ಸಿಸಿಬಿ ಪೊಲೀಸರ ಭರ್ಜರಿ ಬೇಟೆ…10 ಮಂದಿ ಸರಗಳ್ಳರ ಬಂಧನ…50 ಲಕ್ಷ ಮೌಲ್ಯದ ಚಿನ್ನಾಭರಣ ವಶ…

ಸಿಸಿಬಿ ಪೊಲೀಸರ ಭರ್ಜರಿ ಬೇಟೆ…10 ಮಂದಿ ಸರಗಳ್ಳರ ಬಂಧನ…50 ಲಕ್ಷ ಮೌಲ್ಯದ ಚಿನ್ನಾಭರಣ ವಶ…

  • CrimeNews
  • September 30, 2022
  • No Comment
  • 248

ಸಿಸಿಬಿ ಪೊಲೀಸರ ಭರ್ಜರಿ ಬೇಟೆ…10 ಮಂದಿ ಸರಗಳ್ಳರ ಬಂಧನ…50 ಲಕ್ಷ ಮೌಲ್ಯದ ಚಿನ್ನಾಭರಣ ವಶ…

ಮೈಸೂರು,ಸೆ30,Tv10 ಕನ್ನಡ :
ಮೈಸೂರು ಸಿಸಿಬಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ.
ಮೈಸೂರು-ಚಾಮರಾಜನಗರ ಜಿಲ್ಲೆಗಳ ವ್ಯಾಪ್ತಿಯಲ್ಲಿ ನಡೆದಿದ್ದ 25 ಸರಗಳ್ಳತನ ಪ್ರಕರಣಗಳನ್ನ ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.ಪ್ರಕರಣಗಳಿಗೆ ಸಂಭಂಧಿಸಿದಂತೆ
10 ಮಂದಿ ಕುಖ್ಯಾತ ಸರಗಳ್ಳರ ಬಂಧಿಸಿದ್ದಾರೆ.
ಈ ಪೈಕಿ ಇಬ್ಬರು ಕಾನೂನು ಸಂಘರ್ಷಕ್ಕೊಳಗಾದ ಬಾಲಕರು ಸಹ ಇದ್ದಾರೆ.
6 ಮಂದಿ ಆರೋಪಿಗಳು ಪರಸ್ಪರ ರಕ್ತ ಸಂಬಂಧಿಗಳಾಗಿದ್ದಾರೆ.
ರಕ್ತ ಸಂಬಂಧಿಗಳಾಗಿರುವ 6 ಆರೋಪಿಗಳು ಮೂಲತಃ ಚಾಮರಾಜನಗರ ನಿವಾಸಿಗಳಾಗಿದ್ದಾರೆ.
ಹಲವಾರು ವರ್ಷಗಳಿಂದ ಮೈಸೂರಿನ ಹೆಬ್ಬಾಳು ಮತ್ತು ದೇವಯ್ಯನಹುಂಡಿಯಲ್ಲಿ ವಾಸವಾಗಿದ್ದರು.
ಗಾರೆ ಕೆಲಸ, ಸೆಕ್ಯೂರಿಟಿ ಕೆಲಸ ಮಾಡುತ್ತಲೇ ಸರಗಳ್ಳತನದಲ್ಲೂ ಭಾಗಿಯಾಗಿದ್ದರು.
50 ಲಕ್ಷ ಮೌಲ್ಯದ, 1 ಕೆ ಜಿ ತೂಕದಷ್ಟು 25 ಚಿನ್ನದ ಸರಗಳು ಹಾಗೂ ಇತರೇ ಚಿನ್ನಾಭರಣಗಳನ್ನ ವಶಪಡಿಸಿಕೊಳ್ಳಲಾಗಿದೆ.ಕಳವು ಮಾಡಿದ್ದ 2 ದ್ವಿಚಕ್ರ ವಾಹನ ಸೇರಿದಂತೆ ಸರಗಳ್ಳತ‌ನಕ್ಕೆ ಬಳಸಿದ್ದ ಒಟ್ಟು 7 ದ್ವಿಚಕ್ರ ವಾಹನಗಳನ್ನ ವಶ ಪಡಿಸಿಕೊಳ್ಳಲಾಗಿದೆ.
ಬಂಧಿತ ಆರೋಪಿಗಳ ಪೈಕಿ 1ನೇ ಆರೋಪಿ ಈ ಮೊದಲು ಸಹ 27 ಪ್ರಕರಣಗಳಲ್ಲಿ ಭಾಗಿಯಾಗಿದ್ದ.
2 ನೇ ಆರೋಪಿ 4 ಸರಗಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ.
ಇಬ್ಬರು ಆರೋಪಿಗಳು ವೃತ್ತಿನಿರತ ಸರಗಳ್ಳರಾಗಿದ್ದಾರೆ.
ಜೈಲುವಾಸ ಅನುಭವಿಸಿ ಹೊರ ಬಂದನಂತರವೂ ತಮ್ಮ ಹಳೆಯ ಚಾಳಿ ಮುಂದುವರಿಸಿರುವುದು ತನಿಖೆಯಲ್ಲಿ ತಿಳಿದು ಬಂದಿದೆ.
ಈ ಕುರಿತು ಮೈಸೂರು ನಗರ ಪೊಲೀಸ್ ಆಯುಕ್ತ ಡಾ ಚಂದ್ರಗುಪ್ತ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.ಪತ್ತೆಯಾದ ಆಭರಣಗಳನ್ನ ವಾರಸುದಾರರಿಗೆ ಕೊಡುವ ಪ್ರಕ್ರಿಯೆ ನಡೆದಿದೆ…

