ಸಿಸಿಬಿ ಪೊಲೀಸರ ಭರ್ಜರಿ ಬೇಟೆ…10 ಮಂದಿ ಸರಗಳ್ಳರ ಬಂಧನ…50 ಲಕ್ಷ ಮೌಲ್ಯದ ಚಿನ್ನಾಭರಣ ವಶ…

ಸಿಸಿಬಿ ಪೊಲೀಸರ ಭರ್ಜರಿ ಬೇಟೆ…10 ಮಂದಿ ಸರಗಳ್ಳರ ಬಂಧನ…50 ಲಕ್ಷ ಮೌಲ್ಯದ ಚಿನ್ನಾಭರಣ ವಶ…

  • CrimeNews
  • September 30, 2022
  • No Comment
  • 252

ಸಿಸಿಬಿ ಪೊಲೀಸರ ಭರ್ಜರಿ ಬೇಟೆ…10 ಮಂದಿ ಸರಗಳ್ಳರ ಬಂಧನ…50 ಲಕ್ಷ ಮೌಲ್ಯದ ಚಿನ್ನಾಭರಣ ವಶ…

ಮೈಸೂರು,ಸೆ30,Tv10 ಕನ್ನಡ :
ಮೈಸೂರು ಸಿಸಿಬಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ.
ಮೈಸೂರು-ಚಾಮರಾಜನಗರ ಜಿಲ್ಲೆಗಳ ವ್ಯಾಪ್ತಿಯಲ್ಲಿ ನಡೆದಿದ್ದ 25 ಸರಗಳ್ಳತನ ಪ್ರಕರಣಗಳನ್ನ ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.ಪ್ರಕರಣಗಳಿಗೆ ಸಂಭಂಧಿಸಿದಂತೆ
10 ಮಂದಿ ಕುಖ್ಯಾತ ಸರಗಳ್ಳರ ಬಂಧಿಸಿದ್ದಾರೆ.
ಈ ಪೈಕಿ ಇಬ್ಬರು ಕಾನೂನು ಸಂಘರ್ಷಕ್ಕೊಳಗಾದ ಬಾಲಕರು ಸಹ ಇದ್ದಾರೆ.
6 ಮಂದಿ ಆರೋಪಿಗಳು ಪರಸ್ಪರ ರಕ್ತ ಸಂಬಂಧಿಗಳಾಗಿದ್ದಾರೆ.
ರಕ್ತ ಸಂಬಂಧಿಗಳಾಗಿರುವ 6 ಆರೋಪಿಗಳು ಮೂಲತಃ ಚಾಮರಾಜನಗರ ನಿವಾಸಿಗಳಾಗಿದ್ದಾರೆ.
ಹಲವಾರು ವರ್ಷಗಳಿಂದ ಮೈಸೂರಿನ ಹೆಬ್ಬಾಳು ಮತ್ತು ದೇವಯ್ಯನಹುಂಡಿಯಲ್ಲಿ ವಾಸವಾಗಿದ್ದರು.
ಗಾರೆ ಕೆಲಸ, ಸೆಕ್ಯೂರಿಟಿ ಕೆಲಸ ಮಾಡುತ್ತಲೇ ಸರಗಳ್ಳತನದಲ್ಲೂ ಭಾಗಿಯಾಗಿದ್ದರು.
50 ಲಕ್ಷ ಮೌಲ್ಯದ, 1 ಕೆ ಜಿ ತೂಕದಷ್ಟು 25 ಚಿನ್ನದ ಸರಗಳು ಹಾಗೂ ಇತರೇ ಚಿನ್ನಾಭರಣಗಳನ್ನ ವಶಪಡಿಸಿಕೊಳ್ಳಲಾಗಿದೆ.ಕಳವು ಮಾಡಿದ್ದ 2 ದ್ವಿಚಕ್ರ ವಾಹನ ಸೇರಿದಂತೆ ಸರಗಳ್ಳತ‌ನಕ್ಕೆ ಬಳಸಿದ್ದ ಒಟ್ಟು 7 ದ್ವಿಚಕ್ರ ವಾಹನಗಳನ್ನ ವಶ ಪಡಿಸಿಕೊಳ್ಳಲಾಗಿದೆ.
ಬಂಧಿತ ಆರೋಪಿಗಳ ಪೈಕಿ 1ನೇ ಆರೋಪಿ ಈ ಮೊದಲು ಸಹ 27 ಪ್ರಕರಣಗಳಲ್ಲಿ ಭಾಗಿಯಾಗಿದ್ದ.
2 ನೇ ಆರೋಪಿ 4 ಸರಗಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ.
ಇಬ್ಬರು ಆರೋಪಿಗಳು ವೃತ್ತಿನಿರತ ಸರಗಳ್ಳರಾಗಿದ್ದಾರೆ.
ಜೈಲುವಾಸ ಅನುಭವಿಸಿ ಹೊರ ಬಂದನಂತರವೂ ತಮ್ಮ ಹಳೆಯ ಚಾಳಿ ಮುಂದುವರಿಸಿರುವುದು ತನಿಖೆಯಲ್ಲಿ ತಿಳಿದು ಬಂದಿದೆ.
ಈ ಕುರಿತು ಮೈಸೂರು ನಗರ ಪೊಲೀಸ್ ಆಯುಕ್ತ ಡಾ ಚಂದ್ರಗುಪ್ತ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.ಪತ್ತೆಯಾದ ಆಭರಣಗಳನ್ನ ವಾರಸುದಾರರಿಗೆ ಕೊಡುವ ಪ್ರಕ್ರಿಯೆ ನಡೆದಿದೆ…

Spread the love

Related post

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…
ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು… ಮಂಡ್ಯ,ಜ21,Tv10 ಕನ್ನಡಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ಕಾಲುಜಾರಿ ನೀರುಪಾಲಾದ ಘಟನೆ ಕೆ.ಆರ್.ಪೇಟೆ ತಾಲೂಕಿನ ಅಂಚೆಬೀರನಹಳ್ಳಿಯಲ್ಲಿ ನಡೆದಿದೆ.ಆನೆಗೋಳ ಗ್ರಾಮದ ರೈತ…
ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ… ಮೈಸೂರು,ಜ19,Tv10 ಕನ್ನಡ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯನವರ ಮಹತ್ತರ ಯೋಜನೆಯ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಗ್ರೀನ್…

Leave a Reply

Your email address will not be published. Required fields are marked *