃಶ್ಚಿಕ ಲಗ್ನದಲ್ಲಿ ದಸರಾಗೆ ಚಾಲನೆ ದೊರೆಯಲಿದೆ.
ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡಿ ರಾಷ್ಟ್ರಪತಿಗಳು ದಸರಾ ಉದ್ಘಾಟನೆ ಮಾಡಲಿದ್ದಾರೆ.
ದಸರಾ ಉದ್ಘಾಟನೆಗೆ ಸಾಕ್ಷಿಯಾಗಲು ಎರಡೂ ಸಾವಿರ ಜನರಿಗೆ ಆಸನ ವ್ಯವಸ್ಥೆ ಮಾಡಲಾಗಿದೆ.
ಬೆಳಗ್ಗೆ 6.15ಕ್ಕೆ ವಿಶೇಷ ವಿಮಾನದಲ್ಲಿ ದೆಹಲಿಯಿಂದ ಮೈಸೂರಿಗೆ ಆಗಮಿಸುತ್ತಿರುವ ರಾಷ್ಟ್ರಪತಿ
ಬೆಳಗ್ಗೆ 9 ಗಂಟೆಗೆ ಮಂಡಕಳ್ಳಿ ಏರ್​ಪೋರ್ಟ್​​ಗೆ ತಲುಪಲಿದ್ದಾರೆ.
ಮಂಡಕಹಳ್ಳಿ ವಿಮಾನ ನಿಲ್ದಾಣದಿಂದ ನೇರವಾಗಿ ಚಾಮುಂಡಿ ಬೆಟ್ಟಕ್ಕೆ ತೆರಳಿ ನಂತರ ನಾಡದೇವಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.
ರಾಷ್ಟ್ರಪತಿಗಳಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಿಎಂ ಬೊಮ್ಮಯಿ ಸೇರಿದಂತೆ ಹಲವರು ಸಾಥ್ ನೀಡಲಿದ್ದಾರೆ.
ದಸರಾ ಉದ್ಘಾಟನೆ ಬಳಿಕ ಚಾಮುಂಡಿಬೆಟ್ಟದಿಂದ ಹುಬ್ಬಳ್ಳಿಗೆ ತೆರಳಲಿದ್ದಾರೆ…

Spread the love

Related post

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…
ಕ್ಯಾಪ್ಟನ್ ಅಭಿಮನ್ಯುವಿಗೆ ರಾಜೋಚಿತ ಬೀಳ್ಕೊಡುಗೆ ನೀಡಿ…ಸಚಿವ ಈಶ್ವರ ಖಂಡ್ರೆ

ಕ್ಯಾಪ್ಟನ್ ಅಭಿಮನ್ಯುವಿಗೆ ರಾಜೋಚಿತ ಬೀಳ್ಕೊಡುಗೆ ನೀಡಿ…ಸಚಿವ ಈಶ್ವರ ಖಂಡ್ರೆ

ಕ್ಯಾಪ್ಟನ್ ಅಭಿಮನ್ಯುವಿಗೆ ರಾಜೋಚಿತ ಬೀಳ್ಕೊಡುಗೆ ನೀಡಿ…ಸಚಿವ ಈಶ್ವರ ಖಂಡ್ರೆ ಬೆಂಗಳೂರು,ಆ19,Tv10 ಕನ್ನಡ ಆರು ಬಾರಿ ಚಿನ್ನದ ಅಂಬಾರಿ ಹೊತ್ತಿರುವ 60 ವರ್ಷದ ಕ್ಯಾಪ್ಟನ್ ಅಭಿಮನ್ಯುವಿಗೆ ಈ ಬಾರಿಯ ಮೈಸೂರು…

Leave a Reply

Your email address will not be published. Required fields are marked *