ದಸರಾ ಸಂಭ್ರಮ…ಸಚಿವ ಎಸ್.ಟಿ.ಸೋಮಶೇಖರ್ ರಿಂದ ಮಕ್ಕಳ ಚಿತ್ರಕಲಾ ಸ್ಪರ್ಧೆ,ಕರಕುಶಲ ಪ್ರಾತ್ಯಕ್ಷಿಕೆ ಉದ್ಘಾಟನೆ…

ದಸರಾ ಸಂಭ್ರಮ…ಸಚಿವ ಎಸ್.ಟಿ.ಸೋಮಶೇಖರ್ ರಿಂದ ಮಕ್ಕಳ ಚಿತ್ರಕಲಾ ಸ್ಪರ್ಧೆ,ಕರಕುಶಲ ಪ್ರಾತ್ಯಕ್ಷಿಕೆ ಉದ್ಘಾಟನೆ…

ದಸರಾ ಸಂಭ್ರಮ…ಸಚಿವ ಎಸ್.ಟಿ.ಸೋಮಶೇಖರ್ ರಿಂದ ಮಕ್ಕಳ ಚಿತ್ರಕಲಾ ಸ್ಪರ್ಧೆ,ಕರಕುಶಲ ಪ್ರಾತ್ಯಕ್ಷಿಕೆ ಉದ್ಘಾಟನೆ…

ಮೈಸೂರು,ಅ1,Tv10 ಕನ್ನಡ
ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಲಲಿತಕಲೆ ಮತ್ತು ಕರಕುಶಲ ಉಪ ಸಮಿತಿ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ‘’ಕರಕುಶಲ ಪ್ರಾತ್ಯಕ್ಷಿಕೆ ಮತ್ತು ಮಕ್ಕಳ ಚಿತ್ರಕಲಾ ಸ್ಪರ್ಧೆ’’ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಉದ್ಘಾಟಿಸಿದರು.
ಮಕ್ಕಳ ಪ್ರತಿಭೆಯನ್ನು ಗುರುತಿಸುವುದಕ್ಕೆ ದಸರಾ ಚಿತ್ರಕಲಾ ಪ್ರದರ್ಶನವು ಉತ್ತಮ ವೇದಿಕೆಯಾಗಿದೆ. ಪೋಷಕರು ಹಾಗೂ ಶಿಕ್ಷಕರಿಗೂ ಮಕ್ಕಳ ಚಿತ್ರಕಲಾ ಪ್ರದರ್ಶನವು ಸಂತೋಷನ್ನುಂಟು ಮಾಡಲಿದೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.
ಚಿತ್ರಕಲಾ ಸ್ಪರ್ಧೆಯಲ್ಲಿ ಸುಮಾರು 300ಕ್ಕೂ ಹೆಚ್ಚು ಮಕ್ಕಳು ಉತ್ಸಾಹದಿಂದ ಭಾಗವಹಿಸಿದ್ದರು. 1 ರಿಂದ 4 ವಯೋಮಿತಿ ಗೆ(ಪ್ರಾಣಿ,ಪಕ್ಷಿ,ಪರಿಸರ)5-7ರವರೆಗೆ(ಮೈಸೂರಿನ ಸುಂದರ ತಾಣಗಳು,ಸ್ಮಾರಕಗಳು, ಸಾಧಕರು),8-10ರವರೆಗೆ(75ನೇ ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವ)ಹೀಗೆ ಮೂರು ವಿಭಾಗದಲ್ಲಿ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಬಳಿಕ ಕಲಾಮಂದಿರ ಆವರಣದಲ್ಲಿ ಆಯೋಜಿಸಿದ್ದ ಕಿನ್ನಾಳ ಕಲೆ, ಕೌದಿ ಮತ್ತು ಕಸೂತಿ ಕಲೆ, ಕುಂಬಾರಿಕೆ, ಇನ್ಲೆ ಕಲೆ ಚರಕದಿಂದ ನೂಲುವಿಕೆ, ಕೈಮಗ್ಗದ ನೇಕಾರಿಕೆ, ವರ್ಲಿ ಕಲೆ, ಚನ್ನಪಟ್ಟಣ ಗೊಂಬೆ ತಯಾರಿಕೆ, ಬಿದಿರು ಬೆತ್ತದ ಬುಟ್ಟಿ ಹೆಣಿಗೆ, ಮದರಂಗಿ ಕಲೆ, ವ್ಯಂಗ್ಯ ಚಿತ್ರಕಲೆ, ಸೂಕ್ಷ್ಮ ಕಲೆ ಪ್ರದರ್ಶನ ಕರಕುಶಲ ಪ್ರಾತ್ಯಕ್ಷಿಕೆ ಮಳಿಗೆಗಳನ್ನು ಜಿಲ್ಲಾ ಉಸ್ತುವಾರಿ ಸಚಿವರು ಉದ್ಘಾಟಿಸಿದರು. ಮಳಿಗೆಗಳಿಗೆ ಭೇಟಿ ನೀಡಿ, ಚರಕದಿಂದ ತಯಾರಿಸಿದ 23 ಟವೆಲ್‌ಗಳು ಸೇರಿದಂತೆ ಗೊಂಬೆಗಳು, ಮಣ್ಣಿನ ದೀಪಗಳು, ಬಿದಿರಿನಿಂದ ತಯಾರಿಸಿದ ಕೀ ಬಂಚ್‌ಗಳನ್ನು ಖರೀದಿಸಿ ಸಮಿತಿಯ ಸದಸ್ಯರಿಗೆ ಉಡುಗೊರೆಯಾಗಿ ನೀಡಿದರು.

ಈ ಸಂದರ್ಭ ಜಿಲ್ಲಾಧಿಕಾರಿಗಳಾದ ಡಾ.ಬಗಾದಿ ಗೌತಮ್, ಲಲಿತಕಲೆ ಮತ್ತು ಕರಕುಶಲ ಉಪ ಸಮಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು…

Spread the love

Related post

ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ ಮಹಿಳೆ ಮೇಲೆ FIR…

ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ…

ಮೈಸೂರು,ಜು6,Tv10 ಕನ್ನಡ ಖಾಸಗಿ ಕಂಪನಿ ಉದ್ಯೋಗಿ ಬಗ್ಗೆ ಅಸಭ್ಯ ಹಾಗೂ ಅಶ್ಲೀಲವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಮಹಿಳೆಯೊಬ್ಬರ ಮೇಲೆ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕ್ರಾಪಿನ್ ಕಂಪನಿಗೆ ಸೇರಿದ…
ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ… ಮೈಸೂರು,ಜು6,Tv10 ಕನ್ನಡ ಹುಚ್ಚುನಾಯಿ ಕಡಿತದಿಂದ ಮೃತಪಟ್ಟ ಮಹಾಲಿಂಗೇಶ್ವರ ದೇವಸ್ಥಾನದ ಬಸವನಿಗೆ ಮೇಟಗಳ್ಳಿ ಗ್ರಾಮಸ್ಥರು ಶ್ರದ್ದಾಂಜಲಿ ಅರ್ಪಿಸಿದ್ದಾರೆ.ಕೆಲವು…
ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ ಕ್ಯಾಮರ ಕಣ್ಣಿಗೆ ಸೆರೆಯಾದ ವ್ಯಾಘ್ರ…

ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ…

ನಂಜನಗೂಡು,ಜು4,Tv10 ಕನ್ನಡ ಒಂದೇ ದಿನ ಮೂರು ಹಸುಗಳ ಮೇಲೆ ದಾಳಿ ಮಾಡಿದ ವ್ಯಾಘ್ರ ಒಂದು ಸಾವನ್ನಪ್ಪಿದ್ದು ಎರಡು ಹಸುಗಳು ಗಾಯಗೊಂಡ ಘಟನೆ ನಂಜನಗೂಡು ತಾಲೂಕು ಮಡುವಿನಹಳ್ಳಿ ಗ್ರಾಮದಲ್ಲಿ ನಡೆದಿದೆ.ಘಟನೆಯಿಂದ…

Leave a Reply

Your email address will not be published. Required fields are marked *