Spread the love

Related post

ಆರೋಗ್ಯ ಮತ್ತು ಶಿಕ್ಷಣ ಮಕ್ಕಳ ಭವಿಷ್ಯದ ಎರಡು ಚಕ್ರಗಳು- ಸಿ.ಆರ್ ದಿನೇಶ್

ಆರೋಗ್ಯ ಮತ್ತು ಶಿಕ್ಷಣ ಮಕ್ಕಳ ಭವಿಷ್ಯದ ಎರಡು ಚಕ್ರಗಳು- ಸಿ.ಆರ್ ದಿನೇಶ್

ಆರೋಗ್ಯ ಮತ್ತು ಶಿಕ್ಷಣ ಮಕ್ಕಳ ಭವಿಷ್ಯದ ಎರಡು ಚಕ್ರಗಳು- ಸಿ.ಆರ್ ದಿನೇಶ್ “ಆರೋಗ್ಯ ಮತ್ತು ಶಿಕ್ಷಣವ ಮಕ್ಕಳ ಭವಿಷ್ಯದ ಎರಡು ಚಕ್ರಗಳು. ಪೌಷ್ಟಿಕ ಆಹಾರ ಹಾಗೂ ಗುಣಮಟ್ಟದ ಶಿಕ್ಷಣ…
ಮೈಸೂರಿನಲ್ಲಿ ಮೈ ಕೊರೆವ ಚಳಿ…ಹೊದಿಕೆ ವಿತರಿಸಿ ಸಾಮಾಜಿಕ ಕಳಕಳಿ…

ಮೈಸೂರಿನಲ್ಲಿ ಮೈ ಕೊರೆವ ಚಳಿ…ಹೊದಿಕೆ ವಿತರಿಸಿ ಸಾಮಾಜಿಕ ಕಳಕಳಿ…

ಮೈಸೂರಿನಲ್ಲಿ ಮೈ ಕೊರೆವ ಚಳಿ…ಹೊದಿಕೆ ವಿತರಿಸಿ ಸಾಮಾಜಿಕ ಕಳಕಳಿ… ಮೈಸೂರು,ಡಿ2,Tv10 ಕನ್ನಡ ಮೈಸೂರಿನಲ್ಲಿ ಮೈ ಕೊರೆಚ ಚಳಿ ಶುರುವಾಗಿದೆ.ರಸ್ತೆ ಬದಿ ಮಲಗುವ ನಿರಾಶ್ರಿತರು ಹೊದಿಕೆ ಇಲ್ಲದೆ ಪರದಾಡುತ್ತಿದ್ದಾರೆ.ನಿರಾಶ್ರಿತರಿಗೆ ಹೊದಿಕೆ…
ಮೈಸೂರು ಜಿಲ್ಲೆಯಲ್ಲಿ ಲೋಕಾಯುಕ್ತ ಟ್ರ್ಯಾಪ್ಪಿರಿಯಾಪಟ್ಟಣ ಕಂದಾಯ ಇಲಾಖೆ ಸರ್ವೇಯರ್ ರವೀಂದ್ರ ಲೋಕಾಯುಕ್ತ ಬಲೆಗೆ

ಮೈಸೂರು ಜಿಲ್ಲೆಯಲ್ಲಿ ಲೋಕಾಯುಕ್ತ ಟ್ರ್ಯಾಪ್ಪಿರಿಯಾಪಟ್ಟಣ ಕಂದಾಯ ಇಲಾಖೆ ಸರ್ವೇಯರ್ ರವೀಂದ್ರ ಲೋಕಾಯುಕ್ತ…

ಮೈಸೂರು ಮೈಸೂರು ಜಿಲ್ಲೆಯಲ್ಲಿ ಲೋಕಾಯುಕ್ತ ಟ್ರ್ಯಾಪ್ಪಿರಿಯಾಪಟ್ಟಣ ಕಂದಾಯ ಇಲಾಖೆ ಸರ್ವೇಯರ್ ರವೀಂದ್ರ ಲೋಕಾಯುಕ್ತ ಬಲೆಗೆಪೋಡಿ ದುರಸ್ತಿ ಸಾಗುವಳಿ ಹೆಸರಿನಲ್ಲಿ ಲಂಚಜಮೀನು ರಸ್ತೆಗೆ ಹೋಗುತ್ತೇ ಅಂತಾ ಹೆದರಿಸಿ ಲಂಚಕ್ಕೆ‌ ಬೇಡಿಕೆ1…

Leave a Reply

Your email address will not be published. Required fields are marked *