ಸಿಸಿಬಿ ಪೊಲೀಸರ ಭರ್ಜರಿ ಬೇಟೆ…10 ಮಂದಿ ಸರಗಳ್ಳರ ಬಂಧನ…50 ಲಕ್ಷ ಮೌಲ್ಯದ ಚಿನ್ನಾಭರಣ ವಶ…

ಸಿಸಿಬಿ ಪೊಲೀಸರ ಭರ್ಜರಿ ಬೇಟೆ…10 ಮಂದಿ ಸರಗಳ್ಳರ ಬಂಧನ…50 ಲಕ್ಷ ಮೌಲ್ಯದ ಚಿನ್ನಾಭರಣ ವಶ…

  • CrimeNews
  • September 30, 2022
  • No Comment
  • 239

ಸಿಸಿಬಿ ಪೊಲೀಸರ ಭರ್ಜರಿ ಬೇಟೆ…10 ಮಂದಿ ಸರಗಳ್ಳರ ಬಂಧನ…50 ಲಕ್ಷ ಮೌಲ್ಯದ ಚಿನ್ನಾಭರಣ ವಶ…

ಮೈಸೂರು,ಸೆ30,Tv10 ಕನ್ನಡ :
ಮೈಸೂರು ಸಿಸಿಬಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ.
ಮೈಸೂರು-ಚಾಮರಾಜನಗರ ಜಿಲ್ಲೆಗಳ ವ್ಯಾಪ್ತಿಯಲ್ಲಿ ನಡೆದಿದ್ದ 25 ಸರಗಳ್ಳತನ ಪ್ರಕರಣಗಳನ್ನ ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.ಪ್ರಕರಣಗಳಿಗೆ ಸಂಭಂಧಿಸಿದಂತೆ
10 ಮಂದಿ ಕುಖ್ಯಾತ ಸರಗಳ್ಳರ ಬಂಧಿಸಿದ್ದಾರೆ.
ಈ ಪೈಕಿ ಇಬ್ಬರು ಕಾನೂನು ಸಂಘರ್ಷಕ್ಕೊಳಗಾದ ಬಾಲಕರು ಸಹ ಇದ್ದಾರೆ.
6 ಮಂದಿ ಆರೋಪಿಗಳು ಪರಸ್ಪರ ರಕ್ತ ಸಂಬಂಧಿಗಳಾಗಿದ್ದಾರೆ.
ರಕ್ತ ಸಂಬಂಧಿಗಳಾಗಿರುವ 6 ಆರೋಪಿಗಳು ಮೂಲತಃ ಚಾಮರಾಜನಗರ ನಿವಾಸಿಗಳಾಗಿದ್ದಾರೆ.
ಹಲವಾರು ವರ್ಷಗಳಿಂದ ಮೈಸೂರಿನ ಹೆಬ್ಬಾಳು ಮತ್ತು ದೇವಯ್ಯನಹುಂಡಿಯಲ್ಲಿ ವಾಸವಾಗಿದ್ದರು.
ಗಾರೆ ಕೆಲಸ, ಸೆಕ್ಯೂರಿಟಿ ಕೆಲಸ ಮಾಡುತ್ತಲೇ ಸರಗಳ್ಳತನದಲ್ಲೂ ಭಾಗಿಯಾಗಿದ್ದರು.
50 ಲಕ್ಷ ಮೌಲ್ಯದ, 1 ಕೆ ಜಿ ತೂಕದಷ್ಟು 25 ಚಿನ್ನದ ಸರಗಳು ಹಾಗೂ ಇತರೇ ಚಿನ್ನಾಭರಣಗಳನ್ನ ವಶಪಡಿಸಿಕೊಳ್ಳಲಾಗಿದೆ.ಕಳವು ಮಾಡಿದ್ದ 2 ದ್ವಿಚಕ್ರ ವಾಹನ ಸೇರಿದಂತೆ ಸರಗಳ್ಳತ‌ನಕ್ಕೆ ಬಳಸಿದ್ದ ಒಟ್ಟು 7 ದ್ವಿಚಕ್ರ ವಾಹನಗಳನ್ನ ವಶ ಪಡಿಸಿಕೊಳ್ಳಲಾಗಿದೆ.
ಬಂಧಿತ ಆರೋಪಿಗಳ ಪೈಕಿ 1ನೇ ಆರೋಪಿ ಈ ಮೊದಲು ಸಹ 27 ಪ್ರಕರಣಗಳಲ್ಲಿ ಭಾಗಿಯಾಗಿದ್ದ.
2 ನೇ ಆರೋಪಿ 4 ಸರಗಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ.
ಇಬ್ಬರು ಆರೋಪಿಗಳು ವೃತ್ತಿನಿರತ ಸರಗಳ್ಳರಾಗಿದ್ದಾರೆ.
ಜೈಲುವಾಸ ಅನುಭವಿಸಿ ಹೊರ ಬಂದನಂತರವೂ ತಮ್ಮ ಹಳೆಯ ಚಾಳಿ ಮುಂದುವರಿಸಿರುವುದು ತನಿಖೆಯಲ್ಲಿ ತಿಳಿದು ಬಂದಿದೆ.
ಈ ಕುರಿತು ಮೈಸೂರು ನಗರ ಪೊಲೀಸ್ ಆಯುಕ್ತ ಡಾ ಚಂದ್ರಗುಪ್ತ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.ಪತ್ತೆಯಾದ ಆಭರಣಗಳನ್ನ ವಾರಸುದಾರರಿಗೆ ಕೊಡುವ ಪ್ರಕ್ರಿಯೆ ನಡೆದಿದೆ…

Spread the love

Related post

ಮಾಧ್ಯಮದವರ ಜೊತೆ ರಿಷಬ್ ಶೆಟ್ಟಿ ಸೆಲ್ಫಿ…

ಮಾಧ್ಯಮದವರ ಜೊತೆ ರಿಷಬ್ ಶೆಟ್ಟಿ ಸೆಲ್ಫಿ…

ಮಾಧ್ಯಮದವರ ಜೊತೆ ರಿಷಬ್ ಶೆಟ್ಟಿ ಸೆಲ್ಫಿ… ಮೈಸೂರು,ಅ16,Tv10 ಕನ್ನಡ ಮಾಧ್ಯಮದ ಗೆಳೆಯರ ಜೊತೆ ರಿಷಬ್ ಶೆಟ್ಟಿ ಸೆಲ್ಫಿ ಕ್ಲಿಕ್ಕಿಸಿದ್ದಾರೆ.ಚಾಮುಂಡಿ ಬೆಟ್ಟಕ್ಕೆ ಭೇಟಿ‌ ನೀಡಿದ ವೇಳೆತಾವೇ ಮೊಬೈಲ್ ಪಡೆದು ಸೆಲ್ಫಿ…
ಉಪ ಪ್ರಾಂಶುಪಾಲರಾಗಿ ನೇಮಕ ಮಾಡುವ ಆಮಿಷ…7.45 ಲಕ್ಷ ವಂಚನೆ…ಸಿಎಆರ್ ಮುಖ್ಯಪೇದೆ,ಪತ್ನಿ ಸೇರಿದಂತೆ 7 ಮಂದಿ ವಿರುದ್ದ FIR…

ಉಪ ಪ್ರಾಂಶುಪಾಲರಾಗಿ ನೇಮಕ ಮಾಡುವ ಆಮಿಷ…7.45 ಲಕ್ಷ ವಂಚನೆ…ಸಿಎಆರ್ ಮುಖ್ಯಪೇದೆ,ಪತ್ನಿ ಸೇರಿದಂತೆ…

ಮೈಸೂರು,ಅ16,Tv10 ಕನ್ನಡ ಪಿಯು ಕಾಲೇಜಿಗೆ ಉಪ ಪ್ರಾಂಶುಪಾಲರಾಗಿ ಹಾಗೂ ಟ್ರಸ್ಟ್ ಗೆ ಟ್ರಸ್ಟಿಯಾಗಿ ನೇಮಕ ಮಾಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಗೆ ಸಿಎಆರ್ ಮುಖ್ಯಪೇದೆ ಹಾಗೂ ಪತ್ನಿ 7.45 ಲಕ್ಷ ವಂಚಿಸಿದ…
ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…

Leave a Reply

Your email address will not be published. Required fields are marked *