ಸಿಸಿಬಿ ಪೊಲೀಸರ ಭರ್ಜರಿ ಬೇಟೆ…10 ಮಂದಿ ಸರಗಳ್ಳರ ಬಂಧನ…50 ಲಕ್ಷ ಮೌಲ್ಯದ ಚಿನ್ನಾಭರಣ ವಶ…

ಸಿಸಿಬಿ ಪೊಲೀಸರ ಭರ್ಜರಿ ಬೇಟೆ…10 ಮಂದಿ ಸರಗಳ್ಳರ ಬಂಧನ…50 ಲಕ್ಷ ಮೌಲ್ಯದ ಚಿನ್ನಾಭರಣ ವಶ…

  • CrimeNews
  • September 30, 2022
  • No Comment
  • 261

ಸಿಸಿಬಿ ಪೊಲೀಸರ ಭರ್ಜರಿ ಬೇಟೆ…10 ಮಂದಿ ಸರಗಳ್ಳರ ಬಂಧನ…50 ಲಕ್ಷ ಮೌಲ್ಯದ ಚಿನ್ನಾಭರಣ ವಶ…

ಮೈಸೂರು,ಸೆ30,Tv10 ಕನ್ನಡ :
ಮೈಸೂರು ಸಿಸಿಬಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ.
ಮೈಸೂರು-ಚಾಮರಾಜನಗರ ಜಿಲ್ಲೆಗಳ ವ್ಯಾಪ್ತಿಯಲ್ಲಿ ನಡೆದಿದ್ದ 25 ಸರಗಳ್ಳತನ ಪ್ರಕರಣಗಳನ್ನ ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.ಪ್ರಕರಣಗಳಿಗೆ ಸಂಭಂಧಿಸಿದಂತೆ
10 ಮಂದಿ ಕುಖ್ಯಾತ ಸರಗಳ್ಳರ ಬಂಧಿಸಿದ್ದಾರೆ.
ಈ ಪೈಕಿ ಇಬ್ಬರು ಕಾನೂನು ಸಂಘರ್ಷಕ್ಕೊಳಗಾದ ಬಾಲಕರು ಸಹ ಇದ್ದಾರೆ.
6 ಮಂದಿ ಆರೋಪಿಗಳು ಪರಸ್ಪರ ರಕ್ತ ಸಂಬಂಧಿಗಳಾಗಿದ್ದಾರೆ.
ರಕ್ತ ಸಂಬಂಧಿಗಳಾಗಿರುವ 6 ಆರೋಪಿಗಳು ಮೂಲತಃ ಚಾಮರಾಜನಗರ ನಿವಾಸಿಗಳಾಗಿದ್ದಾರೆ.
ಹಲವಾರು ವರ್ಷಗಳಿಂದ ಮೈಸೂರಿನ ಹೆಬ್ಬಾಳು ಮತ್ತು ದೇವಯ್ಯನಹುಂಡಿಯಲ್ಲಿ ವಾಸವಾಗಿದ್ದರು.
ಗಾರೆ ಕೆಲಸ, ಸೆಕ್ಯೂರಿಟಿ ಕೆಲಸ ಮಾಡುತ್ತಲೇ ಸರಗಳ್ಳತನದಲ್ಲೂ ಭಾಗಿಯಾಗಿದ್ದರು.
50 ಲಕ್ಷ ಮೌಲ್ಯದ, 1 ಕೆ ಜಿ ತೂಕದಷ್ಟು 25 ಚಿನ್ನದ ಸರಗಳು ಹಾಗೂ ಇತರೇ ಚಿನ್ನಾಭರಣಗಳನ್ನ ವಶಪಡಿಸಿಕೊಳ್ಳಲಾಗಿದೆ.ಕಳವು ಮಾಡಿದ್ದ 2 ದ್ವಿಚಕ್ರ ವಾಹನ ಸೇರಿದಂತೆ ಸರಗಳ್ಳತ‌ನಕ್ಕೆ ಬಳಸಿದ್ದ ಒಟ್ಟು 7 ದ್ವಿಚಕ್ರ ವಾಹನಗಳನ್ನ ವಶ ಪಡಿಸಿಕೊಳ್ಳಲಾಗಿದೆ.
ಬಂಧಿತ ಆರೋಪಿಗಳ ಪೈಕಿ 1ನೇ ಆರೋಪಿ ಈ ಮೊದಲು ಸಹ 27 ಪ್ರಕರಣಗಳಲ್ಲಿ ಭಾಗಿಯಾಗಿದ್ದ.
2 ನೇ ಆರೋಪಿ 4 ಸರಗಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ.
ಇಬ್ಬರು ಆರೋಪಿಗಳು ವೃತ್ತಿನಿರತ ಸರಗಳ್ಳರಾಗಿದ್ದಾರೆ.
ಜೈಲುವಾಸ ಅನುಭವಿಸಿ ಹೊರ ಬಂದನಂತರವೂ ತಮ್ಮ ಹಳೆಯ ಚಾಳಿ ಮುಂದುವರಿಸಿರುವುದು ತನಿಖೆಯಲ್ಲಿ ತಿಳಿದು ಬಂದಿದೆ.
ಈ ಕುರಿತು ಮೈಸೂರು ನಗರ ಪೊಲೀಸ್ ಆಯುಕ್ತ ಡಾ ಚಂದ್ರಗುಪ್ತ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.ಪತ್ತೆಯಾದ ಆಭರಣಗಳನ್ನ ವಾರಸುದಾರರಿಗೆ ಕೊಡುವ ಪ್ರಕ್ರಿಯೆ ನಡೆದಿದೆ…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *