ಸಿಸಿಬಿ ಪೊಲೀಸರ ಭರ್ಜರಿ ಬೇಟೆ…10 ಮಂದಿ ಸರಗಳ್ಳರ ಬಂಧನ…50 ಲಕ್ಷ ಮೌಲ್ಯದ ಚಿನ್ನಾಭರಣ ವಶ…

ಸಿಸಿಬಿ ಪೊಲೀಸರ ಭರ್ಜರಿ ಬೇಟೆ…10 ಮಂದಿ ಸರಗಳ್ಳರ ಬಂಧನ…50 ಲಕ್ಷ ಮೌಲ್ಯದ ಚಿನ್ನಾಭರಣ ವಶ…

  • CrimeNews
  • September 30, 2022
  • No Comment
  • 282

ಸಿಸಿಬಿ ಪೊಲೀಸರ ಭರ್ಜರಿ ಬೇಟೆ…10 ಮಂದಿ ಸರಗಳ್ಳರ ಬಂಧನ…50 ಲಕ್ಷ ಮೌಲ್ಯದ ಚಿನ್ನಾಭರಣ ವಶ…

ಮೈಸೂರು,ಸೆ30,Tv10 ಕನ್ನಡ :
ಮೈಸೂರು ಸಿಸಿಬಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ.
ಮೈಸೂರು-ಚಾಮರಾಜನಗರ ಜಿಲ್ಲೆಗಳ ವ್ಯಾಪ್ತಿಯಲ್ಲಿ ನಡೆದಿದ್ದ 25 ಸರಗಳ್ಳತನ ಪ್ರಕರಣಗಳನ್ನ ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.ಪ್ರಕರಣಗಳಿಗೆ ಸಂಭಂಧಿಸಿದಂತೆ
10 ಮಂದಿ ಕುಖ್ಯಾತ ಸರಗಳ್ಳರ ಬಂಧಿಸಿದ್ದಾರೆ.
ಈ ಪೈಕಿ ಇಬ್ಬರು ಕಾನೂನು ಸಂಘರ್ಷಕ್ಕೊಳಗಾದ ಬಾಲಕರು ಸಹ ಇದ್ದಾರೆ.
6 ಮಂದಿ ಆರೋಪಿಗಳು ಪರಸ್ಪರ ರಕ್ತ ಸಂಬಂಧಿಗಳಾಗಿದ್ದಾರೆ.
ರಕ್ತ ಸಂಬಂಧಿಗಳಾಗಿರುವ 6 ಆರೋಪಿಗಳು ಮೂಲತಃ ಚಾಮರಾಜನಗರ ನಿವಾಸಿಗಳಾಗಿದ್ದಾರೆ.
ಹಲವಾರು ವರ್ಷಗಳಿಂದ ಮೈಸೂರಿನ ಹೆಬ್ಬಾಳು ಮತ್ತು ದೇವಯ್ಯನಹುಂಡಿಯಲ್ಲಿ ವಾಸವಾಗಿದ್ದರು.
ಗಾರೆ ಕೆಲಸ, ಸೆಕ್ಯೂರಿಟಿ ಕೆಲಸ ಮಾಡುತ್ತಲೇ ಸರಗಳ್ಳತನದಲ್ಲೂ ಭಾಗಿಯಾಗಿದ್ದರು.
50 ಲಕ್ಷ ಮೌಲ್ಯದ, 1 ಕೆ ಜಿ ತೂಕದಷ್ಟು 25 ಚಿನ್ನದ ಸರಗಳು ಹಾಗೂ ಇತರೇ ಚಿನ್ನಾಭರಣಗಳನ್ನ ವಶಪಡಿಸಿಕೊಳ್ಳಲಾಗಿದೆ.ಕಳವು ಮಾಡಿದ್ದ 2 ದ್ವಿಚಕ್ರ ವಾಹನ ಸೇರಿದಂತೆ ಸರಗಳ್ಳತ‌ನಕ್ಕೆ ಬಳಸಿದ್ದ ಒಟ್ಟು 7 ದ್ವಿಚಕ್ರ ವಾಹನಗಳನ್ನ ವಶ ಪಡಿಸಿಕೊಳ್ಳಲಾಗಿದೆ.
ಬಂಧಿತ ಆರೋಪಿಗಳ ಪೈಕಿ 1ನೇ ಆರೋಪಿ ಈ ಮೊದಲು ಸಹ 27 ಪ್ರಕರಣಗಳಲ್ಲಿ ಭಾಗಿಯಾಗಿದ್ದ.
2 ನೇ ಆರೋಪಿ 4 ಸರಗಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ.
ಇಬ್ಬರು ಆರೋಪಿಗಳು ವೃತ್ತಿನಿರತ ಸರಗಳ್ಳರಾಗಿದ್ದಾರೆ.
ಜೈಲುವಾಸ ಅನುಭವಿಸಿ ಹೊರ ಬಂದನಂತರವೂ ತಮ್ಮ ಹಳೆಯ ಚಾಳಿ ಮುಂದುವರಿಸಿರುವುದು ತನಿಖೆಯಲ್ಲಿ ತಿಳಿದು ಬಂದಿದೆ.
ಈ ಕುರಿತು ಮೈಸೂರು ನಗರ ಪೊಲೀಸ್ ಆಯುಕ್ತ ಡಾ ಚಂದ್ರಗುಪ್ತ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.ಪತ್ತೆಯಾದ ಆಭರಣಗಳನ್ನ ವಾರಸುದಾರರಿಗೆ ಕೊಡುವ ಪ್ರಕ್ರಿಯೆ ನಡೆದಿದೆ…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *